ಪರಿಷತ್‌ ಚುನಾವಣೆ: ವಾಯವ್ಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ ಗೆಲುವು

ಬೆಳಗಾವಿ : ಕರ್ನಾಟಕ ವಾಯವ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆಯ ಫಲಿತಾಶ ಪ್ರಕಟಗೊಂಡಿದ್ದು, ಕಾಂಗ್ರೆಸ್ ಬಿಜೆಪಿ ತೆಕ್ಕಯಿಂದ ಸ್ಥಾನವನ್ನು ಕಸಿದುಕೊಂಡಿದೆ.
ವಾಯವ್ಯ ಶಿಕ್ಷಕರ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿಬಿಜೆಪಿಯ ಅರುಣ ಶಹಾಪುರ ಅವರ ವಿರುದ್ಧ ಗೆಲುವು ಸಾಧಿಸಿದ್ದಾರೆ.
ಪ್ರಕಾಶ ಹುಕ್ಕೇರಿ 11,460 ಪ್ರಥಮ ಪ್ರಾಶಸ್ತ್ಯ ಮತಗಳನ್ನು ಪಡೆದರೆ ಅವರ ಸಮೀಪದ ಪ್ರತಿಸ್ಪರ್ಧಿ ಬಿಜೆಪಿ‌ ಅಭ್ಯರ್ಥಿ ಅರುಣ ಶಹಾಪುರ ಅವರು 6,405 ಮತಗಳನ್ನು ಮಾತ್ರ ಪಡೆದುಕೊಳ್ಳಲು ಶಕ್ತರಾದರು.
ಒಟ್ಟು 21,402 ಮತಗಳು ಚಲಾವಣೆಯಾಗಿದ್ದು, ಅದರಲ್ಲಿ 1,270 ಮತಗಳು ಅಸಿಂಧುವಾಗಿವೆ ಮತ್ತು 20,132 ಸಿಂಧು ಮತಗಳಲ್ಲಿ ಅಭ್ಯರ್ಥಿ ಗೆಲುವಿಗೆ 10,067 ಮತಗಳ ಕೋಟಾ ನಿಗದಿಪಡಿಸಲಾಗಿತ್ತು.

ಅಭ್ಯರ್ಥಿಗಳು ಪಡೆದ ಮತಗಳ ವಿವರ:
ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿರುವ ಪ್ರಕಾಶ ಹುಕ್ಕೇರಿ-11460 ಮತಗಳನ್ನು ಪಡೆದು ಗೆಲುವು ಸಾಧಿಸಿದರೆ ಬಿಜೆಪಿ ಪಕ್ಷದ ಅಭ್ಯರ್ಥಿಯಾದ ಅರುಣ ಶಹಾಪೂರ ಅವರು 6405 ಮತಗಳನ್ನು ಪಡೆದಿದ್ದಾರೆ.
ಜೆಡಿಎಸ್ ಅಭ್ಯರ್ಥಿ ಚಂದ್ರಶೇಖರ ಲೋಣಿ 544 ಮತಗಳು ಹಾಗೂ ಪಕ್ಷೇತರ ಅಭ್ಯರ್ಥಿಗಳಾದ ಅಪ್ಪಾಸಾಹೇಬ ಕುರಣೆ- 9, ಚಂದ್ರಶೇಖರ ಗುಡಸೆ- 101, ದೇಸಾಯಿ ಜಯಪಾಲ ರಾಜಾರಾಮ- 10, ಬನ್ನೂರು ಎನ್. ಬಿ -1009, ಬಸಪ್ಪ ಮಣಿಗಾರ -39, ಶ್ರೀಕಾಂತ ಪಾಟೀಲ- 19, ಶ್ರೀನಿವಾಸಗೌಡ ಗೌಡರ- 524, ಶ್ರೇನಿಕ್ ಅಣ್ಣಾಸಾಹೇಬ್ ಜಂಗಟೆ -8 ಹಾಗೂ ಚಿಕ್ಕನಾರಗುಂದ ಸಂಗಮೇಶ- 4 ಮತಗಳನ್ನು ಪಡೆದಿದ್ದಾರೆ.

ಪ್ರಮುಖ ಸುದ್ದಿ :-   ರಾಜ್ಯದಲ್ಲಿ ತಾಪಮಾನ ಏರಿಕೆ : ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement