ಅಗ್ನಿಪಥ ಸೇನಾ ನೇಮಕಾತಿ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಂಡವರಿಗೆ ಪೊಲೀಸ್ ಅನುಮತಿ ಸಿಗುವುದಿಲ್ಲ: ಏರ್ ಚೀಫ್ ಮಾರ್ಷಲ್ ಎಚ್ಚರಿಕೆ

ನವದೆಹಲಿ: ಅಗ್ನಿಪಥ ಸೇನಾ ನೇಮಕಾತಿ ಯೋಜನೆಯನ್ನು ವಿರೋಧಿಸಿ ಯುವಕರು ಬೀದಿಗಿಳಿದಿದ್ದು, ಏರ್ ಚೀಫ್ ಮಾರ್ಷಲ್ ವಿ ಆರ್ ಚೌಧರಿ ಅವರು ಇಂತಹ ಹಿಂಸಾತ್ಮಕ ಹಿನ್ನಡೆಯನ್ನು ನಿರೀಕ್ಷಿಸಿರಲಿಲ್ಲ ಎಂದು ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ಈ ತರಹದ ಪ್ರತಿಭಟನೆಗಳಿಗೆ ಹೆಚ್ಚಿನ ಬೆಲೆ ತೆರಬೇಕಾಗಬಹುದು ಎಂದು ಪ್ರತಿಭಟನೆಯಲ್ಲಿ ಭಾಗವಹಿಸುವ ರಕ್ಷಣಾ ಉದ್ಯೋಗ ಆಕಾಂಕ್ಷಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ನಾವು ಈ ರೀತಿಯ … Continued

ಬಡ್ಡೀಸ್ ಸಿನೆಮಾ ಪ್ರಚಾರ ವಾಹನದ ಮೇಲೆ ವಿದ್ಯುತ್ ಕಂಬ ಬಿದ್ದು ಜಖಂ: ಅದೃಷ್ಟವಶಾತ್‌ ಕನ್ನಡತಿ ನಟ ಕಿರಣ್ ರಾಜ್-ತಂಡ ಪಾರು

ಕನ್ನಡ ಸಿನೆಮಾ ಬಡ್ಡೀಸ್’ ಪ್ರಚಾರದ ವೇಳೆ ಸಿನಿಮಾ ಪ್ರಚಾರದ ವಾಹನ ಜಖಂ ಆಗಿದೆ. ಅದೃಷ್ಟವಶಾತ್‌ ನಟ ಕಿರಣರಾಜ್ ಮತ್ತು ತಂಡದವರು ಪಾರಾಗಿದ್ದಾರೆ. ಕಿರುತೆರೆಯ `ಕನ್ನಡತಿ’ ಸೀರಿಯಲ್ ಮೂಲಕ ಮನೆ ಮಾತಾಗಿರುವ ನಟ ಕಿರಣ ರಾಜ್ ಅವರು ಜೂನ್‌ 24ರಂದು ಬಿಡುಗಡೆ ಆಗಲಿರುವ ‘ಬಡ್ಡೀಸ್’ ಸಿನಿಮಾ ಪ್ರಚಾರಾರ್ಥ ಬೆಳಗಾವಿಯ ಕಾಲೇಜ್‌ ಒಂದಕ್ಕೆ ಹೋಗುವ ವೇಳೆ ಪ್ರಚಾರಕ್ಕಾಗಿ ಸಿದ್ಧಪಡಿಸಿದ್ದ … Continued

ನಟ ಸತೀಶ ವಜ್ರ ಕೊಲೆ ಪ್ರಕರಣ; ಬಾಮೈದನ ಬಂಧಿಸಿದ ಪೊಲೀಸರು

ಬೆಂಗಳೂರು: ಯುವ ನಟ ಸತೀಶ ವಜ್ರ ಅವರ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸತೀಶ್ ವಜ್ರ ಅವರ ಭಾಮೈದ ಸುದರ್ಶನ ಹಾಗೂ ನಾಗೇಂದ್ರ ಎಂಬವರನ್ನು ಪೋಲಿಸರು ಬಂಧಿಸಿದ್ದಾರೆ. ಯುವ ನಟ ಸತೀಶ್ ವಜ್ರ ಕೊಲೆ ಸಂಬಂಧ ಘಟನೆ ನಡೆದ ಕೆಲವೇ ಸಮಯದಲ್ಲಿ ಇಬ್ಬರು ಆರೋಪಿಗಳನ್ನ ಆರ್.ಆರ್ ನಗರ ಪೋಲಿಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೊಲೆಯಾದ ಸತೀಶ ವಜ್ರನ ಹೆಂಡ್ತಿ … Continued

ಅಡಕೆ ಬೆಲೆಯ ಅಂದಾಜು ವೆಚ್ಚ ಪರಿಷ್ಕರಣೆಗೆ ಕೇಂದ್ರಕ್ಕೆ ನಿಯೋಗ : ಧಾರಣೆ ಬಗ್ಗೆ ಆತಂಕ ಬೇಡ ಎಂದು ಸಚಿವ ಅರಗ ಜ್ಞಾನೇಂದ್ರ ಅಭಯ

ಬೆಂಗಳೂರು : ಅಡಕೆ ಧಾರಣೆಯ ಬಗ್ಗೆ ರೈತರು ಆತಂಕಪಡುವ ಅಗತ್ಯವಿಲ್ಲ ಎಂದು ಗೃಹ ಸಚಿವರು ಹಾಗೂ ರಾಜ್ಯ ಅಡಕೆ ಟಾಸ್ಕ್ ಫೋರ್ಸ್ ಅಧ್ಯಕ್ಷ ಅರಗ ಜ್ಞಾನೇಂದ್ರ ಬೆಳೆಗಾರರಿಗೆ ಅಭಯ ನೀಡಿದ್ದಾರೆ. ಕೇಂದ್ರ ಸರ್ಕಾರವು ನಿಗದಿ ಪಡಿಸಿರುವ ಅಡಕೆ ಬೆಲೆಯ ಅಂದಾಜು ವೆಚ್ಚವನ್ನು ಪರಿಷ್ಕರಣೆ ಮಾಡುವಂತೆ ಒತ್ತಾಯಿಸಲು ಕೇಂದ್ರಕ್ಕೆ ನಿಯೋಗ ಹೋಗಿ ಮನವಿ ಮಾಡಲಿದೆ. ಕೇಂದ್ರ ಕೃಷಿ … Continued

ಶಾಲೆ ಬಿಟ್ಟು 30 ವರ್ಷದ ನಂತರ ದ್ವಿತೀಯ ಪಿಯು ಬರೆದು ಫಸ್ಟ್‌ ಕ್ಲಾಸ್‌ನಲ್ಲಿ ತೇರ್ಗಡೆಯಾದ ಮಾಜಿ ಸಚಿವ ಸಾ. ರಾ. ಮಹೇಶ ಪತ್ನಿ!

ಮೈಸೂರು: ಕೆ.ಆರ್.ನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಸಾ.ರಾ.ಮಹೇಶ ಅವರ ಪತ್ನಿ ಅನಿತಾ ಮಹೇಶ ಅವರು 30 ವರ್ಷಗಳ ನಂತರ ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ಈಗ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ. ಕಲಾ ವಿಭಾಗದಲ್ಲಿ 418 ಅಂಕಗಳನ್ನು ಪಡೆದು ಅವರು ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ. ಅನಿತಾ ಮಹೇಶ್‌ ಅವರು 1993ರಲ್ಲಿ ಎಸ್ ಎಸ್.ಎಲ್.ಸಿ … Continued

ಡಿನೋಟಿಫಿಕೇಶನ್‌ ಪ್ರಕರಣ: ಯಡಿಯೂರಪ್ಪಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ

ಬೆಂಗಳೂರು: ಬೆಳ್ಳಂದೂರು ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು, ಶನಿವಾರ ಜಾಮೀನು ಮಂಜೂರು ಮಾಡಿದೆ. ಬೆಳ್ಳಂದೂರು ನಿವಾಸಿ ವಾಸುದೇವ ರೆಡ್ಡಿ ದೂರಿನ ಮೇರೆಗೆ ದಾಖಲಾಗಿರುವ ಪ್ರಕರಣದ ವಿಚಾರಣೆಯನ್ನು ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್​ ಪ್ರಕರಣಗಳ ವಿಶೇಷ ನ್ಯಾಯಾಲಯ ವಿಚಾರಣೆ ನಡೆಸಿತು. ಅರ್ಜಿದಾರರನ್ನು ಪ್ರತಿನಿಧಿಸಿದ್ದ ವಕೀಲ ಕೆ ವಿ ಧನಂಜಯ … Continued

ದಾವೂದ್ ಸಹೋದರನ ಕಡೆಯ ವ್ಯಕ್ತಿಯಿಂದ ಫೋನ್‌ನಲ್ಲಿ ಪ್ರಾಣ ಬೆದರಿಕೆ: ಸಾಧ್ವಿ ಪ್ರಜ್ಞಾ ದೂರು

ಭೋಪಾಲ್: ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ಶನಿವಾರ ಬೆದರಿಕೆ ಕರೆ ಬಂದಿರುವ ಬಗ್ಗೆ ದೂರು ನೀಡಿದ್ದಾರೆ. ಕರೆ ಮಾಡಿದ ವ್ಯಕ್ತಿ ತನ್ನನ್ನು ತಾನು ಪರಾರಿಯಾಗಿರುವ ದರೋಡೆಕೋರ ದಾವೂದ್ ಇಬ್ರಾಹಿಂನ ಸಹೋದರ ಇಕ್ಬಾಲ್ ಕಸ್ಕರ್‌ನ ವ್ಯಕ್ತಿ ಎಂದು ಹೇಳಿದ್ದು, “ಮುಸ್ಲಿಮರ ವಿರುದ್ಧ ವಿಷ ಹರಡಿದ್ದಕ್ಕಾಗಿ” ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. .ಸಾಧ್ವಿ … Continued

ವೇದಿಕೆ ಮೇಲೆಯೇ ಪರಿಷ್ಕೃತ ಪಠ್ಯಪುಸ್ತಕದ ಪ್ರತಿ ಹರಿದು ಹಾಕಿದ ಡಿಕೆಶಿ

ಬೆಂಗಳೂರು: ಶಾಲಾ ಪಠ್ಯಪುಸ್ತಕ ವಿವಾದದ ಹಿನ್ನಲೆಯಲ್ಲಿ, ಇಂದು, ಶನಿವಾರ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಪ್ರತಿಭಟನೆ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರು ಹೊಸ ಪರಿಷ್ಕೃತ ಪಠ್ಯಪುಸ್ತಕವನ್ನು ಹರಿದು ಹಾಕಿದರು. ಕುವೆಂಪು ಪಠ್ಯದಲ್ಲಿನ ಲೋಪ ವಿರೋಧಿಸಿ ವಿಶ್ವಮಾನವ ಕ್ರಾಂತಿಕಾರಿ ಮಹಾಕವಿ ಕುವೆಂಪು ಹೋರಾಟ ಸಮಿತಿ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಪಾಲ್ಗೊಂಡಿದ್ದು … Continued

ದ್ವಿತೀಯ ಪಿಯು ಫಲಿತಾಂಶ: ಧಾರವಾಡ ಜೆಎಸ್‌ಎಸ್‌ ಎಸ್‌ಎಂಪಿಯು ಕಾಲೇಜಿನ ವಿದ್ಯಾರ್ಥಿಗಳ ಉತ್ತಮ ಸಾಧನೆ

ಧಾರವಾಡ: ವಿದ್ಯಾಗಿರಿಯ ಜೆಎಸ್ಎಸ್ ಶ್ರೀ ಮಂಜುನಾಥೇಶ್ವರ ಸ್ವತಂತ್ರ ವಿಜ್ಞಾನ ಮತ್ತು ವಾಣಿಜ್ಯ ಪಿಯು ಕಾಲೇಜಿನ ವಿದ್ಯಾರ್ಥಿಗಳು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ವಿಜ್ಞಾನ ವಿಭಾಗದಲ್ಲಿ ವಿದ್ಯಾರ್ಥಿಗಳಾದ ರೋಹಿಣಿ ಬಿದ್ನೂರಮಠ 600/570 (95%), ತೇಜಶ್ವಿನಿ ನಿಂಗೊಲ್ಲಿ 600/570 (95%) ಅಂಕಗಳನ್ನು ಪಡೆದು ಕಾಲೇಜಿಗೆ ಪ್ರಥಮರಾಗಿದ್ದಾರೆ. ನಂತರದಲ್ಲಿ ಕ್ರಮವಾಗಿ ನಮನ ಭಟ್ 600/558 (93%), … Continued

ಕುಮಟಾ: ದ್ವಿತೀಯ ಪಿಯು ಪರೀಕ್ಷೆಯಲ್ಲಿ ಅನುತ್ತೀರ್ಣ, ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ

ಕುಮಟಾ; ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೊಲನಗದ್ದೆ ಕಡ್ಲೆಯ ವಿದ್ಯಾರ್ಥಿ ಪ್ರಣವ ಈಶ್ವರ ನಾಯಕ (೧೮) ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಕಾರಣ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶನಿವಾರ ಮಧ್ಯಾಹ್ನ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ. ಡಾ.ಎ.ವಿ ಬಾಳಿಗಾ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನದಲ್ಲಿ ವ್ಯಾಸಂಗ ಮಾಡಿದ್ದ … Continued