ಮುಂಬೈ: ಐರ್ಲೆಂಡ್ ವಿರುದ್ಧ ನಡೆಯಲಿರುವ ಟಿ20 ಸರಣಿಗೆ ಭಾರತ ತಂಡ ಪ್ರಕಟಿಸಲಾಗಿದ್ದು, ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರನ್ನು ತಂಡದ ನಾಯಕನ್ನಾಗಿ ಆಯ್ಕೆ ಮಾಡಲಾಗಿದೆ.
ಭುವನೇಶ್ವರಕುಮಾರ ತಂಡದ ಉಪನಾಯಕರಾಗಿ ಆಯ್ಕೆಯಾಗಿದ್ದಾರೆ. ಜೊತೆಗೆ ಐಪಿಎಲ್ನಲ್ಲಿ ಬ್ಯಾಟಿಂಗ್ನಲ್ಲಿ ಮಿಂಚಿದ್ದ ರಾಹುಲ್ ತ್ರಿಪಾಠಿ ಅವರು ಆಯ್ಕೆಗಾರರು ಪರಿಗಣಿಸಿದ್ದಾರೆ. ಆಫ್ರಿಕಾ ಸರಣಿಯಿಂದ ಅವಕಾಶ ವಂಚಿತರಾಗಿದ್ದ ಸಂಜು ಸ್ಯಾಮ್ಸನ್ಗೆ ತಂಡಕ್ಕೆ ಆಯ್ಕೆ ಮಾಡಲಾಗಿದೆ. ಗಾಯದಿಂದ ತಂಡದಿಂದ ಹೊರಗುಳಿದಿದ್ದ ಸೂರ್ಯಕುಮಾರ ಯಾದವ್ ವಾಪಸ್ಸಾಗಿದ್ದಾರೆ.
ಭಾರತದ ತಂಡ ಹೀಗಿದೆ:
ಹಾರ್ದಿಕ್ ಪಾಂಡ್ಯ (ನಾಯಕ), ಭುವನೇಶ್ವರ್ ಕುಮಾರ್ (ಉಪನಾಯಕ), ಇಶಾನ್ ಕಿಶನ್, ಋತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ವೆಂಕಟೇಶ ಅಯ್ಯರ್, ದೀಪಕ ಹೂಡಾ, ರಾಹುಲ್ ತ್ರಿಪಾಠಿ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಯಜುವೇಂದ್ರ ಚಹಲ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಹರ್ಷಲ್ ಪಟೇಲ್, ಅವೇಶ್ ಖಾನ್, ಹರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್
ನಿಮ್ಮ ಕಾಮೆಂಟ್ ಬರೆಯಿರಿ