ಮೈಸೂರು : ಮೈಸೂರಿಗೆ ಪ್ರಧಾನಿ ಮೋದಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮೋದಿ ಆಗಮನಕ್ಕೆ ಹಿಂದಿ ಹೆಸರಿನಲ್ಲಿ ಅಳವಡಿಸಲಾಗಿರುವ ಫ್ಲೆಕ್ಸ್ ಗಳಿಗೆ ಟಿ.ಎ.ನಾರಾಯಣಗೌಡರ ನೇತೃತ್ವದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಇಂದು, ಭಾನುವಾರ ಸಂಜೆ 5 ಗಂಟೆಯಲ್ಲಿ ಮಸಿ ಬಳಿದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮೈಸೂರು ಭೇಟಿ ಹಿನ್ನೆಲೆಯಲ್ಲಿ ಮೈಸೂರು ರಸ್ತೆಯಲ್ಲಿ ಸಚಿವ ಮುನಿರತ್ನ ನಾಯ್ಡು ಮತ್ತು ಬೆಂಬಲಿಗರು ಹಿಂದಿ ಭಾಷೆಯ ಫ್ಲೆಕ್ಸ್ ಗಳನ್ನು ಅಳವಡಿಸಿದ್ದರು.
ಈ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಕರವೇ ಯುವ ಘಟಕದ ಅಧ್ಯಕ್ಷ ಟಿ.ಎ.ಧರ್ಮರಾಜ್ ನೇತೃತ್ವದಲ್ಲಿ ಕರವೇ ಕಾರ್ಯಕರ್ತರು ಫ್ಲೆಕ್ಸ್ ಗಳಿಗೆ ಮಸಿ ಬಳಿದರು. ಪೊಲೀಸರು ತಡೆದರೂ ಸಹ ಫ್ಲೆಕ್ಸ್ ಗಳಿಗೆ ಮಸಿ ಬಳಿಯಲಾಯಿತು.
ಕರ್ನಾಟಕದಲ್ಲಿ ಹಿಂದಿಹೇರಿಕೆ ಸಹಿಸುವುದಿಲ್ಲ ಎಂಬ ಎಚ್ಚರಿಕೆ ನೀಡಿದರು.
ನಿಮ್ಮ ಕಾಮೆಂಟ್ ಬರೆಯಿರಿ