ಗುತ್ತಿಗೆದಾರರಿಂದ ಲಂಚ ಪಡೆದ ಆರೋಪ: ಹೆದ್ದಾರಿ ಅಧಿಕಾರಿ ವಿರುದ್ಧ ಸಿಬಿಐ ತನಿಖೆ

ಬೆಂಗಳೂರು : ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (ಎನ್‌ಎಚ್‌ಎಐ) ಚಿತ್ರದುರ್ಗ ಯೋಜನಾ ಅನುಷ್ಠಾನ ಘಟಕದ ಯೋಜನಾ ನಿರ್ದೇಶಕ ಶ್ರೀನಿವಾಸುಲು ನಾಯ್ಡು ವಿರುದ್ಧ ಸಿಬಿಐ ಅಧಿಕಾರಿಗಳು, ತನಿಖೆ ಆರಂಭಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಭೂಸ್ವಾಧೀನಕ್ಕೆ ಸಂಬಂಧಿಸಿ ದೇವನಹಳ್ಳಿಯ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜೂನ್‌ 22ರಂದು ನಾಯ್ಡು ಭಾಗವಹಿಸಿದ್ದರು. ಗುತ್ತಿಗೆದಾರರಿಂದ ಲಂಚದ ಹಣ ಸಂಗ್ರಹಿಸಿ ಆಂಧ್ರಪ್ರದೇಶಕ್ಕೆ ಸಾಗಿಸುತ್ತಿದ್ದ ಮಾಹಿತಿ ಆಧರಿಸಿ ಸಿಬಿಐ ಕಾರ್ಯಾಚರಣೆ ನಡೆಸಿತ್ತು. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲೇ ಆರೋಪಿಯು ಪ್ರಯಾಣಕ್ಕೆ ಬಳಸುತ್ತಿದ್ದ ವಾಹನದ ಶೋಧ ನಡೆಸಿದಾಗ ಕಾರಿನಲ್ಲಿ ಸಾಗಿಸುತ್ತಿದ್ದ ₹ 3.5 ಲಕ್ಷ ನಗದು ಪತ್ತೆಯಾಗಿತ್ತು. ಈ ಹಣಕ್ಕೆ ದಾಖಲೆ ಒದಗಿಸಲು ಅಧಿಕಾರಿ ವಿಫಲರಾಗಿದ್ದು, ಅವರ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಎಫ್‌ಐಆರ್‌ ದಾಖಲಿಸಲಾಗಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಏಪ್ರಿಲ್‌ 20ರಂದು ಕರ್ನಾಟಕಕ್ಕೆ ಪ್ರಧಾನಿ ಮೋದಿ, ಎರಡು ಚುನಾವಣಾ ಸಮಾವೇಶದಲ್ಲಿ ಭಾಗಿ

ನಿಮ್ಮ ಕಾಮೆಂಟ್ ಬರೆಯಿರಿ

advertisement