ಹಿಂಸಾಚಾರಕ್ಕೆ ತಿರುಗಿದ ಪ್ರವಾದಿ ಕುರಿತ ಹೇಳಿಕೆಗಳ ವಿರುದ್ಧದ ಪ್ರತಿಭಟನೆ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಕಚೇರಿಗೆ ಬೆಂಕಿ

ಕೋಲ್ಕತ್ತಾ: ಶುಕ್ರವಾರ, ಜೂನ್ 10 ರಂದು ಹೌರಾದ ಉಲುಬೇರಿಯಾ ಪ್ರದೇಶದಲ್ಲಿ ಭಾರತೀಯ ಜನತಾ ಪಕ್ಷದ ಕಚೇರಿಯನ್ನು ಪ್ರತಿಭಟನಾಕಾರರು ಧ್ವಂಸಗೊಳಿಸಿದ್ದಾರೆ ಮತ್ತು ಸುಟ್ಟು ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಬಿಜೆಪಿ ನಾಯಕರೊಬ್ಬರು ಸುಟ್ಟ ಪಕ್ಷದ ಕಚೇರಿಯ ವೀಡಿಯೊವನ್ನು ಟ್ವೀಟ್ ಮಾಡಿದ್ದಾರೆ ಹಾಗೂ ದುಷ್ಕರ್ಮಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮತ್ತು ಗೃಹ-ಪೊಲೀಸ್ ಸಚಿವೆ ಮಮತಾ ಬ್ಯಾನರ್ಜಿ ಅವರಿಗೆ ಇಂದು ಮಧ್ಯಾಹ್ನ ಹೌರಾ ಗ್ರಾಮಾಂತರ ಜಿಲ್ಲೆಯ ಬಿಜೆಪಿ ಕಚೇರಿಯನ್ನು ಧ್ವಂಸಗೊಳಿಸಿದ ಮತ್ತು ಬೆಂಕಿ ಹಚ್ಚಿದ ಈ ಗಲಭೆಕೋರರು ಮತ್ತು ದಂಗೆಕೋರರನ್ನು ಗುರುತಿಸಲು ಮತ್ತು ಬಂಧಿಸಲು ಸಾಧ್ಯವಾಗುತ್ತದೆ. ಆದರೆ ಅವರುಯಾಕೆ ಮೌನವಾಗಿದ್ದಾರೆ? ಎಂದು ಅನಿರ್ಬನ್ ಗಂಗೂಲಿ ಟ್ವೀಟ್ ಮಾಡಿದ್ದಾರೆ.

ನೂಪುರ್ ಶರ್ಮಾ ಅವರು ಪ್ರವಾದಿ ಮುಹಮ್ಮದ್ ಕುರಿತು ನೀಡಿದ ವಿವಾದಾತ್ಮಕ ಹೇಳಿಕೆಗಳ ವಿರುದ್ಧ ಪ್ರತಿಭಟನೆಗಳು ಹಿಂಸಾತ್ಮಕ ತಿರುವು ಪಡೆದುಕೊಂಡವು, ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದರು. ಶುಕ್ರವಾರ ಹೊವಾರ್‌ನಲ್ಲಿ ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದರು.
ಇದೇ ವೇಳೆ ಪ್ರತಿಭಟನಾಕಾರರು ರಸ್ತೆ ಹಾಗೂ ರೈಲು ಮಾರ್ಗಗಳನ್ನು ತಡೆದಿದ್ದಾರೆ. ಹೌರಾ-ಖರಗ್‌ಪುರ ಮಾರ್ಗದ ಚೆಂಗೆಲ್ ನಿಲ್ದಾಣದಲ್ಲಿ ಜನರು ಪ್ರತಿಭಟನೆ ಆರಂಭಿಸಿದ್ದರಿಂದ ಆಗ್ನೇಯ ರೈಲ್ವೆಯ ಸೇವೆಗಳನ್ನು ಸಂಪೂರ್ಣವಾಗಿ ನಿಲ್ಲಿಸಲಾಗಿದೆ.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ : 1ನೇ ಹಂತದಲ್ಲಿ 62.37%ರಷ್ಟು ಮತದಾನ ; 2019ರ ಮತದಾನದ ಪ್ರಮಾಣಕ್ಕಿಂತ ಕಡಿಮೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement