ಬೆಳಗಾವಿ: ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯ ಕಾಲಿಗೆ, ಮಂಗಳವಾರ ನಸುಕಿನಲ್ಲಿ ಪೊಲೀಸರು ಗುಂಡು ಹೊಡೆದು ಬಂಧಿಸಲಾಗಿದೆ.
ರಾಜು ದೊಡ್ಡಬೊಮ್ಮನವರ ಎಂಬ ರಿಯಲ್ ಎಸ್ಟೇಟ್ ಉದ್ಯಮಿ ಕೊಲೆಯ ಆರೋಪ ಹೊತ್ತಿರುವ ವಿಶಾಲ ಸಿಂಗ್ ಚವ್ಹಾಣ ಎಂಬ ಆರೋಪಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.
ಅನೇಕ ದಿಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಬೆಳಗಾವಿ ವೀರಭದ್ರ ನಗರದ ಮನೆಯೊಂದರಲ್ಲಿ ಸೋಮವಾರ ರಾತ್ರಿ ಬಂದು ಅವಿತು ಕೊಂಡಿದ್ದ ಬಗ್ಗೆ ಮಾಹಿತಿ ಪೊಲೀಸರಿಗೆ ಸಿಕ್ಕಿತ್ತು. ಮಂಗಳವಾರ ಬೆಳಿಗಿನ ಜಾವ 5ರ ಸುಮಾರಿಗೆ ಪೊಲೀಸರು ಆರೋಪಿಯನ್ನು ಬಂಧಿಸಲು ಹೋದಾಗ ಪೊಲೀಸರ ಮೇಲೆಯೇ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ಗುಂಡು ಹಾರಿಸಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಎಸಿಪಿ ನಾರಾಯಣ ಭರಮನಿ ಹೊಡೆದ ಗುಂಡು ಆರೋಪಿ ಕಾಲಿಗೆ ತಗುಲಿದ್ದು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಶಾಲಸಿಂಗ್ ಬಹಳ ಹಿಂದೆ ರೌಡಿಶೀಟರ್ ಆಗಿದ್ದ. ಕಳೆದ ತಿಂಗಳು ರಾಯಲ್ ಎಸ್ಟೇಟ್ ಉದ್ಯಮಿ ರಾಜು ಅವರನ್ನು ಸುಪಾರಿ ಪಡೆದು ಕೊಲೆ ಮಾಡಿದ ಆರೋಪ ಹೊತ್ತಿದ್ದನೆ. ಬಹಳ ದಿನಗಳಿಂದ ತಲೆಮರೆಸಿಕೊಂಡಿದ್ದ. ಮಾರ್ಚ್ 15ರಂದು ಬೆಳಗಾವಿಯ ಭವಾನಿ ನಗರದಲ್ಲಿ ಬೆಳಗ್ಗೆ ಕಾರಿನಲ್ಲಿ ಹೊರಟಿದ್ದ ರಿಯಲ್ ಎಸ್ಟೇಟ್ ಉದ್ಯಮಿ ರಾಜು ದೊಡ್ಡಬೊಮ್ಮನವರ (40) ಅವರನ್ನು ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು, ಅಡ್ಡಗಟ್ಟಿ ಕಣ್ಣಿಗೆ ಖಾರದಪುಡಿ ಎರಚಿ, ಇರಿದು, ಕೊಲೆ ಮಾಡಿ ಪರಾರಿಯಾಗಿದ್ದರು.
ರಾಜು ಮೂರು ವಿವಾಹವಾಗಿದ್ದರು. ಅವರ ಕೊಲೆಗೆ ಎರಡನೇ ಪತ್ನಿ ₹ 10 ಲಕ್ಷ ಸುಫಾರಿ ನೀಡಿದ್ದರು ಎಂದು ಆರೋಪಿಸಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ