ಐದನೇ ದಿನವೂ 10 ಗಂಟೆ ಇಡಿ ವಿಚಾರಣೆ ಎದುರಿಸಿದ ರಾಹುಲ್‌ ಗಾಂಧಿ

ನವದೆಹಲಿ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದ ಸಂಬಂಧ ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಂಗಳವಾರ ಸುಮಾರು 10 ಗಂಟೆಗೂ ಹೆಚ್ಚು ಕಾಲ ವಿಚಾರಣೆ ನಡೆಸಿದರು ಎಂದು ಮೂಲಗಳು ತಿಳಿಸಿವೆ. ಮಂಗಳವಾರ ಬೆಳಗ್ಗೆ 11:15ರ ಸುಮಾರಿಗೆ ಇಡಿ ಕಚೇರಿಗೆ ಆಗಮಿಸಿದ ರಾಹುಲ್‌ ಗಾಂಧಿ ಸುಮಾರು 8 ಗಂಟೆ ವಿಚಾರಣೆ ಎದುರಿಸಿ ಅರ್ಧ ಗಂಟೆ … Continued

ಸಿದ್ದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಗಂಗಾಧರ ಕೊಳಗಿ ಆಯ್ಕೆ

ಸಿದ್ದಾಪುರ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಮುಂದಿನ ಮೂರು ವರ್ಷದ ಅವಧಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಗಂಗಾಧರ ಕೊಳಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಯಶವಂತ ನಾಯ್ಕ ತ್ಯಾರ್ಸಿ, ಕಾರ್ಯದರ್ಶಿಯಾಗಿ ರಮೇಶ ಹೆಗಡೆ ಹಾರ್ಸಿಮನೆ ಹಾಗೂ ಖಜಾಂಚಿಯಾಗಿ ಶ್ರೀಧರ ಜಿ.ಹೆಗಡೆ ಮದ್ದಿನಕೇರಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ನಿಕಟಪೂರ್ವ ಅಧ್ಯಕ್ಷ ಗಣೇಶ ಭಟ್ಟ ಹೊಸೂರು,ಜಿಲ್ಲಾ ಕಾರ್ಯನಿರತ ಪತ್ರಕರ್ತರ … Continued

ರಾಷ್ಟ್ರಪತಿ ಹುದ್ದೆಗೆ ಎನ್‌ಡಿಎ ಅಭ್ಯರ್ಥಿಯಾಗಿ ಬುಡಕಟ್ಟು ನಾಯಕಿ, ಮಾಜಿ ರಾಜ್ಯಪಾಲರಾದ ದ್ರೌಪದಿ ಮುರ್ಮು ಆಯ್ಕೆ: ಬೆಂಬಲ ಘೋಷಿಸಿದ ಬಿಜೆಡಿ

ನವದೆಹಲಿ: ರಾಷ್ಟ್ರಪತಿ ಚುನಾವಣೆಗೆ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ(ಎನ್‌ಡಿಎ)ದ ಅಭ್ಯರ್ಥಿಯಾಗಿ ಜಾರ್ಖಂಡ್‌ನ ಮಾಜಿ ರಾಜ್ಯಪಾಲರಾದ ದ್ರೌಪದಿ ಮುರ್ಮು ಅವರ ಹೆಸರನ್ನು ಘೋಷಿಸಲಾಗಿದೆ.ಪಕ್ಷದ ವರಿಷ್ಠರ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರ ಹೆಸರನ್ನು ಘೋಷಿಸಿದರು. ಜಾರ್ಖಂಡ್‌ನ ಮಾಜಿ ಗವರ್ನರ್ ಮುರ್ಮು (64), ಅವರು ಚುನಾಯಿತರಾದರೆ ಉನ್ನತ ಸಾಂವಿಧಾನಿಕ ಹುದ್ದೆಯನ್ನು ಅಲಂಕರಿಸುವ ಬುಡಕಟ್ಟು ಸಮುದಾಯದ ಮೊದಲ … Continued

ಕುಮಟಾ: ದ್ವಿತೀಯ ಪಿಯುದಲ್ಲಿ ಕನ್ನಡಕ್ಕೆ ನೂರಕ್ಕೆ ನೂರು ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ

ಕುಮಟಾ: ಸಾಧನೆ ಮಾಡಬೇಕಾದರೆ ಕಠಿಣ ಪರಿಶ್ರಮ ಬೇಕಾಗುತ್ತದೆ. ವಿದ್ಯಾಥಿಗಳ ಪರಿಶ್ರಮ ಅವರ ಪರೀಕ್ಷೆಯಲ್ಲಿ ತಿಳಿಯುತ್ತದೆ. ಉತ್ತಮವಾಗಿ ಅಂಕ ಬಂದಾಗ ಪೊಷಕರಷ್ಟೇ ಅಲ್ಲ ನಾಡನ ಜನರು ಸಂತಸ ಪಡುತ್ತಾರೆ ಎಂದು ತಾಲೂಕಾ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಲ್.ಭಟ್ಟ ಹೇಳಿದರು. ಅವರು ಡಾ.ಎ.ವಿ.ಬಾಳಿಗಾ ವಾಣಿಜ್ಯ ಮಹಾವಿದ್ಯಾಲಯದಲ್ಲಿ ತಾಲೂಕಾ ಮಟ್ಟದಲ್ಲಿ ದ್ವಿತೀಯ ಪಿಯುಸಿಯಲ್ಲಿ ಕನ್ನಡದಲ್ಲಿ ಅತೀ ಹೆಚ್ಚು ಅಂಕಗಳಿಸಿದ್ದ ವಿದ್ಯಾರ್ಥಿಗಳಿಗೆ ಕುಮಟಾ … Continued

ಮಾಹಿತಿ ನೀಡಲು ತಡಮಾಡಿದ ಪ್ರಾಂಶುಪಾಲರಿಗೆ ಕಪಾಳಮೋಕ್ಷ ಮಾಡಿದ ಶಾಸಕ

ಮಂಡ್ಯ : ಮಂಡ್ಯ ನಗರದ ಸರಕಾರಿ ಐಟಿಐ ಕಾಲೇಜಿನ ಪ್ರಾಂಶುಪಾಲರಿಗೆ ಮಂಡ್ಯ ಶಾಸಕ, ಜೆಡಿಎಸ್ ನಾಯಕ ಎಂ. ಶ್ರೀನಿವಾಸ ಕಪಾಳಮೋಕ್ಷ ಮಾಡಿದ ಘಟನೆ ವರದಿಯಾಗಿದೆ. ಮಂಡ್ಯದ ಉನ್ನತೀಕರಿಸಿದ ನಾಲ್ವಡಿ ಕೃಷ್ಣರಾಜ ಒಡೆಯರ್ ಐಟಿಐ ಕಾಲೇಜು ಉದ್ಘಾಟನೆ ವೇಳೆ ಶಾಸಕ ಎಂ. ಶ್ರೀನಿವಾಸ ಕೇಂದ್ರದ ಪ್ರಾಂಶುಪಾಲ ನಾಗಾನಂದ ಅವರಿಗೆ ಕಪಾಳ ಮೋಕ್ಷ ಮಾಡಿದ್ದಾರೆ. ಐಟಿಐ ಕೇಂದ್ರಕ್ಕೆ ಆಗಮಿಸಿದ … Continued

ಶರದ್ ಪವಾರ್ ವಿರುದ್ಧ ಟ್ವೀಟ್: ಎರಡು ಎಫ್ಐಆರ್‌ಗಳಲ್ಲಿ ನಿಖಿಲ್ ಭಾಮ್ರೆಗೆ ಬಾಂಬೆ ಹೈಕೋರ್ಟ್ ಮಧ್ಯಂತರ ಜಾಮೀನು

ಮುಂಬೈ: ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್ ಅವರ ವಿರುದ್ಧ ಆಕ್ಷೇಪಾರ್ಹ ಟ್ವೀಟ್‌ ಮಾಡಿ ಬಂಧನದಲ್ಲಿರುವ 21 ವರ್ಷದ ವಿದ್ಯಾರ್ಥಿ ನಿಖಿಲ್ ಭಾಮ್ರೆಗೆ ಎರಡು ಎಫ್‌ಐಆರ್‌ಗಳಲ್ಲಿ ಬಾಂಬೆ ಹೈಕೋರ್ಟ್‌ ಮಂಗಳವಾರ ಮಧ್ಯಂತರ ಜಾಮೀನು ನೀಡಿದೆ. ಒಂದು ತಿಂಗಳಿಗಿಂತಲೂ ಹೆಚ್ಚು ಕಾಲ ವಿದ್ಯಾರ್ಥಿ ಜೈಲಿನಲ್ಲಿದ್ದಾನೆ. ಇನ್ನು ಇದಕ್ಕೆ ಅನುಮತಿಸಲಾಗದು. ಪ್ರಕರಣ ಸಾರ್ವಜನಿಕ ಹಿತಾಸಕ್ತಿಯ ಕೆಲ … Continued

ವಿಶ್ವಸಂಸ್ಥೆಗೆ ಭಾರತದ ಕಾಯಂ ಪ್ರತಿನಿಧಿಯಾಗಿ ರುಚಿರಾ ಕಾಂಬೋಜ್ ನೇಮಕ

ನವದೆಹಲಿ: ಭೂತಾನ್‌ಗೆ ಭಾರತದ ರಾಯಭಾರಿ ರುಚಿರಾ ಕಾಂಬೋಜ್, 1987ರ ಬ್ಯಾಚ್‌ನ ಭಾರತೀಯ ವಿದೇಶಾಂಗ ಸೇವೆ (ಐಎಫ್‌ಎಸ್) ಅಧಿಕಾರಿ ಮಂಗಳವಾರ ನ್ಯೂಯಾರ್ಕ್‌ನಲ್ಲಿರುವ ವಿಶ್ವಸಂಸ್ಥೆಗೆ ಭಾರತದ ಕಾಯಂ ಪ್ರತಿನಿಧಿಯಾಗಿ ನೇಮಕಗೊಂಡಿದ್ದಾರೆ. ಕಾಂಬೋಜ್ ಅವರು ಟಿಎಸ್ ತಿರುಮೂರ್ತಿ ನಂತರ ವಿಶವಸಂಸ್ಥೆಗೆ ಭಾರತೀಯ ರಾಯಭಾರಿಯಾಗಲಿದ್ದಾರೆ.. ಪ್ರಸ್ತುತ ಭೂತಾನ್‌ಗೆ ಭಾರತದ ರಾಯಭಾರಿಯಾಗಿರುವ ರುಚಿರಾ ಕಾಂಬೋಜ್ (IFS: 1987), ನ್ಯೂಯಾರ್ಕ್‌ನಲ್ಲಿರುವ ವಿಶ್ವಸಂಸ್ಥೆಗೆ ಭಾರತದ ಮುಂದಿನ … Continued

ಅನಾರೋಗ್ಯ ಪೀಡಿತ ಮಗುವಿನ ತಾಯಿ ಮನವಿಗೆ ಸ್ಪಂದಿಸಿದ ಸಿಎಂ ಬೊಮ್ಮಾಯಿ, 2 ತಾಸಿನಲ್ಲಿ ಉಚಿತ ಚಿಕಿತ್ಸೆಗೆ ವ್ಯವಸ್ಥೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಬಳಿ ಬಂದ ಮಹಿಳೆಯೊಬ್ಬರ ಸಮಸ್ಯೆಯನ್ನು ಕ್ಷಣದಲ್ಲಿ ಬಗೆಹರಿಸಿ, ಅಗತ್ಯ ನೆರವು ಸಿಗುವಂತೆ ಮಾಡಿದ್ದಾರೆ. ಯೋಗ ದಿನಾಚರಣೆ ನಿಮಿತ್ತ ಮೋದಿ ಅವರೊಂದಿಗಿನ ಕಾರ್ಯಕ್ರಮ ಮುಗಿಸಿ ಆರ್‌ಟಿ ನಗರದ ಮನೆಗೆ ಮರಳಿದಾಗ, ಹಸುಗೂಸನ್ನು ಎತ್ತಿಕೊಂಡು ಕಾಯುತ್ತಿದ್ದ ಶಂಕ್ರಮ್ಮ ಎಂಬ ಮಹಿಳೆ ತಮ್ಮ ಸಮಸ್ಯೆಯನ್ನು ಮುಖ್ಯಮಂತ್ರಿ ಬೊಮ್ಮಾಯಿ ಅವರ ಗಮನಕ್ಕೆ ಬಂದಿದ್ದಾರೆ. ಕೂಡಲೇ … Continued

ಬಿಜೆಪಿ ಜೊತೆ ಶಿವಸೇನೆ ಮೈತ್ರಿ ಮಾಡಿಕೊಂಡರೆ ಬಿರುಕು ಉಂಟಾಗುವುದಿಲ್ಲ: ಉದ್ಧವ್ ಠಾಕ್ರೆಗೆ ಹೇಳಿದ ಏಕನಾಥ್ ಶಿಂಧೆ

ಮುಂಬೈ: ಶಿವಸೇನೆ ನಾಯಕ ಮಿಲಿಂದ್ ನಾರ್ವೇಕರ್ ಅವರು ಮಂಗಳವಾರ ಗುಜರಾತ್‌ನ ಸೂರತ್‌ನಲ್ಲಿ ಬೀಡುಬಿಟ್ಟಿರುವ ಏಕನಾಥ್ ಶಿಂಧೆ ಮತ್ತು ಇತರ ಬಂಡಾಯ ಶಾಸಕರನ್ನು ಭೇಟಿಯಾದರು. ಸುಮಾರು ಎರಡು ಗಂಟೆಗಳ ಕಾಲ ನಡೆದ ಸಭೆಯಲ್ಲಿ, ಮಿಲಿಂದ್ ನಾರ್ವೇಕರ್ ಅವರು ಏಕನಾಥ್ ಶಿಂಧೆ ಅವರನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಮತ್ತು ಶಿವಸೇನೆ ನಾಯಕ ಉದ್ಧವ್ ಠಾಕ್ರೆ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡುವಂತೆ ಮಾಡಿದರು … Continued

ನಟ ದಿಗಂತಗೆ ಗಂಭೀರ ಪೆಟ್ಟಾಗಿಲ್ಲ, ಯಾವುದೇ ಆತಂಕ ಬೇಡ: ತಂದೆ ಕೃಷ್ಣಮೂರ್ತಿ ಮಾಹಿತಿ

ಬೆಂಗಳೂರು: ನಟ ದಿಗಂತ್‌ಗೆ ಯಾವುದೇ ಗಂಭೀರ ಪೆಟ್ಟಾಗಿಲ್ಲ. ಆತನ ಬಳಿಯಲ್ಲಿಯೂ ಮಾತನಾಡಿದ್ದೇನೆ. ವೈದ್ಯರ ಬಳಿಯಲ್ಲಿಯೂ ಚರ್ಚಿಸಿದ್ದೇನೆ. ಯಾವುದೇ ಆತಂಕ ಬೇಡ ಎಂಬುದಾಗಿ ನಟ ದಿಗಂತ್ ಅವರ ತಂದೆ ಕೃಷ್ಣಮೂರ್ತಿ ಹೇಳಿದ್ದಾರೆ. ಇಂದು, ಮಂಗಳವಾರ ಮಣಿಪಾಲ್ ಆಸ್ಪತ್ರೆಯ ಬಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಷ್ಟೇ ದಿಗಂತ್ ಜೊತೆಗೆ ಮಾತನಾಡಿ ಬಂದಿದ್ದೇನೆ. ಗಂಭೀರ ಪೆಟ್ಟಾಗಿಲ್ಲ ಎಂದು ಹೇಳಿದ್ದಾರೆ. ಆರೋಗ್ಯ … Continued