ಅಂಕೋಲಾ: ಮೀನು ಹಿಡಿಯುವಾಗ ಆಕಸ್ಮಿಕವಾಗಿ ನೀರಿಗೆ ಬಿದ್ದು ಮೀನುಗಾರ ಸಾವು

ಅಂಕೋಲಾ: ಸಾಂಪ್ರದಾಯಿಕ ಮೀನುಗಾರಿಕೆ ನಡೆಸುತ್ತಿದ್ದ ಮೀನುಗಾರ ಆಕಸ್ಮಿಕವಾಗಿ ನೀರಿನಲ್ಲಿ ಬಿದ್ದು ಮೃತ ಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಕೇಣಿ ಮಾಂಗಟೇಶ್ವರ ಗುಡ್ಡದ ಬಳಿ ನಡೆದ ಬಗ್ಗೆ ವರದಿಯಾಗಿದೆ.
ಮೃತ ವ್ಯಕ್ತಿಯನ್ನು ಗಾಬೀತ ಕೇಣಿ ನಿವಾಸಿ ಅಂಕುಶ ರಾಮದಾಸ ಅಂಕೋಲೆಕರ ಎಂದು ಗುರುತಿಸಲಾಗಿದೆ. ಈತ ಸೋಮವಾರ ಸಂಜೆ ಮಾಂಗಟೇಶ್ವರ ಗುಡ್ಡದ ಸಮೀಪ ಕೈ ಬಲೆ ಬೀಸುತ್ತಿದ್ದ ಸಂದರ್ಭದಲ್ಲಿ ಆಯ ತಪ್ಪಿ ಸಮುದ್ರದಲ್ಲಿ ಬಿದ್ದು ನೀರು ಪಾಲಾಗಿದ್ದ ಎಂದು ಹೇಳಲಾಗಿದೆ.

ಮಂಗಳವಾರ ಬೆಳಿಗ್ಗೆ ದೋಣಿಯ ಮೂಲಕ ಮೀನುಗಾರಿಕೆಗೆ ತೆರಳಿದ್ದ ಕೆಲವರು ಸಮುದ್ರದಲ್ಲಿ ಶವ ತೇಲುತ್ತಿರುವುದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ..ನಂತರ ಬೆಲೇಕೇರಿ ಕರಾವಳಿ ಕಾವಲು ಪಡೆ ಮತ್ತು ಅಂಕೋಲಾ ಪೊಲೀಸ್ ಠಾಣೆ ಸಿಬ್ಬಂದಿ ಆಗಮಿಸಿ ಸ್ಥಳೀಯರ ಸಹಕಾರದಿಂದ ಶವವನ್ನು ನೀರಿನಿಂದ ಮೇಲೆತ್ತಿದ್ದಾರೆ. ನಂತರ ಮರಣೋತ್ತರ ಪರೀಕ್ಷೆಗಾಗಿ. ತಾಲೂಕಾ ಆಸ್ಪತ್ರೆಗೆ ಕಳುಹಿಸಲಾಯಿತು.
ಅಂಕೋಲಾ ಪಿಎಸ್‌ಐ ಮಹಾಂತೇಶ ವಾಲ್ಮೀಕಿ, ಕರಾವಳಿ ಕಾವಲು ಪಡೆ ಸಿಬ್ಬಂದಿ ಮೋಹನದಾಸ ಶೇಣ್ವಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪ್ರಮುಖ ಸುದ್ದಿ :-   ೯೦ ವರ್ಷಗಳಿಂದ ಕನ್ನಡ ಪುಸ್ತಕಗಳನ್ನು ಪ್ರಕಟಿಸುತ್ತಿರುವ ಸಾಹಿತ್ಯ ಭಂಡಾರ ಪುಸ್ತಕ ಮಳಿಗೆಗೆ ಈಗ ನವೀಕರಣದ ಸಂಭ್ರಮ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement