ಆರ್‌ಎಸ್‌ಎಸ್ ವಿರುದ್ಧ ಬೇಕಾಬಿಟ್ಟಿ ಮಾತನಾಡಿಯೇ ಕಾಂಗ್ರೆಸ್ ಈಗ ಜನರಿಂದ ದೂರ: ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಆರ್ ಎಸ್‌ಎಸ್ ವಿರುದ್ಧ ಮಾತನಾಡುವುದೇ ಕಾಂಗ್ರೆಸ್ ಕೆಲಸವಾಗಿದೆ. ಈಗ ರಾಜ್ಯದಲ್ಲಿ ಸಿದ್ದರಾಮಯ್ಯ ಅದನ್ನೇ ಮಾಡುತ್ತಿದ್ದಾರೆಹೀಗೆ ಟೀಕೆ ಮಾಡಿಯೇ ದೇಶದಲ್ಲಿ ಕಾಂಗ್ರೆಸ್ ಜನರಿಂದ ದೂರವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಇಲ್ಲಿನ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 75 ವರ್ಷದಿಂದ ರಾಷ್ಟ್ರೀಯ ಸ್ವಯಂ ಸೇವಕ ಸಂಘ ದೇಶಭಕ್ತಿ ಮತ್ತು ಜನರ ಸೇವೆ ಮಾಡಿಕೊಂಡು ಬಂದಿದೆ. ಅವಘಡಗಳಾದಾಗ, ಜನ ಸಂಕಷ್ಟದಲ್ಲಿದ್ದಾಗ, ಸರ್ಕಾರವೂ ಗಮನ ಹರಿಸದಿದ್ದಾಗ ಆರ್ ಎಸ್‌ಎಸ್ ಸ್ಪಂದಿಸಿದೆ. ಆದರೆ ಕಾಂಗ್ರೆಸ್‌ನವರು ಕೇವಲ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಸಂಘವನ್ನು ಟೀಕಿಸುತ್ತಿದ್ದಾರೆ ೆಂದು ಬೊಮ್ಮಾಯಿ ಟೀಕಿಸಿದರು.
ಹೀಗೆ ವಿನಾಕಾರಣ ಟೀಕೆ ಮಾಡಿ ಈಗಾಗಲೇ ದೇಶದಲ್ಲಿ ಕಾಂಗ್ರೆಸ್ ಇಲ್ಲಂದತಾಗಿದೆ. ರಾಜಕೀಯ ಟೀಕೆಗಳಿಗಾಗಿ ದೇಶಭಕ್ತಿ ಸಂಘಟನೆ ಬಗ್ಗೆ ಸಿದ್ಧರಾಮಯ್ಯ ಹಗುರವಾಗಿ ಮಾತನಾಡುರೆ. ಇಲ್ಲಿಯೂ ಕೂಡ ಕಾಂಗ್ರೆಸ್ ಹೆಸರು ಹೇಳದಂತಹ ಮಟ್ಟಕ್ಕೆ ಹೋಗಲಿದೆ ಎಂದು ಹೇಳಿದರು.
ಪಠ್ಯ ಪುಸಕ್ತದ ವಿಷಯದಲ್ಲೂ ಕಾಂಗ್ರೆಸ್‌ನವರು ರಾಜಕೀಯ ಮಾಡುತ್ತಿದ್ದಾರೆ. ಶಿಕ್ಷಣ ಸಚಿವರು ಈಗಾಗಲೇ ಆ ಕುರಿತು ಉತ್ತರ ಕೊಟ್ಟಿದ್ದಾರೆ ಎಂದರು.

ಪ್ರಮುಖ ಸುದ್ದಿ :-   ಮತಗಟ್ಟೆ ಬಳಿ ಮಹಿಳೆಗೆ ಹೃದಯಾಘಾತ ; ತಕ್ಷಣವೇ ಸಿಪಿಆರ್‌ ಮಾಡಿ ಜೀವ ಉಳಿಸಿದ ಮತದಾನ ಮಾಡಲು ಬಂದಿದ್ದ ವೈದ್ಯ

ರಾಜ್ಯಸಭೆ ಚುನಾವಣೆಯಲ್ಲಿ ಕ್ರಾಸ್ ವೋಟಿಂಗ್ ವಿಚಾರದ ಕುರಿತು ಗೊತ್ತಾಗಬೇಕಾದರೆ ಜೂನ್ 10ರವರೆಗೆ ಕಾಯಬೇಕು ಎಂದು ಪ್ರಶ್ನೆಯೊಂದಕ್ಕೆ ಮಾರ್ಮಿಕವಾಘಿ ಉತ್ತರಿಸಿದರು.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement