ಬೆಂಗಳೂರು: ಬೆಳ್ಳಂಬೆಳಗ್ಗೆ ವಿವಾಹಿತೆ ಮೇಲೆ ಆಸಿಡ್ ಎರಚಿದ ಪ್ರೇಮಿ

ಬೆಂಗಳೂರು: ಯುವತಿ ಮೇಲೆ ಆಸಿಡ್ ದಾಳಿ ನಡೆದ ಒಂದು ಪ್ರಕರಣ ಮಾಸುವ ಮುನ್ನಾ ನಗರದಲ್ಲಿ ಇಂದು, ಶುಕ್ರವಾರ (ಜೂನ್ 10) ಮತ್ತೆ ಮಹಿಳೆಯೊಬ್ಬರ ಚಮೇಲೆ ವ್ಯಕ್ತಿಯೊಬ್ಬ ಆಸಿಡ್ ದಾಳಿ ಮಾಡಿದ್ದಾನೆ.
ಬೆಂಗಳೂರಿನ ಸಾರಕ್ಕಿ ಬಳಿ ಘಟನೆ ನಡೆದಿದ್ದು, ಪರಿಚಯಸ್ಥನಿಂದಲೇ ಈ ಕೃತ್ಯ ನಡೆದಿದೆ. ಸದ್ಯ ಘಟನಾ ಸ್ಥಳಕ್ಕೆ ಎಸಿಪಿ ಶಿವಕುಮಾರ್, ಡಿಸಿಪಿ ಹರೀಶ್ ಪಾಂಡೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಕುಮಾರಸ್ವಾಮಿ ಲೇಔಟ್ ಠಾಣೇ ಪೊಲೀಸರು ಅರೋಪಿಯನ್ನು ವಶಕ್ಕೆ ಪಡೆದಿದ್ಧಾರೆ.

ಅಹ್ಮದ್​ ಎಂಬಾತ ಆಸಿಡ್ ದಾಳಿ ನಡೆಸಿರುವ ಆರೋಪಿ. ಈತ ವಿವಾಹಿತ ಮಹಿಳೆಗೆ ತನ್ನನ್ನು ಮದುವೆಯಾಗುವಂತೆ ದುಂಬಾಲು ಬಿದ್ದಿದ್ದ. ಮದುವೆಯಾಗಲು ಒಪ್ಪದಿದ್ದಾಗ ಆಸಿಡ್ ದಾಳಿ ಮಾಡಿದ್ದಾನೆ. ಮಹಿಳೆ ಬಲಗಣ್ಣಿಗೆ ಗಂಭೀರ ಗಾಯವಾಗಿದ್ದು, ಗಾಯಾಳು ಮಹಿಳೆಯನ್ನ ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ದಾಳಿಗೆ ಒಳಗಾದ ಮಹಿಳೆಗೆ ಮದುವೆ ಆಗಿ ಮಗು ಇದೆ. ಹೀಗಿದ್ದರೂ ಅರೋಪಿ‌ ಮಹಿಳೆಯ ಪ್ರೀತಿಸುತ್ತಿದ್ದ. ಜೊತೆಗೆ ಮದುವೆ ಆಗುವಂತೆ ಪೀಡಿಸುತ್ತಿದ್ದ. ಅರೋಪಿ ಮತ್ತು ನೊಂದ ಮಹಿಳೆ ಇಬ್ಬರೂ ಅಗರಬತ್ತಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದರು. ಗೋರಿಪಾಳ್ಯದ ನಿವಾಸಿಯಾಗಿರುವ ಅರೋಪಿ ಅಹ್ಮದ್, ಮಹಿಳೆ ಕೆಎಸ್ ಲೇಔಟ್​ನಿಂದ ಜೆಪಿ ನಗರ ಕಡೆಗೆ ತೆರಳುತಿದ್ದಾಗ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.
ವಿಧಾನಸೌಧದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿ, ಬೆಂಗಳೂರಿನಲ್ಲಿ ಮತ್ತೊಂದು ಆಸಿಡ್ ದಾಳಿ ನಡೆದಿದೆ. ಈ ಪ್ರಕರಣವನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ. ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದೇವೆ ಎಂದರು.

ಪ್ರಮುಖ ಸುದ್ದಿ :-   ೯೦ ವರ್ಷಗಳಿಂದ ಕನ್ನಡ ಪುಸ್ತಕಗಳನ್ನು ಪ್ರಕಟಿಸುತ್ತಿರುವ ಸಾಹಿತ್ಯ ಭಂಡಾರ ಪುಸ್ತಕ ಮಳಿಗೆಗೆ ಈಗ ನವೀಕರಣದ ಸಂಭ್ರಮ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement