ಶಾಸಕಾಂಗ ಪಕ್ಷದ ನಾಯಕ ಸ್ಥಾನದಿಂದ ಏಕನಾಥ್ ಶಿಂಧೆ ವಜಾ ಮಾಡಿದ ಶಿವಸೇನೆ: ಬಾಳಾಸಾಹೇಬರ ಚಿಂತನೆಗಳಿಗೆ ಎಂದಿಗೂ ಮೋಸ ಮಾಡಿಲ್ಲ ಎಂದ ಶಿಂಧೆ

ಮುಂಬೈ: ಏಕನಾಥ ಶಿಂಧೆ ಮತ್ತು ಅವರ ಪಕ್ಷದ ಕೆಲವು ಶಾಸಕರು ಸೂರತ್‌ನಲ್ಲಿ ಮೊಕ್ಕಾಂ ಹೂಡಿರುವ ಹಿನ್ನೆಲೆಯಲ್ಲಿ ಏಕನಾಥ್ ಶಿಂಧೆ ಅವರನ್ನು ಶಾಸಕಾಂಗ ಪಕ್ಷದ ನಾಯಕ ಸ್ಥಾನದಿಂದ ವಜಾ ಮಾಡಲು ಶಿವಸೇನೆ ಮಂಗಳವಾರ ನಿರ್ಧರಿಸಿದ್ದು, ಸೆವ್ರಿ ಶಾಸಕ ಅಜಯ್ ಚೌಧರಿ ಅವರು ಶಿವಸೇನೆಯ ನೂತನ ಶಾಸಕಾಂಗ ಪಕ್ಷದ ನಾಯಕರಾಗಲಿದ್ದಾರೆ.
ಮಹಾರಾಷ್ಟ್ರ ವಿಕಾಸ ಅಘಾಡಿ ಸರ್ಕಾರದ ಕಾರ್ಯನಿರ್ವಹಣೆ ಹಾಗೂ ಸ್ಥಿರತೆಯ ಮೇಲೆ ಪ್ರಶ್ನಾರ್ಥಕ ಚಿಹ್ನೆಗೆ ಕಾರಣವಾದ ವಿಧಾನ ಪರಿಷತ್‌ ಚುನಾವಣೆಯಲ್ಲಿ ಶಂಕಿತ ಅಡ್ಡ ಮತದಾನದ ಒಂದು ದಿನದ ನಂತರ ಸಚಿವ ಶಿಂಧೆ ಮತ್ತು ಅವರ ಪಕ್ಷದ ಕೆಲವು ಶಾಸಕರು ಸೂರತ್‌ನಲ್ಲಿ ಬೀಡುಬಿಟ್ಟಿರುವ ನಂತರ ಮಹಾರಾಷ್ಟ್ರದಲ್ಲಿ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರಕ್ಕೆ ಬಿಕ್ಕಟ್ಟು ಎದುರಾಗಿದೆ.
ಶಿಂಧೆ ಅವರು ಇನ್ನೂ ತಮ್ಮ ನಿಲುವನ್ನು ಸ್ಪಷ್ಟಪಡಿಸದ ಕಾರಣ, ಮಹಾರಾಷ್ಟ್ರ ಬಿಜೆಪಿ ಮುಖ್ಯಸ್ಥ ಚಂದ್ರಕಾಂತ್ ಪಾಟೀಲ್ ಅವರು ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳಿಗೆ ತಮ್ಮ ಪಕ್ಷದ ಯಾವುದೇ ಸಂಬಂಧವನ್ನು ತಳ್ಳಿಹಾಕಿದ್ದಾರೆ. ಆದರೆ ಇದೇವೇಳೆ ಬಿಜೆಪಿಯು ಶಿಂಧೆಯಿಂದ ಸರ್ಕಾರ ರಚಿಸುವ ಪ್ರಸ್ತಾವನೆ ಬಂದರೆ “ಖಂಡಿತವಾಗಿ ಪರಿಗಣಿಸುತ್ತದೆ” ಎಂದು ಹೇಳಿದ್ದಾರೆ.

ದೆಹಲಿಯಲ್ಲಿ ಮಾತನಾಡಿದ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಮಹಾರಾಷ್ಟ್ರ ಸರ್ಕಾರವನ್ನು ಉರುಳಿಸುವ ಪ್ರಯತ್ನ ನಡೆಯುತ್ತಿದೆ, ಅದು ಮೂರನೇ ಬಾರಿಗೆ ನಡೆಯುತ್ತಿದೆ ಎಂದು ಹೇಳಿದರು. ಬೆಳವಣಿಗೆಯು ಶಿವಸೇನೆಯ ಆಂತರಿಕ ವಿಷಯವಾಗಿದ್ದು, ಪರಿಸ್ಥಿತಿಯನ್ನು ಉದ್ಧವ್ ಠಾಕ್ರೆ ನಿಭಾಯಿಸುತ್ತಾರೆ ಎಂದು ಅವರು ಹೇಳಿದರು.
288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಶಿವಸೇನೆ 55 ಶಾಸಕರು, ಎನ್‌ಸಿಪಿ (53), ಕಾಂಗ್ರೆಸ್ (44), ಬಹುಜನ ವಿಕಾಸ್ ಅಗಾಡಿ (ಮೂರು), ಸಮಾಜವಾದಿ ಪಕ್ಷ, ಎಐಎಂಐಎಂ ಮತ್ತು ಪ್ರಹಾರ್ ಜನಶಕ್ತಿ ಪಕ್ಷ ತಲಾ ಎರಡು ಶಾಸಕರನ್ನು ಹೊಂದಿದೆ. ಎಂಎನ್‌ಎಸ್, ಸಿಪಿಐ-ಎಂ, ಪಿಡಬ್ಲ್ಯೂಪಿ, ಸ್ವಾಭಿಮಾನಿ ಪಕ್ಷ, ರಾಷ್ಟ್ರೀಯ ಸಮಾಜ ಪಕ್ಷ, ಜನಸುರಾಜ್ಯ ಶಕ್ತಿ ಪಕ್ಷ ಮತ್ತು ಕ್ರಾಂತಿಕಾರಿ ಶೆಟ್ಕರಿ ಪಕ್ಷ ತಲಾ ಒಬ್ಬ ಶಾಸಕರನ್ನು ಹೊಂದಿದೆ.
13 ಮಂದಿ ಸ್ವತಂತ್ರ ಶಾಸಕರಿದ್ದಾರೆ. ಪ್ರತಿಪಕ್ಷ ಬಿಜೆಪಿ 106 ಶಾಸಕರನ್ನು ಹೊಂದಿದೆ. ಆದಾಗ್ಯೂ, ಎಂವಿಎಯ ಇತರ ಘಟಕಗಳಾದ ಎನ್‌ಸಿಪಿ ಮತ್ತು ಕಾಂಗ್ರೆಸ್ ನಾಯಕರು ರಾಜ್ಯ ಸರ್ಕಾರದ ಸ್ಥಿರತೆಗೆ ಯಾವುದೇ ಅಪಾಯವಿಲ್ಲ ಎಂದು ಪ್ರತಿಪಾದಿಸಿದ್ದಾರೆ.
ಅಶಾಂತಿಯನ್ನು ಶಮನಗೊಳಿಸಲು ಶಿವಸೇನೆಯು ಹೆಣಗಾಡುತ್ತಿರುವಾಗ, ಪಕ್ಷದ ಸಂಸದ ಸಂಜಯ್ ರಾವುತ್ ಅವರು ಶಿಂಧೆ ಅವರೊಂದಿಗೆ ಸಂಪರ್ಕವನ್ನು ಸ್ಥಾಪಿಸಲಾಗಿದೆ ಎಂದು ಹೇಳಿದ್ದಾರೆ, ಅವರು “ಬಾಳಾಸಾಹೇಬ್ ಠಾಕ್ರೆಯ ನಿಷ್ಠಾವಂತ ಶಿವ ಸೈನಿಕ” ಎಂದು ಬಣ್ಣಿಸಿದ್ದಾರೆ.
ಶಿಂಧೆ ಮತ್ತು ಪಕ್ಷದ ಕೆಲವು ಶಾಸಕರ ಹಠಾತ್ ನಾಪತ್ತೆಯಿಂದಾಗಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಪಕ್ಷದ ಶಾಸಕರು ಮತ್ತು ಮುಖಂಡರೊಂದಿಗೆ ಮುಂಬೈನಲ್ಲಿರುವ ತಮ್ಮ ಅಧಿಕೃತ ನಿವಾಸ ‘ವರ್ಷ’ದಲ್ಲಿ ತುರ್ತು ಸಭೆಯನ್ನು ಕರೆದರು.

ಪ್ರಮುಖ ಸುದ್ದಿ :-   ರಾಯಬರೇಲಿಯಿಂದ ಅಕ್ಕನ ವಿರುದ್ಧ ಸ್ಪರ್ಧಿಸಲು ಬಿಜೆಪಿ ನೀಡಿದ್ದ ಆಫರ್‌ ತಿರಸ್ಕರಿಸಿದರೇ ವರುಣ್‌ ಗಾಂಧಿ..?

ಬಾಳಾಸಾಹೇಬರ ಚಿಂತನೆಗಳು -ಬೋಧನೆಗಳಿಗೆ ನಾವು ಎಂದಿಗೂ ಮೋಸ ಮಾಡಿಲ್ಲ: ಶಿಂಧೆ
ಮಹಾರಾಷ್ಟ್ರ MLC ಚುನಾವಣಾ ಫಲಿತಾಂಶದ ನಂತರ 26 ಶಾಸಕರೊಂದಿಗೆ ಅಜ್ಞಾತವಾಸಕ್ಕೆ ಹೋದ ಗಂಟೆಗಳ ನಂತರ, ಶಿವಸೇನೆ ನಾಯಕ ಏಕನಾಥ್ ಶಿಂಧೆ ಅವರು ಟ್ವಿಟರ್‌ನಲ್ಲಿ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ ಮತ್ತು ಅಧಿಕಾರಕ್ಕಾಗಿ ಬಾಳಾಸಾಹೇಬ್ ಅವರ ಬೋಧನೆಗಳಿಗೆ ತಾವು ಮೋಸ ಮಾಡುವುದಿಲ್ಲ ಎಂದು ಹೇಳಿದ್ದಾರೆ.

ತಾವು ಕಟ್ಟಾ ಶಿವಸೈನಿಕರು ಮತ್ತು ಶಿವಸೇನೆಯ ಸಂಸ್ಥಾಪಕ ಬಾಳಾಸಾಹೇಬ್ ತಮಗೆ ಹಿಂದುತ್ವದ ಬಗ್ಗೆ ಕಲಿಸಿದ್ದಾರೆ ಎಂದು ಶಿಂಧೆ ಹೇಳಿದ್ದಾರೆ. ಮಹಾರಾಷ್ಟ್ರ ವಿಧಾನಸಭೆಯಲ್ಲಿ ಪಕ್ಷದ ಶಾಸಕಾಂಗ ಗುಂಪಿನ ನಾಯಕತ್ವದಿಂದ ಶಿಂಧೆ ಅವರನ್ನು ಶಿವಸೇನೆ ತೆಗೆದುಹಾಕಿದ ನಂತರ ನಾವು ಬಾಳಾಸಾಹೇಬರ ಕಟ್ಟಾ ಶಿವಸೈನಿಕರು. ಬಾಳಾಸಾಹೇಬರು ನಮಗೆ ಹಿಂದುತ್ವವನ್ನು ಕಲಿಸಿದರು. ಬಾಳಾಸಾಹೇಬರ ಚಿಂತನೆಗಳು ಮತ್ತು ಆನಂದ್ ದಿಘೆ ಸಾಹೇಬರ ಬೋಧನೆಗಳಿಗೆ ನಾವು ಎಂದಿಗೂ ಮೋಸ ಮಾಡಿಲ್ಲ ಎಂದು ಹೇಳಿದ್ದಾರೆ.
ಮಹಾರಾಷ್ಟ್ರದ 26 ಶಾಸಕರೊಂದಿಗೆ ಶಿಂಧೆ, ಬಿಜೆಪಿ ಆಡಳಿತವಿರುವ ಗುಜರಾತ್‌ನ ಸೂರತ್‌ನಲ್ಲಿರುವ ರೆಸಾರ್ಟ್‌ನಲ್ಲಿ ಮೊಕ್ಕಾಂ ಹೂಡಿದ್ದಾರೆ ಎನ್ನಲಾಗಿದೆ.
ಈ ಕ್ರಮವು ಮಹಾರಾಷ್ಟ್ರದ ಆಡಳಿತಾರೂಢ ಮಹಾ ವಿಕಾಸ್ ಅಘಾಡಿ ಸರ್ಕಾರದೊಳಗೆ ಬಂಡಾಯದ ಊಹಾಪೋಹಗಳಿಗೆ ಉತ್ತೇಜನ ನೀಡಿದೆ.
ಎಂಎಲ್‌ಸಿ ಚುನಾವಣಾ ಫಲಿತಾಂಶದಲ್ಲಿ ಪ್ರತಿಪಕ್ಷ ಬಿಜೆಪಿ ಅಗ್ರಸ್ಥಾನದಲ್ಲಿದೆ, ಆಡಳಿತಾರೂಢ ಸರ್ಕಾರದ ಕೆಲವು ಶಾಸಕರ ಅಡ್ಡ ಮತದಾನದ ಫಲಿತಾಂಶ ಎಂದು ನಂಬಲಾಗಿದೆ.

ಪ್ರಮುಖ ಸುದ್ದಿ :-   ಗೂಢಲಿಪಿ ಬಹಿರಂಗಗೊಳಿಸಲು ಒತ್ತಾಯಿಸಿದರೆ ಭಾರತದಿಂದ ನಿರ್ಗಮಿಸಬೇಕಾಗ್ತದೆ ಎಂದ ವಾಟ್ಸಾಪ್

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement