ಮುಳಬಾಗಿಲು ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಜಗನ್ಮೋಹನ್‌ ರೆಡ್ಡಿ ಬರ್ಬರ ಹತ್ಯೆ

ಕೋಲಾರ: ದುಷ್ಕರ್ಮಿಗಳ ಗುಂಪೊಂದು ಕೋಲಾರ ಜಿಲ್ಲೆಯ ಮುಳಬಾಗಲು ನಗರ ಸಭೆ ಸ್ಥಾಯಿ ಸಮಿತಿ ಅಧ್ಯಕ್ಷನನ್ನು ಮಚ್ಚಿನಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಮುಳಬಾಗಲು ನಗರದ ಮುತ್ಯಾಲಪೇಟೆಯಲ್ಲಿ ನಡೆದಿದೆ.
ಜಗನ್ಮೋಹನ್ ರೆಡ್ಡಿ (45) ಕೊಲೆಯಾದ ನಗರಸಭೆ ಸದಸ್ಯ. ಈತ ಮಾಜಿ ಶಾಸಕ ಕೊತ್ತೂರು ಮಂಜುನಾಥ್ ಅವರ ಆಪ್ತ. ಸತತ ಎರಡನೇ ಬಾರಿ ಪಕ್ಷೇತರ ನಗರ ಸಭೆ ಸದಸ್ಯರಾಗಿ ಆಯ್ಕೆಯಾಗಿದ್ದರು. ರಾತ್ರಿ ಹೊತ್ತು ಮನೆಯಿಂದ ಹೊರಬಂದ ಜಗನ್ಮೋಹನ್​ ರೆಡ್ಡಿಗಾಗಿ ಹೊಂಚು ಹಾಕಿದ್ದ ನಾಲ್ಕೈದು ದುಷ್ಕರ್ಮಿಗಳು ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.

ಮುತ್ಯಾಲಪೇಟೆಯ ಅವರ ನಿವಾಸದ ಬಳಿ ಇರುವ ದೇಗುಲದ ಬಾಗಿಲು ತೆರೆಯುವಾಗ ಹೊರಗಡೆ ನಿಂತಿದ್ದ ಕೆಲ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಏಕಾಏಕಿ ದಾಳಿ ನಡೆಸಿರುವುದು ಗೊತ್ತಾಗಿದೆ. ಮಂಗಳವಾರ ಬೆಳಿಗ್ಗೆ 5:45ಕ್ಕೆ ಹತ್ಯೆ ನಡೆದಿದೆ ಎಂದು ಹೇಳಲಾಗಿದೆ. ಘಟನೆ ಸಂಬಂಧ ಪೊಲೀಸರು ಮಾಹಿತಿ ಕಲೆಹಾಕಲಾಗುತ್ತಿದ್ದಾರೆ.
ಘಟನಾ ಸ್ಥಳಕ್ಕೆ ಮುಳಬಾಗಲು ಡಿವೈಎಸ್​ಪಿ ಶ್ರೀನಿವಾಸಮೂರ್ತಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಳಬಾಗಲು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಪ್ರಮುಖ ಸುದ್ದಿ :-   ಮತಗಟ್ಟೆ ಬಳಿ ಮಹಿಳೆಗೆ ಹೃದಯಾಘಾತ ; ತಕ್ಷಣವೇ ಸಿಪಿಆರ್‌ ಮಾಡಿ ಜೀವ ಉಳಿಸಿದ ಮತದಾನ ಮಾಡಲು ಬಂದಿದ್ದ ವೈದ್ಯ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement