ಬೆಳಗಾವಿ: ಬೆಳಗಾವಿ ತಾಲೂಕಿನ ಗೌಂಡವಾಡದಲ್ಲಿ ದೇವಸ್ಥಾನ ಜಾಗದ ವಿಚಾರಕ್ಕೆ ನಡೆದ ಕೊಲೆ, ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 26 ಜನ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ.ಬೋರಲಿಂಗಯ್ಯ ಮಾಹಿತಿ ನೀಡಿದ್ದಾರೆ.
ಕೊಲೆ ಪ್ರಕರಣದಲ್ಲಿ 7 ಜನರನ್ನು ಮತ್ತು ದೊಂಬಿ, ಗಲಾಟೆ ನಡೆಸಿದ್ದ 19 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಗ್ರಾಮದಲ್ಲಿ ಬಂದೋಬಸ್ತ್ ಮುಂದುವರೆದಿದೆ. ಪರಿಸ್ಥಿತಿ ಶಾಂತವಾಗಿದೆ. ಸದ್ಯ ಪ್ರಕರಣದ ತನಿಖೆ ಮುಂದುವರೆದಿದೆ. ಕಾಕತಿ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ, ದೊಂಬಿ ಗಲಾಟೆ ಸಂಬಂಧ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.ಮೊದಲು ವಾಹನ ಪಾರ್ಕಿಂಗ್ ವಿಚಾರಕ್ಕೆ ಗಲಾಟೆಯಾಗಿದೆ. ಇದಕ್ಕೂ ಮೊದಲು ದೇವಸ್ಥಾನ ಜಾಗ ಒತ್ತುವರಿ ವಿಚಾರಕ್ಕೆ ವೈಷಮ್ಯವಿದ್ದ ಮಾಹಿತಿ ಇದೆ. ತನಿಖೆ ಬಳಿಕ ಆರೋಪಿಗಳ ವಿವರ ನೀಡಲಾಗುವುದು ಎಂದು ತಿಳಿಸಿದರು.
ನಿಮ್ಮ ಕಾಮೆಂಟ್ ಬರೆಯಿರಿ