ಉಪಚುನಾವಣೆ ಫಲಿತಾಂಶ: ಮುಂದುವರಿದ ಬಿಜೆಪಿ ಗೆಲುವಿನ ಓಟ, ತ್ರಿಪುರಾ ಸಿಎಂಗೆ ಗೆಲುವು, ಎಸ್‌ಪಿಯಿಂದ ರಾಂಪುರ ಲೋಕಸಭಾ ಸ್ಥಾನ ಕಸಿದುಕೊಂಡ ಬಿಜೆಪಿ, ಪಂಜಾಬ್‌ನಲ್ಲಿ ಆಪ್‌ಗೆ ಹಿನ್ನಡೆ

ನವದೆಹಲಿ: ಬಿಜೆಪಿ ತನ್ನ ಗೆಲುವಿನ ಓಟವನ್ನು ಮುಂದುವರೆಸಿದೆ, ತ್ರಿಪುರಾ ಉಪಚುನಾವಣೆಯಲ್ಲಿ ನಾಲ್ಕರಲ್ಲಿ ಮೂರು ಸ್ಥಾನಗಳನ್ನು ಗೆದ್ದುಕೊಂಡಿತು ಮತ್ತು ಉತ್ತರ ಪ್ರದೇಶದ ಸಮಾಜವಾದಿ ಪಕ್ಷದಿಂದ ಬಿಜೆಪಿಯು ರಾಮಪುರ ಲೋಕಸಭಾ ಕ್ಷೇತ್ರವನ್ನ ತನ್ನ ತೆಕ್ಕೆಗೆ ತೆಗೆದುಕೊಂಡಿತು. ಏತನ್ಮಧ್ಯೆ, ಪಂಜಾಬ್‌ನಲ್ಲಿ ಆಡಳಿತ ನಡೆಸುತ್ತಿರುವ ಆಮ್ ಆದ್ಮಿ ಪಕ್ಷವು ಸಂಗ್ರೂರ್ ಲೋಕಸಭಾ ಕ್ಷೇತ್ರವನ್ನು ಶಿರೋಮಣಿ ಅಕಾಲಿದಳ (ಅಮೃತಸರ) ಅಭ್ಯರ್ಥಿ ವಿರುದ್ಧ ಸೋಲುವ ಮೂಲಕ ಹಿನ್ನಡೆ ಅನುಭವಿಸಿತು.
ತ್ರಿಪುರಾದಲ್ಲಿ, ಮುಖ್ಯಮಂತ್ರಿ ಮಾಣಿಕ್ ಸಹಾ ಬಿಜೆಪಿ ಟಿಕೆಟ್‌ನಲ್ಲಿ ಟೌನ್ ಬೋರ್ಡೋವಾಲಿ ಸ್ಥಾನದಲ್ಲಿ ಗೆಲುವು ಸಾಧಿಸಿದರು. ಆದರೆ ಕಾಂಗ್ರೆಸ್ ಅಗರ್ತಲಾ ಸ್ಥಾನವನ್ನು 3163 ಮತಗಳಿಂದ ಗೆದ್ದಿದೆ.
ಐದು ರಾಜ್ಯಗಳು ಮತ್ತು ದೆಹಲಿಯಲ್ಲಿ ವ್ಯಾಪಿಸಿರುವ ಮೂರು ಲೋಕಸಭೆ ಮತ್ತು ಏಳು ವಿಧಾನಸಭೆ ಸ್ಥಾನಗಳ ಮತಗಳ ಎಣಿಕೆ ಜೂನ್ 26 ರಂದು ಭಾನುವಾರ ನಡೆಯಿತು.

ಸಂಪೂರ್ಣ ಫಲಿತಾಂಶಗಳು ಇಲ್ಲಿವೆ.

ತ್ರಿಪುರ
ತ್ರಿಪುರಾದಲ್ಲಿ ನಡೆದ ಉಪಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಮೂರು ವಿಧಾನಸಭೆ ಸ್ಥಾನಗಳನ್ನು ಗೆದ್ದುಕೊಂಡಿತು ಮತ್ತು ಕಾಂಗ್ರೆಸ್ ಒಂದನ್ನು ಗೆದ್ದುಕೊಂಡಿತು. ಮುಖ್ಯಮಂತ್ರಿ ಮಾಣಿಕ್ ಸಹಾ ಅವರು ಟೌನ್ ಬರ್ಡೋವಾಲಿ ಕ್ಷೇತ್ರವನ್ನು 6,104 ಮತಗಳಿಂದ ಗೆದ್ದಿದ್ದಾರೆ. ಬಿಪ್ಲಬ್ ದೇಬ್ ಅವರ ಹಠಾತ್ ರಾಜೀನಾಮೆಯ ನಂತರ ಕಳೆದ ತಿಂಗಳು ಪ್ರಮಾಣವಚನ ಸ್ವೀಕರಿಸಿದ ಸಹಾ ಅವರು ಮುಖ್ಯಮಂತ್ರಿಯಾಗಿ ಮುಂದುವರಿಯಲು ಈ ಚುನಾವಣೆಯಲ್ಲಿ ಗೆಲ್ಲಲೇ ಬೇಕಿತ್ತು. ಒಟ್ಟು ನಾಲ್ಕು ಸ್ಥಾನಗಳ ಪೈಕಿ ಮೂರು ಸ್ಥಾನಗಳನ್ನು ಬಿಜೆಪಿ ಗೆದ್ದುಕೊಂಡಿದೆ.
ಗೆಲುವಿನ ನಂತರ, 60 ಸದಸ್ಯರ ವಿಧಾನಸಭೆಯಲ್ಲಿ ಬಿಜೆಪಿ 36 ಶಾಸಕರನ್ನು ಹೊಂದಿದೆ ಮತ್ತು ಅದರ ಮಿತ್ರ ಪಕ್ಷವಾದ ಐಪಿಎಫ್‌ಟಿ ಎಂಟು ಶಾಸಕರನ್ನು ಹೊಂದಿದೆ.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ

ಉತ್ತರ ಪ್ರದೇಶ
ಬಿಜೆಪಿಯ ಘನಶ್ಯಾಮ್ ಲೋಧಿ ಅವರು ರಾಮ್‌ಪುರ ಸಂಸದೀಯ ಸ್ಥಾನವನ್ನು 40,000 ಕ್ಕೂ ಹೆಚ್ಚು ಮತಗಳಿಂದ ಗೆಲ್ಲುವ ಮೂಲಕ ಸಮಾಜವಾದಿ ಪಕ್ಷದಿಂದ ಈ ಸ್ಥಾನವನ್ನು ಬಿಜೆಪಿ ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಉತ್ತರ ಪ್ರದೇಶ ವಿಧಾನಸಭೆಗೆ ಆಯ್ಕೆಯಾದ ನಂತರ ಅಜಂ ಖಾನ್ ರಾಜೀನಾಮೆಯಿಂದ ಉಪಚುನಾವಣೆ ಅನಿವಾರ್ಯವಾಯಿತು. ಲೋಧಿ ಸಮಾಜವಾದಿ ಪಕ್ಷದ ಅಭ್ಯರ್ಥಿ ಮತ್ತು ಅಜಂ ಖಾನ್ ಅವರ ದೀರ್ಘಕಾಲದ ಸಹವರ್ತಿ ಅಸಿಮ್ ರಾಜಾ ಅವರನ್ನು ಸೋಲಿಸಿದರು.
ಅಜಂಗಢದಲ್ಲಿ ಬಿಜೆಪಿಯ ದಿನೇಶ್ ಲಾಲ್ ಯಾದವ್ ‘ನಿರಾಹುವಾ’ 10,000 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.

ಪಂಜಾಬ್
ಆಡಳಿತಾರೂಢ ಆಮ್ ಆದ್ಮಿ ಪಕ್ಷಕ್ಕೆ (ಎಎಪಿ) ದೊಡ್ಡ ಹಿನ್ನಡೆಯಾಗಿದ್ದು, ಎಸ್‌ಎಡಿ (ಅಮೃತಸರ) ಅಭ್ಯರ್ಥಿ ಸಿಮ್ರಂಜಿತ್ ಸಿಂಗ್ ಮಾನ್ ಅವರು ಸಂಗ್ರೂರ್ ಲೋಕಸಭಾ ಕ್ಷೇತ್ರದಲ್ಲಿ ತಮ್ಮ ಸಮೀಪದ ಎಎಪಿ ಪ್ರತಿಸ್ಪರ್ಧಿ ಗುರ್ಮೈಲ್ ಸಿಂಗ್ ವಿರುದ್ಧ 7,000 ಮತಗಳಿಂದ ಗೆದ್ದಿದ್ದಾರೆ. ಸಿಮ್ರಂಜಿತ್ ಸಿಂಗ್ ಮಾನ್, 77, ಮಾಜಿ ಸಂಸದ ಮತ್ತು SAD (ಅಮೃತಸರ) ಅಧ್ಯಕ್ಷರಾಗಿದ್ದಾರೆ.

ದೆಹಲಿ
ರಾಜಿಂದರ್ ನಗರ ವಿಧಾನಸಭಾ ಉಪಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ದುರ್ಗೇಶ್ ಪಾಠಕ್ ಅವರು ಬಿಜೆಪಿ ಅಭ್ಯರ್ಥಿ ರಾಜೇಶ್ ಭಾಟಿಯಾ ಅವರನ್ನು 11,000 ಕ್ಕೂ ಹೆಚ್ಚು ಮತಗಳ ಅಂತರದಿಂದ ಸೋಲಿಸಿದ್ದಾರೆ. ಅಂತಿಮ ಮತದಾನದ ಅಂಕಿಅಂಶಗಳು ಇನ್ನೂ ಹೊರಬರಬೇಕಾಗಿದೆ.
ಪಕ್ಷದ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಎಎಪಿ ನಾಯಕರು ಉಪಚುನಾವಣೆಯಲ್ಲಿ ಜಯಗಳಿಸಿದ ಪಾಠಕ್ ಅವರನ್ನು ಅಭಿನಂದಿಸಿದ್ದಾರೆ. ಎಎಪಿ ನಾಯಕ ರಾಘವ್ ಚಡ್ಡಾ ಅವರು ಇತ್ತೀಚೆಗೆ ರಾಜ್ಯಸಭೆಗೆ ಆಯ್ಕೆಯಾದ ನಂತರ ಸ್ಥಾನವನ್ನು ತೊರೆದ ಹಿನ್ನೆಲೆಯಲ್ಲಿ ಉಪಚುನಾವಣೆ ಎದುರಾಗಿತ್ತು.
ಜಾರ್ಖಂಡ್
ಮಂದರ್ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶಿಲ್ಪಿ ನೇಹಾ ಟಿರ್ಕಿ ಪ್ರಸ್ತುತ 11,245 ಮತಗಳಿಂದ ಮುನ್ನಡೆಯಲ್ಲಿದ್ದಾರೆ.
ಆಂಧ್ರಪ್ರದೇಶ
ಆಂಧ್ರಪ್ರದೇಶದ ಆತ್ಮಕೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಆಡಳಿತಾರೂಢ ವೈಎಸ್‌ಆರ್ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದು, ವೈಎಸ್‌ಆರ್‌ಸಿಪಿಯ ಮೇಕಪತಿ ವಿಕ್ರಮ್ ರೆಡ್ಡಿ ಅವರು ತಮ್ಮ ಪ್ರತಿಸ್ಪರ್ಧಿ ಬಿಜೆಪಿಯ ಭರತ್ ಕುಮಾರ್ ಯಾದವ್ ವಿರುದ್ಧ 50,654 ಮತಗಳ ಮುನ್ನಡೆ ಸಾಧಿಸಿದ್ದಾರೆ.

ಪ್ರಮುಖ ಸುದ್ದಿ :-   ದೆಹಲಿ ವಕ್ಫ್ ಬೋರ್ಡ್ ಹಗರಣ : 9 ತಾಸುಗಳ ವಿಚಾರಣೆಯ ನಂತರ ಎಎಪಿ ನಾಯಕ ಅಮಾನತುಲ್ಲಾ ಖಾನ್ ಬಂಧಿಸಿದ ಇ.ಡಿ.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement