ಯಲ್ಲಾಪುರ: ಸಾವಿರ ವರ್ಷದ ಹಿಂದಿನ ಪುರಾತನ ದೇವಾಲಯದ ಬಳಿ ನಿಧಿಗಾಗಿ ಶೋಧ

ಯಲ್ಲಾಪುರ: ತಾಲೂಕಿನ ವಜ್ರಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯ ಹೊನಗದ್ದೆ ಸಮೀಪದ ಗಡುಗದ್ದೆ ಬಳಿ ಇರುವ ಪುರಾತನ ಪಾಳುಬಿದ್ದ ದೇವಾಲಯದ ಬಳಿ ದುಷ್ಕರ್ಮಿಗಳು ನಿಧಿಗಾಗಿ ಶೋಧ ನಡೆಸಿರುವುದು ತಡವಾಗಿ ಬೆಳಕಿಗೆ ಬಂದಿದೆ.
ಗಡುಗದ್ದೆ ಬಳಿ ಪಾಳುಬಿದ್ದ ಸ್ಥಿತಿಯಲ್ಲಿ ಇರುವ ಸುಮಾರು ಒಂದೂವರೆ ಸಾವಿರ ವರ್ಷಗಳ ಹಿಂದಿನ ಶಿವ ದೇವಾಲಯದಲ್ಲಿ ಎರಡು ಶಿವ ಲಿಂಗಗಳು, ವರಗಣಪತಿ ಮೂರ್ತಿ, ಮಣ್ಣಿನಲ್ಲಿ ಅರ್ಧದಷ್ಟು ಹೂತಿರುವ ನಂದಿ ಪ್ರತಿಮೆ, ಭಗ್ನವಾಗಿರುವ ವ್ಯಾಘ್ರ ಪ್ರತಿಮೆಗಳಿವೆ. ಇಲ್ಲಿ ನಿಧಿಗಾಗಿ ಹೊಂಡ ತೆಗೆದು ಶೋಧ ನಡೆಸಲಾಗಿದೆ. ನಂತರ ಮತ್ತೆ ಹೊಂಡ ಮುಚ್ಚಲಾಗಿದೆ. ಪುರಾತನ ದೇವಾಲಯದ ಬಳಿ ನಿಧಿಶೋಧ ಮಾಡಲಾಗಿದ್ದು, ಈ ಬಗ್ಗೆ ಸಂಬಂಧಪಟ್ಟವರು ಗಮನ ಹರಿಸಿ, ತನಿಖೆ ನಡೆಸಬೇಕೆಂದು ಅನೇಕರು ಆಗ್ರಹಿಸಿದ್ದಾರೆ.

5 / 5. 2

ಶೇರ್ ಮಾಡಿ :
ಪ್ರಮುಖ ಸುದ್ದಿ :-   ವೀಡಿಯೊ..| ಆಡಳಿತ ಸಂಪೂರ್ಣ ವಿಫಲ ; ಬಿ.ಆರ್.​ ಪಾಟೀಲ ಬೆನ್ನಲ್ಲೇ ತಮ್ಮ ಸರ್ಕಾರದ ವಿರುದ್ಧವೇ ಸಿಡಿದೆದ್ದ ಮತ್ತೊಬ್ಬ ಕಾಂಗ್ರೆಸ್ ಶಾಸಕ ; ರಾಜೀನಾಮೆ ಮಾತು

ನಿಮ್ಮ ಕಾಮೆಂಟ್ ಬರೆಯಿರಿ

advertisement