ಶಿವಮೊಗ್ಗ: ಹಿಂದೂ ಸಂಘಟನೆಗಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಅಧಿಕಾರಿಗಳು ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು, ಗುರುವಾರ ಶಿವಮೊಗ್ಗ ಜಿಲ್ಲೆಯ 18 ಕಡೆ ಕ್ಷಿಪ್ರ ಕಾರ್ಯಾಚರಣೆ ನಡೆಸಿತು.
ಎನ್ಐಎ ಅಧಿಕಾರಿಗಳು ಶಿವಮೊಗ್ಗಕ್ಕೆ ಬುಧವಾರ ರಾತ್ರಿ ಬಂದಿಳಿದಿದ್ದು, ಇಂದು ಬೆಳಗ್ಗೆ ನಾಲ್ಕು ರಾಜ್ಯಗಳ ಹಿರಿಯ ಅಧಿಕಾರಿಗಳು, ಜಿಲ್ಲೆಯ ಅಧಿಕಾರಿಗಳನ್ನೂ ಸೇರಿ ಒಟ್ಟು 90 ಅಧಿಕಾರಿಗಳ ತಂಡ ತನಿಖೆಯ ಕಾರ್ಯಾಚರಣೆ ನಡೆಸಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ 18 ಕಡೆ ದಾಳಿ ನಡೆಸಲಾಗಿದ್ದು, ಹರ್ಷ ಪ್ರಕರಣದಲ್ಲಿ ಕೇಳಿ ಬಂದ ಆರೋಪಿಗಳ ಕುಟುಂಬದವರು, ಅವರ ಸಂಬಂಧಿಕರ ವಿಚಾರಣೆ ಮಾಡಲಾಗಿದೆ. ಅಲ್ಲದೆ, ಹರ್ಷ ಕೊಲೆ ನಡೆದ ಸ್ಥಳ, ಅವರ ನಿವಾಸ, ಅವರು ಹೆಚ್ಚಾಗಿ ಓಡಾಡುತ್ತಿದ್ದ ಸ್ಥಳ, ಆರೋಪಿಗಳು ಹತ್ಯೆಗೆ ಸಂಚು ರೂಪಿಸಿದ್ದ ಸ್ಥಳ, ಆರೋಪಿಗಳು ಆಶ್ರಯ ಪಡೆದ ಸ್ಥಳ ಸೇರಿ 18 ಕಡೆ ಭೇಟಿ ನೀಡಿ ತಪಾಸಣೆ ನಡೆಸಿದ್ದಾರೆ.
ವಿಚಾರಣೆ ವೇಳೆ ಅಧಿಕಾರಿಗಳು ಮಹತ್ವದ ಮಾಹಿತಿ ಕಲೆ ಹಾಕಿದ್ದಾರೆ ಎನ್ನಲಾಗಿದ್ದು ಇದುವರೆಗೆ ಒಟ್ಟು 450 ಮಂದಿಯನ್ನು ಎನ್ಐಎ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ ಎನ್ನಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ