ಉದಯಪುರ ಟೈಲರ್ ಹತ್ಯೆ ಪ್ರಕರಣ: ಮತ್ತಿಬ್ಬರನ್ನು ಬಂಧಿಸಿದ ಪೊಲೀಸರು

ಉದಯಪುರ (ರಾಜಸ್ಥಾನ): ಉದಯಪುರ ಟೈಲರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರನ್ನು ಬಂಧಿಸಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಇಬ್ಬರನ್ನು ಬಂಧಿಸಲಾಗಿದೆ. ಅವರು ಸಂಪೂರ್ಣ ಅಪರಾಧದ ಹಿಂದೆ ಸಂಚು ಮತ್ತು ತಯಾರಿಯಲ್ಲಿ ಭಾಗಿಯಾಗಿದ್ದಾರೆ” ಎಂದು ಐಜಿ ಪ್ರಫುಲ್ಲ ಕುಮಾರ್ ತಿಳಿಸಿದ್ದಾರೆ. ಗುರುವಾರ ಪ್ರಫುಲ್ಲ ಕುಮಾರ್ ಅವರನ್ನು ಉದಯಪುರ ಐಜಿಯಾಗಿ ನೇಮಿಸಲಾಗಿದೆ.

ಅಮಾನತುಗೊಂಡ ಬಿಜೆಪಿ ನಾಯಕಿನೂಪುರ್ ಶರ್ಮಾ ಅವರನ್ನು ಬೆಂಬಲಿಸಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ ಮಾಡಿದ್ದಾರೆ ಎಂಬ ಕಾರಣಕ್ಕೆ ಹತ್ಯೆಗೀಡಾದ ಟೈಲರ್ ಕನ್ಹಯ್ಯಾ ಲಾಲ್‌ಗೆ ಭದ್ರತೆ ನೀಡದಿದ್ದಕ್ಕಾಗಿ ಉದಯಪುರ ಪೊಲೀಸರು ತೀವ್ರ ಟೀಕೆಗೆ ಗುರಿಯಾಗಿದ್ದರು. ಟೈಲರ್ ಕನ್ಹಯ್ಯಾ ಕುಮಾರ್ ಅವರನ್ನು ಅವರ ಅಂಗಡಿಯೊಳಗೆ ಇಬ್ಬರು ವ್ಯಕ್ತಿಗಳು ಕೊಂದಿದ್ದಾರೆ.
ಪ್ರಮುಖ ಆರೋಪಿಗಳಲ್ಲದೆ, ಸಂಪರ್ಕದಲ್ಲಿದ್ದ ಇತರ ಮೂವರನ್ನು ಪೊಲೀಸರು ನಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ರಾಜಸ್ಥಾನ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಎಂಎಲ್ ಲಾಥರ್ ಹೇಳಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement