ದೇವೇಗೌಡರ ಕುರಿತು ಆಕ್ಷೇಪಾರ್ಹ ಹೇಳಿಕೆ: ಕ್ಷಮೆಯಾಚಿಸಿದ ಕೆ.ಎನ್‌.ರಾಜಣ್ಣ

ತುಮಕೂರು : ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ಎದುರಿಸಿದ ನಂತರ ಕಾಂಗ್ರೆಸ್ ನಾಯಕ ಕೆ.ಎನ್. ರಾಜಣ್ಣ ಈಗ ತಮ್ಮ ಹೇಳಿಕೆಗೆ ಕ್ಷಮೆ ಕೇಳಿದ್ದಾರೆ.
ನನ್ನ ಹೇಳಿಕೆಯಿಂದ ದೇವೇಗೌಡರ ಮನಸ್ಸಿಗೆ ನೋವಾಗಿದ್ದರೆ ಕ್ಷಮೆ ಇರಲಿ. ಈ ನಾಡಿಗೆ ಅವರು ನೀಡಿದ ಕೊಡುಗೆ ಅಮೂಲ್ಯ. ಅವರ ಕೊಡುಗೆಗಳನ್ನು ಸ್ಮರಿಸುವ ನಿಯತ್ತು ನನಗಿದೆ. ಇಂದು ಅಥವಾ ನಾಳೆ ದೇವೇಗೌಡರನ್ನು ಭೇಟಿಯಾಗಿ ಮಾತನಾಡುವೆ ಎಂದು ಹೇಳಿದ್ದಾರೆ. ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರು ಈಗ ಇಬ್ಬರ ಮೇಲೆ ಕೈಹಾಕಿಕೊಂಡು ಹೋಗುತ್ತಿದ್ದಾರೆ, ನಾಲ್ವರ ಮೇಲೆ ಹೋಗುವುದು ಹತ್ತಿರದಲ್ಲೇ ಇದೆ ಎಂದು ಹೇಳಿಕೆ ನೀಡಿದ ನಂತರ ರಾಜಣ್ಣ ವ್ಯಾಪಕ ಟೀಕೆಗೆ ಗುರಿಯಾಗಿದ್ದರು.

ಅವರ ಪಕ್ಷವಾದ ಕಾಂಗ್ರೆಸ್ ನಾಯಕರೇ ರಾಜಣ್ಣ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ರಾಜಣ್ಣ ಹೇಳಿಕೆಯನ್ನು ನವದೆಹಲಿಯಲ್ಲಿ ಖಂಡಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‍ ರಾಜಣ್ಣ ಅವರು ನೀಡಿದ ಹೇಳಿಕೆಯನ್ನು ಖಂಡಿಸಿದ್ದಾರೆ. ರಾಜಣ್ಣ ಅವರ ಹೇಳಿಕೆಯನ್ನು ಕಾಂಗ್ರೆಸ್ ಒಪ್ಪುವುದಿಲ್ಲ. ಅವರು ದೇವೇಗೌಡರಲ್ಲಿ ಕ್ಷಮೆ ಕೇಳಬೇಕು. ದೇವೇಗೌಡರಿಗೆ ದೇವರು ಇನ್ನಷ್ಟು ಆಯಸ್ಸು, ಆರೋಗ್ಯ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.
ಜೆಡಿಎಸ್‌ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಮಾತನಾಡಿ ರಾಜಣ್ಣ ಅವರ ದುರಹಂಕಾರಕ್ಕೆ ತಕ್ಕ ಶಾಸ್ತಿಯಾಗಲಿದೆ ಎಂದು ಹೇಳಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರು, ರಾಜಣ್ಣ ದೇವೇಗೌಡರ ನಿವಾಸಕ್ಕೆ ತೆರಳಿ ಕ್ಷಮೆ ಯಾಚಿಸಬೇಕೆಂದು ಒತ್ತಾಯಿಸಿದ್ದಾರೆ.

ಪ್ರಮುಖ ಸುದ್ದಿ :-   ಚಾಮರಾಜನಗರ : ಇಂಡಿಗನತ್ತ ಮತಗಟ್ಟೆ ಮೇಲೆ ಕಲ್ಲು ತೂರಾಟ, ಗಲಾಟೆ, ಮತಯಂತ್ರಕ್ಕೆ ಹಾನಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement