ವೈದ್ಯರ ಸಲಹೆ ಮೇರೆಗೆ ಒಂದು ವಾರ ಎಚ್‌ಡಿಕೆ ವಿಶ್ರಾಂತಿ, ಸಾರ್ವಜನಿಕ ಭೇಟಿ ಇಲ್ಲ

ಬೆಂಗಳೂರು: ವೈದ್ಯರ ಸಲಹೆ ಮೇರೆಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಒಂದು ವಾರ ವಿಶ್ರಾಂತಿ ತೆಗೆದುಕೊಳ್ಳಲಿದ್ದಾರೆ. ಈ ಬಗ್ಗೆ ಶುಕ್ರವಾರ ಸಂಜೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕನಿಷ್ಠ ಒಂದು ವಾರವಾದರೂ ಯಾರನ್ನೂ ಭೇಟಿ ಮಾಡುವುದು ಅಥವಾ ಹೆಚ್ಚು ಮಾತನಾಡ ಬಾರದು ಎಂದು ವೈದ್ಯರು ಸಲಹೆ ಮಾಡಿದ್ದಾರೆ. ಹೀಗಾಗಿ ವಿಶ್ರಾಂತಿ ಪಡೆಯುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ನಾನು ಸಾರ್ವಜನಿಕರ ಭೇಟಿಗೆ ಲಭ್ಯ ಇರುವುದಿಲ್ಲ. ಹೀಗಾಗಿ ಬಿಡದಿ ತೋಟಕ್ಕೆ ಅಥವಾ ಪಕ್ಷದ ಕಚೇರಿಗೆ ನನ್ನ ಭೇಟಿಗೆ ಯಾರೂ ಬರಬೇಡಿ ಎಂದು ಅವರು ಮನವಿ ಮಾಡಿದ್ದಾರೆ.
ಸಾರ್ವಜನಿಕರು ಅನ್ಯತಾ ಭಾವಿಸಬಾರದು. ವಾರದ ನಂತರ ಮೊದಲಿನಂತೆ ಎಲ್ಲರನ್ನೂ ಭೇಟಿ ಮಾಡುತ್ತೇನೆ ಹಾಗೂ ಪಕ್ಷದ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುತ್ತೇನೆ. ಸಾರ್ವಜನಿಕರು ಸಹಕರಿಸಬೇಕು ಎಂದು ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

 

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement