ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಎದುರು ಶವ ತಂದಿಟ್ಟು ಪ್ರತಿಭಟನೆ

ಬೆಳಗಾವಿ : ಸ್ಮಶಾನಕ್ಕೆ ಹೋಗಲು ದಾರಿ ಮಾಡಿಕೊಡುವಂತೆ ಒತ್ತಾಯಿಸಿ ಶವ ತಂದು ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ.
ಸವದತ್ತಿ ತಾಲೂಕಿನ ಏಣಗಿ ಗ್ರಾಮದಲ್ಲಿ ಹಿಂದೂ ಮತ್ತು ಮುಸ್ಲಿಂ ಸಮುದಾಯದವರಿಗೆ ಸ್ಮಶಾನಕ್ಕೆ ಹೋಗಲು ದಾರಿಯಿಲ್ಲ. ಇದರಿಂದ ಬೇಸತ್ತ ಗ್ರಾಮಸ್ಥರು ಶವದೊಂದಿಗೆ ಆಗಮಿಸಿ ಪ್ರತಿಭಟಿಸಿದರು. ಹಾಗೂ ತಕ್ಷಣವೇ ದಾರಿ ಮಾಡಿಕೊಡುವಂತೆ ಮನವಿ ಮಾಡಿದರು.ಪೊಲೀಸರ ಮನವೊಲಿಸಲು ಪ್ರಯತ್ನಿಸಿದರು. ಆದರೆ, ನಾಗರಿಕರು ತಮ್ಮ ಪ್ರತಿಭಟನೆ ನಿಲ್ಲಿಸಲಿಲ್ಲ. ಕೊನೆಗೂ ಜಿಲ್ಲಾಧಿಕಾರಿಗಳ ಸ್ಮಶಾನಕ್ಕೆ ಹೋಗಲು ದಾರಿ ಮಾಡಿಕೊಡುವುದಾಗಿ ಭರವಸೆ ನೀಡಿದ ನಂತರ ನಾಗರಿಕರು ಪ್ರತಿಭಟನೆ ಹಿಂಪಡೆದುಕೊಂಡರು.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಬಿಜೆಪಿಯಿಂದ ಉಚ್ಚಾಟನೆ ಮಾಡಿದ್ದಕ್ಕೆ ಹೆದರಲ್ಲ: ಕೆ.ಎಸ್.ಈಶ್ವರಪ್ಪ

ನಿಮ್ಮ ಕಾಮೆಂಟ್ ಬರೆಯಿರಿ

advertisement