ಬೆಚ್ಚಿ ಬೀಳಿಸಿದ ಘಟನೆ: ಒಂದೇ ರೀತಿಯಲ್ಲಿ ಕತ್ತರಿಸಿದ ಇಬ್ಬರು ಮಹಿಳೆಯರ ಅರ್ಧ ಶವಗಳು ಬೇರೆ ಬೇರೆ ಕಡೆ ಪತ್ತೆ..!

ಬೆಚ್ಚಿ ಬೀಳಿಸುವ ಘಟನೆ: ಇಬ್ಬರು ಮಹಿಳೆಯರ ಅರ್ಧ ದೇಹಗಳು ಪತ್ತೆ

ಮಂಡ್ಯ: ಎರಡು ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ಮಹಿಳೆಯರನ್ನು ಬೀಭತ್ಸವಾಗಿ ಕೊಲೆ ಮಾಡಿ ಅರ್ಧ ದೇಹ ತುಂಡರಿಸಲ್ಪಟ್ಟ ರೀತಿಯಲ್ಲಿ ಶವಗಳು ಪತ್ತೆಯಾಗಿರುವ ಘಟನೆ ವರದಿಯಾಗಿದೆ.
ಪಾಂಡವಪುರ ತಾಲೂಕಿನಲ್ಲಿ ಒಬ್ಬ ಮಹಿಳೆಯ ಅರ್ಧ ಶವ, ಶ್ರೀರಂಗಪಟ್ಟಣ ತಾಲೂಕಿನಲ್ಲಿ ಮತ್ತೊಬ್ಬ ಮಹಿಳೆಯ ಅರ್ಧ ಶವ ಪತ್ತೆಯಾಗಿದೆ.
ಪಾಂಡವಪುರ ತಾಲೂಕಿನ ಬೇಬಿಕೆರೆ ಹಾಗೂ ಕೆ.ಬೆಟ್ಟಹಳ್ಳಿ ಮಾರ್ಗ ಮಧ್ಯೆ ಇರುವ ಬೇಬಿ ಕೆರೆಯ ಬಳಿ 35 ವರ್ಷದ ಮಹಿಳೆಯ ಹೊಟ್ಟೆಯಿಂದ ಕೆಳಭಾಗದ ಶವ ಅರ್ಧ ಕತ್ತರಿಸಿರುವ ರೂಪದಲ್ಲಿ ಸಿಕ್ಕಿದೆ. ಅದೇ ರೀತಿ ಶ್ರೀರಂಗಪಟ್ಟಣ ತಾಲೂಕಿನ ಅರೆಕೆರೆ ಗ್ರಾಮದ ಸಿಡಿಎಸ್ ನಾಲೆಯಲ್ಲಿ ತೇಲಿ ಬಂದಿರುವ ಮಹಿಳೆಯ ಅರ್ಧ ಭಾಗದ ದೇಹ ರೈತನ ಜಮೀನಿನಲ್ಲಿ ಸಿಕ್ಕಿದೆ.

ಇಬ್ಬರು ಮಹಿಳೆಯರನ್ನೂ ಒಂದೇ ರೀತಿ ಕೊಲೆ ಮಾಡಲಾಗಿದ್ದು, ಇಬ್ಬರು ಮಹಿಳೆಯರ ಹೊಟ್ಟೆಯಿಂದ ಕೆಳ ಭಾಗ ಮಾತ್ರ ಪತ್ತೆಯಾಗಿದೆ. ಕಾಲುಗಳನ್ನು ಕಟ್ಟಿ ದೇಹವನ್ನು ತುಂಡರಿಸಿ ಅರ್ಧಭಾಗವನ್ನ ಕಾಲುವೆಗಳಿಗೆ ಎಸೆದಿದ್ದಾರೆ.
ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಎರಡೂ ಕಡೆ ಸಿಕ್ಕಿರುವ ಅರ್ಧ ಕತ್ತರಿಸಿದ ಮೃತ ದೇಹಗಳ ಹೊಟ್ಟೆಯಿಂದ ಕೆಳಗಿನ ಭಾಗ ಮಾತ್ರ ಪತ್ತೆಯಾಗಿದೆ. ಉಳಿದ ಭಾಗ ಇನ್ನೂ ಸಿಕ್ಕಿಲ್ಲ. ಸಿಕ್ಕಿರುವ ಎರಡೂ ಶವಗಳ ಕಾಲುಗಳನ್ನು ಹಗ್ಗದಿಂದ ಕಟ್ಟಲಾಗಿದ್ದು, ಬೇರೆಲ್ಲೋ ಕೊಲೆ ಮಾಡಿ ಬಳಿಕ ದೇಹ ಕತ್ತರಿಸಿ ಸಾಕ್ಷ್ಯ ನಾಶಕ್ಕೆ ದುಷ್ಕರ್ಮಿಗಳು ಯತ್ನಿಸಿರಬೇಕು ಎಂದು ಪೊಲೀಸರು ಶಂಕಿಸಿದ್ದಾರೆ. ಉಳಿದರ್ಧ ದೇಹದ ಪತ್ತೆಗೆ ಶೋಧ ಆರಂಭಿಸಿದ್ದಾರೆ. ಈ ಮಹಿಳೆಯರು ಯಾರು? ಎಂಬ ಸುಳಿವು ಇನ್ನೂ ಸಿಕ್ಕಿಲ್ಲ. ಪೊಲೀಸರು ಎಲ್ಲ ಆಯಾಮದಲ್ಲೂ ತನಿಖೆ ಮುಂದುವರಿಸಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಎರಡು ಸ್ಥಳಗಳಿಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳನ್ನು ಪತ್ತೆ ಹಚ್ಚಲು ವಿಶೇಷ ತಂಡ ರಚಿಸಲಾಗಿದೆ. ಅಲ್ಲದೆ, ಪ್ರತ್ಯೇಕ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಂಡಿದ್ದಾರೆ.

ಪ್ರಮುಖ ಸುದ್ದಿ :-   ಕೆಎಸ್​ಆರ್​ಟಿಸಿ ಬಸ್​ನಲ್ಲಿ ಅಜ್ಜಿ ಮೊಮ್ಮಗಳಿಗೆ ಉಚಿತ ಟಿಕೆಟ್ : ಆದ್ರೆ ನಾಲ್ಕು ಪಕ್ಷಿಗಳಿಗೆ 444 ರೂ. ಟಿಕೆಟ್...!

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement