ಬೇಕಾದ ಹಾಗೆ ಮಾತಾಡುವ ಹಿಜಾಬ್ ವಿದ್ಯಾರ್ಥಿನಿಯರು ಒಮ್ಮೆ ವಿದೇಶಕ್ಕೆ ಹೋಗಿ ಬರಲಿ, ಆಗ ನಮ್ಮ ದೇಶದ ಮಹತ್ವ ಗೊತ್ತಾಗ್ತದೆ: ತಿರುಗೇಟು ನೀಡಿದ ಯು.ಟಿ.ಖಾದರ್

posted in: ರಾಜ್ಯ | 0

ಮಂಗಳೂರು:  ತಮಗೆ ಬೇಕಾದ ಹಾಗೆ  ಮಾತನಾಡುವ ಹಿಜಾಬ್‌ ವಿದ್ಯಾರ್ಥಿನಿಯರು ಒಮ್ಮೆ ವಿದೇಶಕ್ಕೆ ಹೋಗಿ ಬರಲಿ, ಆಗ ಅವರಿಗೆ ನಮ್ಮ ದೇಶದಲ್ಲಿ ಸಿಗುವ ಸ್ವಾತಂತ್ರ್ಯ ಹಾಗೂ ದೇಶದ ಮಹತ್ವ ಗೊತ್ತಾಗುತ್ತದೆ ಎಂದು ವಿಧಾನಸಭೆ ವಿಪಕ್ಷ ಉಪನಾಯಕ ಯು.ಟಿ.ಖಾದರ್ ಹಿಜಾಬ್ ವಿದ್ಯಾರ್ಥಿನಿಯರಿಗೆ ತಿರುಗೇಟು ನೀಡಿದ್ದಾರೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಿಜಾಬ್‌ ವಿದ್ಯಾರ್ಥಿನಿಯರು ಒಮ್ಮೆ ವಿದೇಶಕ್ಕೆ ಹೋಗಲಿ, ಪಾಕಿಸ್ತಾನ, ಸೌದಿಯಂತಹ ದೇಶಗಳಿಗೆ ಹೋಗಲಿ. ಆಗ ಅವರಿಗೆ ನಮ್ಮ ದೇಶದ ಮಹತ್ವ ಹಾಗೂ ಇಲ್ಲಿ ಸಿಗುವ ಸ್ವಾತಂತ್ರ್ಯ ಗೊತ್ತಾಗುತ್ತೆ ಎಂದು ಮಾರ್ಮಿಕವಾಗಿ ಹೇಳಿದ್ದಾರೆ.
ನಮ್ಮ ದೇಶದಲ್ಲಿ ಬೇಕಾದ ಹಾಗೆ ಮಾತನಾಡುವುದು, ಜಿಲ್ಲಾಧಿಕಾರಿಯನ್ನು ಭೇಟಿಯಾಗುತ್ತಾರೆ, ಪ್ರೆಸ್‌ಮೀಟ್‌ ಎಲ್ಲ ಮಾಡಬಹುದು. ಆದರೆ ಅವರು ಇದನ್ನೇ ವಿದೇಶಕ್ಕೆ ಹೋಗಿ ಮಾತನಾಡಲಿ. ಇಲ್ಲಿ ಹುಲಿಯ ಹಾಗೆ ಇದ್ದವರು ಅಲ್ಲಿ ಬೆಕ್ಕಿನ ತರಹ ಆಗುತ್ತಾರೆ. ನಮ್ಮ ದೇಶದ ಕಾನೂನು ನೀಡಿದ ಅವಕಾಶದ ಮಹತ್ವ ಆಗ ಅವರಿಗೆ ಗೊತ್ತಾಗುತ್ತದೆ. ಇಲ್ಲಿ ಸಿಗುವ ಸ್ವಾತಂತ್ರ್ಯದ ಅರಿವೂ ಆಗುತ್ತದೆ. ನಮಗೆ ಇಲ್ಲಿ ಎಲ್ಲ ವಿಷಯಕ್ಕೂ ಎಷ್ಟು ಸ್ವಾತಂತ್ರ್ಯವಿದೆ ಎಂಬುದು ಗೊತ್ತಾಗುತ್ತದೆ. ಇಂಥವರು ಒಮ್ಮೆ ಅಲ್ಲಿಗೆ ಹೋಗಿ ಬರಬೇಕು ಎಂದು ಹೇಳಿದ್ದಾರೆ.

ಇಂದಿನ ಪ್ರಮುಖ ಸುದ್ದಿ :-   ಕರ್ನಾಟಕ ವಿಧಾನಸಭೆ ಚುನಾವಣೆ 2023 : ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 2

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement