ಪ್ರಮೋದ ಮುತಾಲಿಕ್‌, ಯಶಪಾಲ್‌ ತಲೆ ಕಡಿದರೆ 20 ಲಕ್ಷ ರೂ.: ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಬೆದರಿಕೆ..!

ಉಡುಪಿ: ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ಹಾಗೂ ಯಶಪಾಲ್‌ ಸುವರ್ಣ ಅವರ ತಲೆ ಕಡಿದರೆ 20 ಲಕ್ಷ ರೂ.ಗಳನ್ನು ನೀಡುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಓಪನ್‌ ಬೆದರಿಕೆ ಹಾಕಿರುವ ಪೋಸ್ಟ್‌ ವೈರಲ್‌ ಆಗಿದೆ. ಈ ಕುರಿತು ಉಡುಪಿಯಲ್ಲಿ ದೂರು ದಾಖಲಾಗಿದೆ.
ʻಈ ಎರಡು ತಲೆ ಕಡಿದರೆ 20 ಲಕ್ಷ..! ಒಂದು ತಲೆಗೆ 10 ಲಕ್ಷ ರೂ., ಇನ್ನೊಂದು ತಲೆಗೆ 10 ಲಕ್ಷ. ಕೂಡಲೇ ನಿಮ್ಮ ಖಾತೆಗೆ ಜಮಾ ಆಗುತ್ತದೆʼ ಹೀಗೆಂದು ಹಂದಿಗೆ ಹೋಲಿಕೆ ಮಾಡಿ ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಮತ್ತು ಉಡುಪಿಯ ಸರ್ಕಾರಿ ಮಹಿಳಾ ಪದವಿಪೂರ್ವ ಕಾಲೇಜಿನ ಉಪಾಧ್ಯಕ್ಷ ಯಶಪಾಲ್ ಸುವರ್ಣ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಕೊಲೆ ಬೆದರಿಕೆ ಬಂದಿದೆ. 100% ಈ ಎರಡು ತಲೆ ಉರುಳುವುದು ಖಚಿತ ಎಂದು ಮಾರಿಗುಡಿ ಎಂಬ ಪೇಜ್‌ನಲ್ಲಿ ಬೆದರಿಕೆ ಒಡ್ಡಲಾಗಿದೆ.

ಉಡುಪಿಯಲ್ಲಿ ಹಿಜಾಬ್ ಸಂಘರ್ಷ ನಡೆದಾಗ ಯಶಪಾಲ್, ಸಿಎಫ್‌ಐ, ವಿದ್ಯಾರ್ಥಿಗಳನ್ನು ಟೆರರಿಸ್ಟ್‌ಗಳು ಎಂದು ಹೇಳಿದ್ದರು. ಕಾನೂನು ಹೋರಾಟದ ನೇತೃತ್ವ ವಹಿಸಿದ್ದರು. ಪ್ರಮೋದ್ ಮುತಾಲಿಕ್ ಹಿಂದೂ ಫೈರ್‌ ಬ್ರ್ಯಾಂಡ್‌ ಆಗಿರುವುದು ಈ ಧಮ್ಕಿಗೆ ಕಾರಣ ಎಂದು ಹೇಳಲಾಗಿದೆ. ಪೇಜ್ ವಿರುದ್ದ ಕಾಪು ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಪೊಲೀಸರಿಗೆ ದೂರು ನೀಡಿದ್ದಾರೆ. ಮಾರಿಗುಡಿ ಪೇಜ್ ವಿರುದ್ದ ತನಿಖೆ ನಡೆಸಿ ಕ್ರಮ ತೆಗೆದುಕೊಳ್ಳುವಂತೆ ದೂರಿನಲ್ಲಿ ಒತ್ತಾಯಿಸಲಾಗಿದೆ.

ಪ್ರಮುಖ ಸುದ್ದಿ :-   ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ: ಮಗನಿಗೆ ಯಾವ ಶಿಕ್ಷೆ ಕೊಟ್ರೂ ಸ್ವಾಗತಿಸ್ತೇನೆ ಎಂದ ಕೊಲೆ ಆರೋಪಿ ಫಯಾಜ್‌ ತಂದೆ

ಬಿಜೆಪಿ ಮುಖಂಡ ಯಶಪಾಲ್ ಸುವರ್ಣ ಮಾತನಾಡಿ, ಸಾಮಾಜಿಕ ಜಾಲತಾಣಗಳ ಮೂಲಕ ಇಂತಹ ಸಂದೇಶಗಳು, ಕರೆಗಳು ಬರುವುದು ಸಾರ್ವಜನಿಕ ಜೀವನದಲ್ಲಿ ಸರ್ವೇಸಾಮಾನ್ಯ, ನಾವು ರಾಷ್ಟ್ರಕ್ಕಾಗಿ ಕೆಲಸ ಮಾಡುವಾಗ ದೇಶದ್ರೋಹಿಗಳು ಬೆದರಿಕೆ ಹಾಕುತ್ತಾರೆ. ನಾನು ಅದನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ, ಇದು ಜೀವನದ ಒಂದು ಭಾಗ, ನಾವು ನಮ್ಮ ಕೆಲಸವನ್ನು ಸಂವಿಧಾನದ ಮಿತಿಯಲ್ಲಿ ಮಾಡುತ್ತಿದ್ದೇವೆ. ನನ್ನ ಮತ್ತು ಪ್ರಮೋದ್ ಮುತಾಲಿಕ್ ಅವರ ಬಗ್ಗೆ ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ಯಾವುದೇ ವ್ಯತ್ಯಾಸವಿಲ್ಲ, ನಾವು ನಮ್ಮ ಹೆಜ್ಜೆಯನ್ನು ಹಿಂದೆ ತೆಗೆದುಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.
ನಾನು Instagram ಪೋಸ್ಟ್ ಬಗ್ಗೆ ತಲೆಕೆಡಿಸಿಕೊಂಡಿಲ್ಲ, ಆದಾಗ್ಯೂ, ಸಮಸ್ಯೆಯ ಹಿಂದೆ ಇರುವ ಜನರು ಯಾರೆಂದು ನಾನು ತಿಳಿದುಕೊಳ್ಳಲು ಬಯಸುತ್ತೇನೆ. ನಾವು ಅದನ್ನು ಕಂಡುಕೊಳ್ಳುತ್ತೇವೆ” ಎಂದು ಅವರು ಹೇಳಿದರು.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement