ಬಿಬಿಎಂಪಿ ವಾರ್ಡ್‌ಗಳ ಸಂಖ್ಯೆ 243ಕ್ಕೆ ಏರಿಕೆ ಮಾಡಿ ರಾಜ್ಯ ಸರ್ಕಾರದಿಂದ ಗೆಜೆಟ್ ಅಧಿಸೂಚನೆ

ಬೆಂಗಳೂರು: ಬಿಬಿಎಂಪಿ ಚುನಾವಣೆಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದ್ದ ಬೆನ್ನಲ್ಲೇ ಚುನಾವಣೆ ತಯಾರಿ ಶುರುವಾಗಿದೆ. ಈಗ ರಾಜ್ಯ ಸರ್ಕಾರದಿಂದ ಬಿಬಿಎಂಪಿಯ ವಾರ್ಡ್‌ಗಳನ್ನು ಮರು ವಿಂಗಡನೆಗೊಳಿಸಿ, 243ಕ್ಕೆ ಏರಿಕೆ ಮಾಡಿ ಗೆಜೆಟ್ ಅಧಿಸೂಚನೆ ಹೊರಡಿಸಲಾಗಿದೆ. ಈ ಕುರಿತು ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ವಿಶೇಷ ರಾಜ್ಯಪತ್ರ ಹೊರಡಿಸಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಾರ್ಡುಗಳ ಸಂಖ್ಯೆಯನ್ನು 243 … Continued

ಏಕನಾಥ್ ಶಿಂಧೆ, 11 ಬಂಡಾಯ ಶಾಸಕರ ಅನರ್ಹಕ್ಕೆ ಉಪ ಸ್ಪೀಕರ್‌ಗೆ ಅರ್ಜಿ ಸಲ್ಲಿಸಿದ ಉದ್ಧವ್ ಠಾಕ್ರೆ

ಮುಂಬೈ: 12 ಬಂಡಾಯ ಶಾಸಕರ ಅನರ್ಹತೆ ಅರ್ಜಿಗಳೊಂದಿಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಇಂದು ಸರ್ಕಾರ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮತ್ತೆ ಪ್ರಯತ್ನ ಮಾಡಿದ್ದಾರೆ. ಇದು ವಿಶ್ವಾಸ ಮತದ ಸಂದರ್ಭದಲ್ಲಿ ಅವರ ಪರವಾಗಿ ವಿಧಾನಸಭೆಯಲ್ಲಿನ ಸಂಖ್ಯೆಯನ್ನು ತರಲು ಸಹಾಯ ಮಾಡುತ್ತದೆ. ಏಕನಾಥ್ ಶಿಂಧೆ ಅರ್ಜಿ ಅಕ್ರಮ ಎಂದು ಹೇಳಿದ್ದಾರೆ. ಗುವಾಹಟಿಯಲ್ಲಿ ಬೀಡುಬಿಟ್ಟಿರುವ ಬಂಡುಕೋರರ ಸಂಖ್ಯೆ 40 ಕ್ಕೆ … Continued

ಎನ್‌ಐಎ ಮುಖ್ಯಸ್ಥರಾಗಿ ಪಂಜಾಬ್ ಕೇಡರ್‌ನ ಹಿರಿಯ ಐಪಿಎಸ್ ಅಧಿಕಾರಿ ದಿನಕರ್ ಗುಪ್ತಾ ನೇಮಕ

ನವದೆಹಲಿ: ಮುಂಬೈನಲ್ಲಿ 26/11 ದಾಳಿಯ ನಂತರ ರಚಿಸಲಾದ ಭಯೋತ್ಪಾದನಾ ವಿರೋಧಿ ತನಿಖಾ ಸಂಸ್ಥೆಯಾದ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಯ ಹೊಸ ಮಹಾನಿರ್ದೇಶಕರನ್ನಾಗಿ ಪಂಜಾಬ್ ಮಾಜಿ ಡಿಜಿಪಿ ದಿನಕರ್ ಗುಪ್ತಾ ಅವರನ್ನು ಗುರುವಾರ ನೇಮಿಸಲಾಗಿದೆ. ಯೋಗೇಶ್ ಸಿ. ಮೋದಿ ಅವರ ನಿವೃತ್ತಿಯ ನಂತರ ಕಳೆದ ವರ್ಷ ಮೇ ತಿಂಗಳಲ್ಲಿ ಸಿಆರ್‌ಪಿಎಫ್ ಮಹಾನಿರ್ದೇಶಕ ಕುಲದೀಪ್ ಸಿಂಗ್‌ಗೆ ಎನ್‌ಐಎ … Continued

ಮಂಗಳೂರು: ಮೂವರು ಮಕ್ಕಳನ್ನು ಬಾವಿಗೆ ನೂಕಿ ಸಾಯಿಸಿದ ತಂದೆ, ಪತ್ನಿಯನ್ನೂ ನೂಕಿ ಹತ್ಯೆಗೆ ಯತ್ನ

ಮಂಗಳೂರು: ತಂದೆಯೊಬ್ಬ ಶಾಲೆ ಮುಗಿಸಿ ಮನೆಗೆ ಬಂದ ತನ್ನ ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ಸಾಯಿಸಿದ ನಂತರ ಹಾಗೂ ಪತ್ನಿಯೊಂದಿಗೆ ತಾನೂ ಬಾವಿಗೆ ಹಾರಿ ಆತ್ಮಹತ್ಯೆ ಗೆ ಯತ್ನಿಸಿದ ಹೃದಯ ವಿದ್ರಾವಕ ಘಟನೆ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಪಕ್ಷಿಕೆರೆ ಎಂಬಲ್ಲಿ ಗುರುವಾರ ಸಂಜೆ ನಡೆದಿದೆ. ಮೃತ ಮಕ್ಕಳನ್ನು ರಶ್ಮಿತಾ (13), ಉದಯ (11), ದಕ್ಷಿತ್ … Continued

ರಾಷ್ಟ್ರಪತಿ ಸ್ಥಾನಕ್ಕೆ ಯಶವಂತ್ ಸಿನ್ಹಾ ಉತ್ತಮ ಅಭ್ಯರ್ಥಿ ಅಲ್ಲ: ಸಿಪಿಐ(ಎಂ) ಸಂಸದ

ನವದೆಹಲಿ: ರಾಷ್ಟ್ರಪತಿ ಸ್ಥಾನಕ್ಕೆ ಯಶವಂತ್ ಸಿನ್ಹಾ ಅತ್ಯುತ್ತಮ ಅಭ್ಯರ್ಥಿ ಅಲ್ಲ. ಆದರೆ ವಿರೋಧ ಪಕ್ಷಗಳ ಒಗ್ಗಟ್ಟಿನ ದೃಷ್ಟಿಯಿಂದ ಇದನ್ನು ಒಪ್ಪಿಕೊಳ್ಳಬೇಕು ಎಂದು ಪಶ್ಚಿಮ ಬಂಗಾಳದ ಸಿಪಿಐ(ಎಂ)ನ ಏಕೈಕ ಸಂಸದ ಬಿಕಾಶ್ ರಂಜನ್ ಭಟ್ಟಾಚಾರ್ಯ ಗುರುವಾರ ಹೇಳಿದ್ದಾರೆ. ಬಿಜೆಪಿ ಮತ್ತು ತೃಣಮೂಲ ಕಾಂಗ್ರೆಸ್‌ನಲ್ಲಿದ್ದ ಸಿನ್ಹಾ ಅವರ ಉಮೇದುವಾರಿಕೆ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ ಭಟ್ಟಾಚಾರ್ಯ, ಹೆಚ್ಚು ಸ್ವೀಕಾರಾರ್ಹ … Continued

ರಾಷ್ಟ್ರಪತಿ ಚುನಾವಣೆ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಕಣಕ್ಕೆ: ಪ್ರತಿಪಕ್ಷಗಳ ಒಮ್ಮತದ ಬುಡಕ್ಕೇ ಕೈಯಿಟ್ಟ ಬಿಜೆಪಿ…!

ನವದೆಹಲಿ : ಜುಲೈ 18 ರ ಅಧ್ಯಕ್ಷೀಯ ಚುನಾವಣೆಯು ಭಾರತದ ವಿಘಟಿತ ರಾಜಕೀಯ ವಿರೋಧಕ್ಕೆ ದೇಶಾದ್ಯಂತ ತನ್ನ ನೆಲೆಯನ್ನು ಕ್ರೋಢೀಕರಿಸಲು ಮತ್ತು ವಿಸ್ತರಿಸಲು ಒಂದು ಅವಕಾಶವಾಗಿತ್ತು. ಆದರೆ ಅದು ಮೇಲ್ನೋಟಕ್ಕೆ ಸಮರ್ಪಕವಾಗಿ ಮೂಡಿಬರುವಲ್ಲಿ ವಿಫಲವಾಗಿದೆ. 2002 ರಲ್ಲಿ, ಬಿಜೆಪಿ ನೇತೃತ್ವದ ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಭಾರತದ ‘ಮಿಸೈಲ್ ಮ್ಯಾನ್’ ಎಪಿಜೆ ಅಬ್ದುಲ್ ಕಲಾಂ … Continued

ಬೆಳಗಾವಿ ತ್ರಿವಳಿ ಕೊಲೆ ಪ್ರಕರಣ: ಆರೋಪಿ ನಿರ್ದೋಷಿ ಎಂದು ಧಾರವಾಡ ಹೈಕೋರ್ಟ್ ತೀರ್ಪು

ಬೆಳಗಾವಿ: ತಾಯಿ ಹಾಗೂ ಇಬ್ಬರು ಪುಟ್ಟ ಮಕ್ಕಳ ಕೊಲೆ ಪ್ರಕರಣದ ಆರೋಪಿ ಪ್ರವೀಣ ಭಟ್ ಅವರನ್ನು ಧಾರವಾಡದ ಹೈಕೋರ್ಟ್ ಪೀಠ ನಿರ್ದೋಷಿ ಎಂದು ತೀರ್ಪು ನೀಡಿದೆ. ದೇಶದಾದ್ಯಂತ ದೊಡ್ಡ ಸದ್ದು ಮಾಡಿದ್ದ ಈ ತ್ರಿವಳಿ ಕೊಲೆ ಪ್ರಕರಣದಲ್ಲಿ ಬೆಳಗಾವಿ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಲಯವು ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ದೇಶದಾದ್ಯಂತ ಭಾರೀ ಸುದ್ದಿಯಾಗಿದ್ದ ಈ … Continued

ಮದುವೆ ಸಂಭ್ರಮಾಚರಣೆಗೆಂದು ವರ ಹಾರಿಸಿದ ಗುಂಡಿನಿಂದ ಸ್ನೇಹಿತನ ಸಾವು

ಲಕ್ನೋ: ಮದುವೆ ಮೆರವಣಿಗೆ ವೇಳೆ ವರನೊಬ್ಬ ಸಂಭ್ರಮದ ನಿಮಿತ್ತ ಹಾರಿಸಿದ ಗುಂಡು ಅಲ್ಲೇ ಇದ್ದ ಸ್ನೇಹಿತನಿಗೆ ತಗುಲಿ ಆತ ಸಾವಿಗೀಡಾದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮನೀಶ್ ಮಧೇಶಿಯಾ ಎಂಬ ವರ ಮದುವೆ ಮೆರವಣಿಗೆ ಸಮಯದಲ್ಲಿ ಸಂಭ್ರಮದಲ್ಲಿ ಗುಂಡು ಹಾರಿಸಿದ್ದಾನೆ. ಅದು ಯಡವಟ್ಟಾಗಿ ಸ್ನೇಹಿತ ಬಾಬು ಲಾಲ್ ಯಾದವ್ ಎಂಬವರಿಗೆ ತಗುಲಿ ಆತ ಮೃತಪಟ್ಟಿದ್ದಾರೆ. ಸೋನಭದ್ರ … Continued

ಇಸ್ರೊ ನಿರ್ಮಿತ ‘ಜಿಸ್ಯಾಟ್‌-24’ ಉಪಗ್ರಹ ಉಡಾವಣೆ

ಬೆಂಗಳೂರು: ಅತ್ಯಾಧುನಿಕ ಜಿಸ್ಯಾಟ್-24 ಉಪಗ್ರಹವನ್ನು ದಕ್ಷಿಣ ಅಮೆರಿಕದ ಫ್ರೆಂಚ್‌ ಗಯಾನಾದಿಂದ ಗುರುವಾರ ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು ಎಂದು ಇಸ್ರೊ ತಿಳಿಸಿದೆ. ಇಸ್ರೊ ನಿರ್ಮಿತ ಈ ಉಪಗ್ರಹವನ್ನು ನ್ಯೂಸ್ಪೇಸ್‌ ಇಂಡಿಯಾ ಲಿಮಿಟೆಡ್‌ (ಎನ್‌ಎಸ್‌ಐಎಲ್‌) ಉಡಾವಣೆ ಮಾಡಿದೆ. 24-ಕೆಯು ಬ್ಯಾಂಡ್‌ ಸಂವಹನ ಉಪಗ್ರಹವಾಗಿರುವ ಜಿಸ್ಯಾಟ್‌-24ನ ಒಟ್ಟು ತೂಕ 4,180 ಕೆ.ಜಿ ಎಂದು ಇಸ್ರೊ ತಿಳಿಸಿದೆ. ಏರಿಯನ್ 5 ಎರಡು … Continued

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಜುಲೈ ಕೊನೆಯಲ್ಲಿ ಹೇಳಿಕೆ ದಾಖಲಿಸಲು ಸೋನಿಯಾ ಗಾಂಧಿಗೆ ಸೂಚಿಸಿದ ಇ.ಡಿ

ನವದೆಹಲಿ: ನ್ಯಾಷನಲ್‌ ಹೆರಾಲ್ಡ್‌ ಪತ್ರಿಕೆಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದ ವಿಚಾರಣೆಗೆ ಹಾಜರಾಗುವ ದಿನಾಂಕ ಮುಂದೂಡಲು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಅವರು ಸಲ್ಲಿಸಿದ್ದ ಮನವಿಯನ್ನು ಜಾರಿ ನಿರ್ದೇಶನಾಲಯ (ಇ.ಡಿ) ಪುರಸ್ಕರಿಸಿದೆ. ಕೋವಿಡ್ ಮತ್ತು ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿರುವ ಸೋನಿಯಾ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದು, ವೈದ್ಯರು ಅವರಿಗೆ ಮನೆಯಲ್ಲಿಯೇ ಇದ್ದು ವಿಶ್ರಾಂತಿ ಪಡೆಯಲು … Continued