ಸೊಸೆಯ ಮೇಲೆ ಕೋಪಕ್ಕೆ ರಾದ್ದಾಂತ ಮಾಡಿ ಪೊಲೀಸರ ಮೇಲೆ 45 ಸುತ್ತು ಗುಂಡು ಹಾರಿಸಿದ ಈ ಹಠಮಾರಿ ಮುದುಕ.. ಮೂವರು ಪೊಲೀಸರಿಗೆ ಗಾಯ

ನವದೆಹಲಿ: ಕಾನ್ಪುರದಲ್ಲಿ ಹಿರಿಯ ವ್ಯಕ್ತಿಯೊಬ್ಬರು ಪೊಲೀಸರ ಮೇಲೆ 45 ಸುತ್ತು ಗುಂಡು ಹಾರಿಸಿದ್ದಾರೆ. ಕೇವಲ 300 ರೂ.ಗಳಿಗೆ ತನ್ನ ಸೊಸೆಯೊಂದಿಗೆ ಜಗಳವಾಡಿ ಕೋಪಗೊಂಡ ಮಾವ 3 ಗಂಟೆಗಳ ಕಾಲ ಗದ್ದಲ ಸೃಷ್ಟಿಸಿದ್ದಾರೆ.
ಕೇವಲ 300 ರೂ.ಗಳಿಗಾಗಿ ಪತ್ನಿ, ಮಗ ಮತ್ತು ಸೊಸೆಯನ್ನು ಕೊಠಡಿಯಲ್ಲಿ ಕೂಡಿ ಹಾಕಿ ಬೆಂಕಿ ಹಚ್ಚುವುದಾಗಿ ಬೆದರಿಸಿದ್ದಾರೆ. ಗಾಬರಿಗೊಂಡ ಸೊಸೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೌಟುಂಬಿಕ ಕಲಹ ಎಂದು ಪರಿಗಣಿಸಿ, ಒಬ್ಬ ಇನ್ಸ್‌ಪೆಕ್ಟರ್ ಮತ್ತು ಕೆಲವು ಕಾನ್‌ಸ್ಟೆಬಲ್‌ಗಳು ಜೀಪಿನಲ್ಲಿ ವ್ಯಕ್ತಿಯ ಮನೆಗೆ ಬಂದಿದ್ದಾರೆ.
ಪೊಲೀಸರನ್ನು ನೋಡಿದ ಮುದುಕ ಹೆದರಿ ಛಾವಣಿಯ ಮೇಲೆ ಹತ್ತಿದ್ದಾನೆ. ಅಲ್ಲಿಂದ ತನ್ನ ಪರವಾನಗಿ ಪಡೆದ ಡಬಲ್ ಬ್ಯಾರೆಲ್ ಗನ್ನಿಂದ ಪೊಲೀಸರ ಮೇಲೆ ಗುಂಡು ಹಾರಿಸಲು ಪ್ರಾರಂಭಿಸಿದ್ದಾನೆ. ಮೂರು ಗಂಟೆಗಳ ಕಾಲ ಸುಮಾರು 45 ಸುತ್ತು ಗುಂಡು ಹಾರಿಸಿದ್ದಾನೆ. ಇನ್ಸ್‌ಪೆಕ್ಟರ್ ಮತ್ತು ಇಬ್ಬರು ಕಾನ್‌ಸ್ಟೇಬಲ್‌ಗಳು ಗಾಯಗೊಂಡಿದ್ದಾರೆ. 3 ಗಂಟೆಗಳ ನಂತರ, ಪೂರ್ವ ಡಿಸಿಪಿ ಪ್ರಮೋದಕುಮಾರ್, ಎಸಿಪಿ ಮೃಗಾಂಕಶೇಖರ್ ಪಾಠಕ್, ಎಡಿಸಿಪಿ ರಾಹುಲ್ ಮಿಠಾಯಿ ಮತ್ತು ಆರು ಪೊಲೀಸ್ ಠಾಣೆಗಳ ಪಡೆ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಭಾಯಿಸಿದರು.

ಸೊಸೆಯೊಂದಿಗಿನ ಜಗಳದ ನಂತರ ಈ ರಾದ್ದಾಂತ….
ಶ್ಯಾಮನಗರದ ಸಿ-ಬ್ಲಾಕ್‌ನ ನಿವಾಸಿ ಆರ್‌.ಕೆ. ದುಬೆ (60) ಷೇರು ಮಾರುಕಟ್ಟೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರು ತಮ್ಮ ಪತ್ನಿ ಕಿರಣ್ ದುಬೆ, ಹಿರಿಯ ಮಗ ಸಿದ್ಧಾರ್ಥ್, ಸೊಸೆ ಭಾವನಾ ಮತ್ತು ದಿವ್ಯಾಂಗ್ ಮಗಳು ಚಾಂದಿನಿ ಅವರೊಂದಿಗೆ ಮನೆಯಲ್ಲಿ ವಾಸಿಸುತ್ತಿದ್ದಾರೆ. ಅವರ ಕಿರಿಯ ಮಗ ರಾಹುಲ್ ಮತ್ತು ಸೊಸೆ ಜಯಶ್ರೀ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ
ಭಾನುವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಆರ್.ಕೆ.ದುಬೆ ವಿದ್ಯುತ್ ಬಿಲ್ಲು 300 ರೂ.ನೀಡುವ ವಿಚಾರವಾಗಿ ಸೊಸೆಯೊಂದಿಗೆ ಜಗಳ ಮಾಡಿಕೊಂಡಿದ್ದಾರೆ. ಇದರ ನಂತರ, ವೃದ್ಧ ತನ್ನ ತಾಳ್ಮೆ ಕಳೆದುಕೊಂಡು. ಮನೆಗೆ ಬೆಂಕಿ ಹಚ್ಚಿ ಸುಟ್ಟು ಹಾಕುತ್ತೇನೆ ಎಂದು ಕಿರುಚಾಡುತ್ತಾ ರಕ್ಷಣೆಗೆ ಬಂದ ಪತ್ನಿ ಮತ್ತು ಮಗನನ್ನು ಸೊಸೆಯೊಂದಿಗೆ ಕೊಠಡಿಯಲ್ಲಿ ಕೂಡಿ ಹಾಕಿ ಬೀಗ ಹಾಕಿದ್ದಾನೆ.

ಪ್ರಮುಖ ಸುದ್ದಿ :-   ಶಿಂಧೆ ಬಣದ ಶಿವಸೇನೆ ಸೇರಿದ ಬಾಲಿವುಡ್‌ ನಟ ಗೋವಿಂದ : 14 ವರ್ಷಗಳ ವನವಾಸದ ನಂತರ ರಾಜಕೀಯಕ್ಕೆ

ಪೊಲೀಸರಿಗೆ ಕರೆ ಮಾಡಿದ ಸೊಸೆ
ಮಾವನಿಗೆ ಹೆಸರಿ ಕೊಠಡಿಯೊಳಗಿಂದ ಲಾಕ್‌ ಮಾಡಿಕೊಂಡಿದ್ದ ಸೊಸೆ ಭಾವನಾ ಕೂಡಲೇ ಪೊಲೀಸರಿಗೆ ಕರೆ ಮಾಡಿ ಮಾವನಿಂದ ಕುಟುಂಬವನ್ನು ರಕ್ಷಿಸುವಂತೆ ಕೇಳಿಕೊಂಡಿದ್ದಾರೆ. ಪೊಲೀಸರು ಮನೆಗೆ ತಲುಪಿದ್ದು, ವೃದ್ಧನನ್ನು ಮತ್ತಷ್ಟು ಕೆರಳಿಸಿತು. “ನಾನೇ ತೊಂದರೆಗೊಳಗಾಗಿದ್ದೇನೆ ಮತ್ತು ನೀವು ನನ್ನನ್ನು ಹಿಡಿಯಲು ನನ್ನ ಮನೆಗೆ ಬಂದಿದ್ದೀರಿ” ಎಂದು ಅವರು ಕೂಗಾಡಿದರು. ಇದಾದ ಬಳಿಕ ಒಳಗೆ ಹೋಗಿ ಡಬಲ್ ಬ್ಯಾರಲ್ ಗನ್ ತಂದು ಗೇಟ್ ಬಳಿ ನಿಂತಿದ್ದ ಪೊಲೀಸರ ಮೇಲೆ ಗುಂಡು ಹಾರಿಸಿದ್ದಾನೆ. ಇನ್ಸ್‌ಪೆಕ್ಟರ್ ವಿನೀತ್ ತ್ಯಾಗಿ ಮತ್ತು ಇಬ್ಬರು ಕಾನ್‌ಸ್ಟೇಬಲ್‌ಗಳು ಗಾಯಗೊಂಡಿದ್ದಾರೆ. ಇದಾದ ನಂತರ ಪೊಲೀಸರು ಅಲ್ಲಿಂದ ಸುರಕ್ಷಿತ ದೂರಕ್ಕೆ ಓಡಿ ಹೋಗಿದ್ದಾರೆ.

ಹಿರಿಯ ಅಧಿಕಾರಿಗಳಿಗೆ ಮಾಹಿತಿ
ಚಕೇರಿ ಪೊಲೀಸರು ಗುಂಡಿನ ದಾಳಿಯ ಬಗ್ಗೆ ತಕ್ಷಣ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಡಿಸಿಪಿ ಪೂರ್ವ ಡಿಸಿಪಿ ಪ್ರಮೋದಕುಮಾರ್, ಎಸಿಪಿ ಮೃಗಾಂಕ್ ಶೇಖರ್ ಪಾಠಕ್ ಮತ್ತು ಎಡಿಸಿಪಿ ರಾಹುಲ್ ಅವರು ಪಡೆಯೊಂದಿಗೆ ಸ್ಥಳಕ್ಕೆ ತಲುಪಿದರು. ಇದಾದ ನಂತರವೂ ಆ ವ್ಯಕ್ತಿ ಶಾಂತವಾಗಲಿಲ್ಲ ಮತ್ತು ಪ್ರತಿಯೊಬ್ಬ ಪೊಲೀಸರ ಮೇಲೆ ಗುಂಡು ಹಾರಿಸುತ್ತಲೇ ಇದ್ದ.

45 ಸುತ್ತು ಗುಂಡು ಹಾರಿಸಿದ
ದುಬೆ ಸುಮಾರು 3 ಗಂಟೆಗಳಲ್ಲಿ ಪೊಲೀಸರ ಮೇಲೆ 40 ರಿಂದ 45 ಸುತ್ತು ಗುಂಡು ಹಾರಿಸಿದ್ದಾನೆ. ಡಿಸಿಪಿ ಧ್ವನಿವರ್ಧಕದ ಸಹಾಯದಿಂದ ವೃದ್ಧನ ಮನವೊಲಿಸಲು ಪ್ರಯತ್ನಿಸಿದರು. “ಪೊಲೀಸ್ ಇನ್ಸ್‌ಪೆಕ್ಟರ್ ನನ್ನ ಮನೆಗೆ ಹೇಗೆ ಬಂದರು. ಅವರನ್ನು ಅಮಾನತು ಮಾಡುವವರೆಗೆ ಗುಂಡಿನ ದಾಳಿ ಮುಂದುವರಿಯಲಿದೆ ಎಂದು ಬೆದರಿಕೆ ಹಾಕಿದರು. ಇದಾದ ನಂತರ, ಟೈಪ್ ಮಾಡಿದ ಅಮಾನತು ಪತ್ರವನ್ನು ತೋರಿಸಲು ವೃದ್ಧನಿಗೆ ತೋರಿಸಲು ಡಿಸಿಪಿ ಆದೇಶಿಸಿದರು. ಅವರ ವಾಟ್ಸಾಪ್ ಸಂಖ್ಯೆಗೆ ಪತ್ರ ಕಳುಹಿಸಲಾಗಿಯಿತು. ವೃದ್ಧ ಅದನ್ನು ನೋಡಿದ ನಂತರವೇ ಗುಂಡು ಹಾರಿಸುವುದನ್ನು ನಿಲ್ಲಿಸಿದ್ದಾನೆ. ಇದಾದ ಬಳಿಕ ಪೊಲೀಸ್ ತಂಡ ಆತನನ್ನು ಸೆರೆ ಹಿಡಿಯಿತು.

ಪ್ರಮುಖ ಸುದ್ದಿ :-   ಅಕ್ರಮ ಹಣ ವರ್ಗಾವಣೆ ಪ್ರಕರಣ : ಕೇಜ್ರಿವಾಲಗೆ ದೆಹಲಿ ಹೈಕೋರ್ಟ್‌ ನಿಂದ ಸಿಗದ ಜಾಮೀನು

ಡಬಲ್ ಬ್ಯಾರೆಲ್ ಗನ್, 45 ಖಾಲಿ ಚಿಪ್ಪುಗಳು, 60 ಜೀವಂತ ಕಾಟ್ರಿಡ್ಜ್‌ಗಳು ಪತ್ತೆ
ಆರ್‌.ಕೆ. ದುಬೆಯನ್ನು ಕಸ್ಟಡಿಗೆ ತೆಗೆದುಕೊಂಡ ನಂತರ, ಪೊಲೀಸರು ಆತನ ಪರವಾನಗಿ ಡಬಲ್ ಬ್ಯಾರೆಲ್ ಗನ್ ಅನ್ನು ವಶಪಡಿಸಿಕೊಂಡಿದ್ದಾರೆ. ತನಿಖೆಯಲ್ಲಿ, ಛಾವಣಿಯ ಮೇಲೆ ಸುಮಾರು 45 ಖಾಲಿ ಚಿಪ್ಪುಗಳು ಮತ್ತು 60 ಕ್ಕೂ ಹೆಚ್ಚು ಜೀವಂತ ಕಾಟ್ರಿಡ್ಜ್‌ಗಳು ಕಂಡುಬಂದಿವೆ. ಆರ್‌ಕೆ ದುಬೆ ಬಳಿ ರಿವಾಲ್ವರ್ ಇದೆ ಎಂದು ಮಗ ಮತ್ತು ಸೊಸೆ ಹೇಳಿದ್ದಾರೆ. ಪೊಲೀಸರು ಮನೆಯನ್ನೆಲ್ಲ ಹುಡುಕಿದರೂ ರಿವಾಲ್ವರ್ ಪತ್ತೆಯಾಗಿರಲಿಲ್ಲ. ಇದೀಗ ರಿವಾಲ್ವರ್ ವಶಪಡಿಸಿಕೊಳ್ಳಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.

ಮೂರು ತಿಂಗಳಿಂದ ಹಿರಿಯ ಮಗ-ಸೊಸೆಯೊಂದಿಗೆ ಜಗಳ
“ಹಿರಿಯ ಮಗ ಸಿದ್ಧಾರ್ಥ್ ಪತ್ನಿ ಭಾವನಾ ನನಗೆ ಕಿರುಕುಳ ನೀಡುತ್ತಾಳೆ. ಪದೇ ಪದೇ ಹಣಕ್ಕೆ ಬೇಡಿಕೆ ಇಡುತ್ತಾರೆ. ಆಕೆಯ ಕುಟುಂಬದವರೂ ನನಗೆ ಕಿರುಕುಳ ನೀಡುತ್ತಾರೆ. ಮೂರು ತಿಂಗಳ ಹಿಂದೆ ನಾನು ಪೊಲೀಸರಿಗೆ ದೂರು ನೀಡಿದ್ದೆ ಆದರೆ ಆಕೆಯ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿ ಆರ್‌ಕೆ ದುಬೆ ಪೊಲೀಸರಿಗೆ ಹೇಳಿದ್ದಾನೆ.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement