ಹೆಂಡತಿ ಜಮೀನು ಮಾರಲು ಒಪ್ಪಿಗೆ ನೀಡಲ್ಲವೆಂದು ಇಬ್ಬರು ಮಕ್ಕಳಿಗೆ ವಿಷತಿನ್ನಿಸಿದ ಭೂಪ. ಓರ್ವ ಮಗು ಸಾವು

ವಿಜಯಪುರ: ದ್ವೇಷ, ಹಠ ಸಾಧಿಸಲು ಎಂತಹ ನೀಚ ಕೃತ್ಯಕ್ಕೂ ಇಳಿಯುತ್ತಾರೆ ಎಂಬುದಕ್ಕೆ ಉದಾಹರಣೆಯೆಂಬಂತೆ ಇಲ್ಲೊಬ್ಬ ವ್ಯಕ್ತಿ ತನ್ನ ಮಕ್ಕಳಿಗೇ ವಿಷ ನೀಡಿದ್ದಾನೆ. ಜಮೀನು ಮಾರಲು ಹೆಂಡತಿ ಒಪ್ಪಿಗೆ ನೀಡಿಲ್ಲ ಎಂಬ ಕಾರಣಕ್ಕೆ ಕೋಪಗೊಂಡ ಗಂಡ ತನ್ನಿಬ್ಬರು ಮಕ್ಕಳಿಗೆ ಎಗ್​ರೈಸ್​ನಲ್ಲಿ ವಿಷ ಬೆರೆಸಿ ನೀಡಿರುವ ಘಟನೆ ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಗೋನಾಳ ಗ್ರಾಮದಲ್ಲಿ ನಡೆದಿದೆ. ಎಗ್​ರೈಸ್​ … Continued

ಪಾಕಿಸ್ತಾನದ ಮಾಜಿ ಅಧ್ಯಕ್ಷ ಜನರಲ್ ಪರ್ವೇಜ್ ಮುಷರಫ್ ಆರೋಗ್ಯ ಗಂಭೀರ: ಯುಎಇ ಆಸ್ಪತ್ರೆಯಲ್ಲಿ ವೆಂಟಿಲೇಟರ್‌ ಅಳವಡಿಕೆ: ಮಾಜಿ ಸಚಿವ

ಲಾಹೋರ್/ದುಬೈ: ಪಾಕಿಸ್ತಾನದ ಮಾಜಿ ಸೇನಾ ಸರ್ವಾಧಿಕಾರಿ ಜನರಲ್ ಪರ್ವೇಜ್ ಮುಷರಫ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಯುಎಇಯ ಆಸ್ಪತ್ರೆಯಲ್ಲಿ ವೆಂಟಿಲೇಟರ್‌ನಲ್ಲಿದ್ದಾರೆ ಎಂದು ಅವರ ಆಪ್ತ ಸಹಾಯಕ ಮತ್ತು ಮಾಜಿ ಮಾಹಿತಿ ಸಚಿವ ಫವಾದ್ ಚೌಧರಿ ಶುಕ್ರವಾರ ಹೇಳಿದ್ದಾರೆ. 78 ವರ್ಷದ ಜನರಲ್ ಮುಷರಫ್ ಅವರು 1999 ರಿಂದ 2008 ರವರೆಗೆ ಪಾಕಿಸ್ತಾನದಲ್ಲಿ ಅಧಿಕಾರದಲ್ಲಿದ್ದರು. ಇಮ್ರಾನ್ ಖಾನ್ … Continued

ಪ್ರವಾದಿ ಕುರಿತು ವಿವಾದಾತ್ಮ ಹೇಳಿಕೆ ವಿರುದ್ಧ ದೆಹಲಿ, ಉತ್ತರ ಪ್ರದೇಶ, ಕೋಲ್ಕತ್ತಾ ಬೀದಿಗಳಲ್ಲಿ ಪ್ರತಿಭಟನೆ

ನವದೆಹಲಿ: ಇದೀಗ ಅಮಾನತುಗೊಂಡಿರುವ ಬಿಜೆಪಿ ನಾಯಕ ನೂಪುರ್ ಶರ್ಮಾ ಅವರು ಪ್ರವಾದಿ ಮುಹಮ್ಮದ್ ಕುರಿತು ಮಾಡಿದ ಹೇಳಿಕೆಗಳ ವಿರುದ್ಧ ಶುಕ್ರವಾರ ಹಲವು ರಾಜ್ಯಗಳಲ್ಲಿ ಪ್ರತಿಭಟನೆಗಳು ಭುಗಿಲೆದ್ದಿವೆ. ಶುಕ್ರವಾರದ ಪ್ರಾರ್ಥನೆಯ ನಂತರ ದೆಹಲಿ, ಉತ್ತರ ಪ್ರದೇಶ, ತೆಲಂಗಾಣ ಮತ್ತು ಪಶ್ಚಿಮ ಬಂಗಾಳದಲ್ಲಿ ಪ್ರತಿಭಟನೆಗಳನ್ನು ನಡೆಸಲಾಯಿತು. ಬಿಜೆಪಿಯು ವಿವಾದದಿಂದ ದೂರವಿರಲು ಪ್ರಯತ್ನಿಸಿತು, ಟೀಕೆಗಳು “ವೈಯಕ್ತಿಕ ಹೇಳಿಕೆಗಳು” ಎಂದು ಬಿಜೆಪಿ … Continued

ನಾನು ಇದನ್ನು ಪ್ರೀತಿಸುತ್ತೇನೆ…ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮತ ಹಾಕಿದ ನಂತರ ಜೆಡಿಎಸ್ ಶಾಸಕನ ಹೇಳಿಕೆ

ಬೆಂಗಳೂರು:ರಾಜ್ಯಸಭಾ ಚುನಾವಣೆಯಲ್ಲಿ ತೀವ್ರ ಪೈಪೋಟಿಯ ನಡುವೆ ಜೆಡಿಎಸ್‌ ಶಾಸಕ ಶ್ರೀನಿವಾಸ ಗೌಡ ಅಡ್ಡಮತದಾನ ಮಾಡಿದ್ದಾರೆ. ಕರ್ನಾಟಕ ಜೆಡಿಎಸ್ ಶಾಸಕ ಕೆ ಶ್ರೀನಿವಾಸಗೌಡ ಅವರು ತಾನು ಕಾಂಗ್ರೆಸ್ಸಿಗೆ ಮತ ಹಾಕಿರುವುದಾಗಿ ಮಾಧ್ಯಮದವರ ಮುಂದೆ ಹೇಳಿದ್ದಾರೆ. ಶ್ರೀನಿವಾಸ್ ಗೌಡ ಅವರು ವಿಧಾನಸೌಧದಿಂದ ಹೊರಬರುತ್ತಿದ್ದಂತೆ ಯಾರಿಗೆ ಮತ ಹಾಕಿದ್ದೀರಿ ಎಂದು ಪ್ರಶ್ನಿಸಿದ ಮಾಧ್ಯಮದವರಿಗೆ ನಾನು ಕಾಂಗ್ರೆಸ್‌ಗೆ ಮತ ಹಾಕಿದ್ದೇನೆ ಎಂದರು. … Continued

ವಿದ್ಯಾರ್ಥಿನಿ ಮೇಲೆ ಹಲ್ಲೆ ಮಾಡಿದ ಪಾಗಲ್‌ ಪ್ರೇಮಿ, ಸಾರ್ವಜನಿಕರಿಂದ ಧರ್ಮದೇಟು

ಮಂಡ್ಯ: ಪ್ರೀತಿ ನಿರಾಕರಿಸಿದ್ದಕ್ಕೆ ವಿದ್ಯಾರ್ಥಿನಿ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ಪಾಗಲ್​ ಪ್ರೇಮಿಯನ್ನು ಹಿಡಿದು ಸಾರ್ವಜನಿಕರು ಧರ್ಮದೇಟು ಕೊಟ್ಟ ಘಟನೆ ಮಂಡ್ಯದ ಮೆಡಿಕಲ್ ಕಾಲೇಜು ಆವರಣದಲ್ಲಿ ನಡೆದಿದೆ. ಹಲ್ಲೆಗೊಳಗಾದ ಪ್ಯಾರಾ ಮೆಡಿಕಲ್ ಓದುತ್ತಿರುವ ವಿದ್ಯಾರ್ಥಿನಿ ಮೇಲೆ ಆರೋಪಿ ಸಂಪತಕುಮಾರ್ ಎಂಬಾತ ನಡುರಸ್ತೆಯಲ್ಲೇ ಹಲ್ಲೆ ನಡೆಸಿದ್ದಾನೆ. ಸಂತ್ರಸ್ತೆ ಮತ್ತು ಸಂಪತ್ ಕುಮಾರ್ ಇಬ್ಬರು ಒಂದೇ … Continued

ಬೆಂಗಳೂರು: ಬೆಳ್ಳಂಬೆಳಗ್ಗೆ ವಿವಾಹಿತೆ ಮೇಲೆ ಆಸಿಡ್ ಎರಚಿದ ಪ್ರೇಮಿ

ಬೆಂಗಳೂರು: ಯುವತಿ ಮೇಲೆ ಆಸಿಡ್ ದಾಳಿ ನಡೆದ ಒಂದು ಪ್ರಕರಣ ಮಾಸುವ ಮುನ್ನಾ ನಗರದಲ್ಲಿ ಇಂದು, ಶುಕ್ರವಾರ (ಜೂನ್ 10) ಮತ್ತೆ ಮಹಿಳೆಯೊಬ್ಬರ ಚಮೇಲೆ ವ್ಯಕ್ತಿಯೊಬ್ಬ ಆಸಿಡ್ ದಾಳಿ ಮಾಡಿದ್ದಾನೆ. ಬೆಂಗಳೂರಿನ ಸಾರಕ್ಕಿ ಬಳಿ ಘಟನೆ ನಡೆದಿದ್ದು, ಪರಿಚಯಸ್ಥನಿಂದಲೇ ಈ ಕೃತ್ಯ ನಡೆದಿದೆ. ಸದ್ಯ ಘಟನಾ ಸ್ಥಳಕ್ಕೆ ಎಸಿಪಿ ಶಿವಕುಮಾರ್, ಡಿಸಿಪಿ ಹರೀಶ್ ಪಾಂಡೆ ಭೇಟಿ … Continued

ಮೂರು ತಿಂಗಳ ಬಳಿಕ ಭಾರತದಲ್ಲಿ ಹೊಸದಾಗಿ 7,584 ಕೊರೊನಾ ಸೋಂಕು ದಾಖಲು…!

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 7,584 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಮೂರು ತಿಂಗಳ ಬಳಿಕ ಅತಿ ಹೆಚ್ಚು ದೈನಂದಿನ ಪ್ರಕರಣಗಳು ದಾಖಲಾದಂತಾಗಿದೆ. ಕಳೆದ ಮೂರು ತಿಂಗಳಿನಿಂದ ಪ್ರತಿನಿತ್ಯ 3 ಸಾವಿರ ಆಸು-ಪಾಸಿನಲ್ಲಿ ಪ್ರಕರಣಗಳು ವರದಿಯಾಗುತ್ತಿದ್ದು. ಈಗ ದಿಢೀರ್ ಏರಿಕೆ ಕಂಡಿದೆ. ಕಳೆದ 24 ಗಂಟೆಗಳಲ್ಲಿ 24 ಮಂದಿ ಕೊರೊನಾದಿಂದ ಸಾವಿಗೀಡಾಗಿದ್ದಾರೆ. ಒಟ್ಟು ಸೋಂಕಿತರ … Continued

ಕ್ಯೂಎಸ್ ವರ್ಲ್ಡ್ ಯೂನಿವರ್ಸಿಟಿ ಶ್ರೇಯಾಂಕದಲ್ಲಿ ಐಐಎಸ್‌ಸಿ ಬೆಂಗಳೂರು ಭಾರತದಲ್ಲೇ ನಂ.1 ವಿಶ್ವ ವಿದ್ಯಾಲಯ

ನವದೆಹಲಿ: ಗುರುವಾರ ಬಿಡುಗಡೆಯಾದ ಕ್ಯೂಎಸ್ ವರ್ಲ್ಡ್ ಯೂನಿವರ್ಸಿಟಿ ಶ್ರೇಯಾಂಕಗಳು 2023 ರಲ್ಲಿ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ಬೆಂಗಳೂರು ಭಾರತದಲ್ಲೇ ನಂಬರ್‌ 1 ಎಂದು ರ್ಯಾಂಕ್‌ ಪಡೆದಿದ್ದು, ಜಾಗತಿಕವಾಗಿ 155ನೇ ರ್ಯಾಂಕ್‌ ಪಡೆದಿದೆ., ಇದು ಎಲ್ಲಾ ಭಾರತೀಯ ತಂತ್ರಜ್ಞಾನ ಸಂಸ್ಥೆಗಳು (ಐಐಟಿಗಳು) ತಮ್ಮ ಸ್ಥಿತಿಯನ್ನು ಸುಧಾರಿಸಿದೆ ಎಂಬುದನ್ನು ತೋರಿಸುತ್ತದೆ. QS ವರ್ಲ್ಡ್ ಯೂನಿವರ್ಸಿಟಿ ಶ್ರೇಯಾಂಕಗಳ ಇತ್ತೀಚಿನ … Continued

ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಳ: ಕರ್ನಾಟಕ ಸೇರಿ 4 ರಾಜ್ಯಗಳ ಮೇಲೆ ಕೇಂದ್ರದ ನಿಗಾ

ನವದೆಹಲಿ: ಕೊರೊನಾ ವೈರಸ್ ಸೋಂಕು ಪ್ರಕರಣಗಳು ದೇಶಾದ್ಯಂತ ದಿನೇ ದಿನೇ ಏರಿಕೆ ಕಾಣುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವಾಲಯವು ಕರ್ನಾಟಕ, ಮಹಾರಾಷ್ಟ್ರ, ಕೇರಳ ಹಾಗೂ ದೆಹಲಿ ರಾಜ್ಯಗಳ ಮೇಲೆ ನಿಗಾ ವಹಿಸಿದೆ. ನಾಲ್ಕೂ ರಾಜ್ಯಗಳಲ್ಲಿ 5 ಹಂತದ ಕೊರೊನಾ ವೈರಸ್ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಪರೀಕ್ಷೆ ಹೆಚ್ಚಳ ಮಾಡುವಂತೆ ಕೇಂದ್ರ ಆರೋಗ್ಯ ಸಚಿವಾಲಯವು ರಾಜ್ಯಗಳಿಗೆ ಸೂಚಿಸಿದೆ. … Continued