ಮನೆಯೊಳಗೆ ಮಲಗಿಕೊಂಡಿರುವ ರೀತಿಯಲ್ಲಿ ವ್ಯಕ್ತಿಯ ಅಸ್ಥಿ ಪಂಜರ ಪತ್ತೆ: 8-9 ತಿಂಗಳ ಹಿಂದೆ ಮೃತಪಟ್ಟಿರುವ ಶಂಕೆ

ಬೆಳಗಾವಿ: ಮನೆಯಲ್ಲಿ ಮಲಗಿಕೊಂಡಿರುವ ರೀತಿಯಲ್ಲಿ ಮೃತಪಟ್ಟ ಮನುಷ್ಯನ ಅಸ್ಥಿಪಂಜರ ಬೆಳಗಾವಿ ಜಿಲ್ಲೆ ಯರಗಟ್ಟಿ ತಾಲೂಕಿನ ಶಿವಾಪುರ ಗ್ರಾಮದಲ್ಲಿ ಪತ್ತೆಯಾದ ಬಗ್ಗೆ ವರದಿಯಾಗಿದೆ.
ಶಿವಾಪುರ ಗ್ರಾಮದ ಮನೆಯೊಂದರಲ್ಲಿ ಮನುಷ್ಯನ ಅಸ್ಥಿಪಂಜರ ಪತ್ತೆಯಾಗಿದ್ದು, ಮೃತನನ್ನು ಅದೇ ಗ್ರಾಮದ ಪ್ರಕಾಶ ತವನಪ್ಪ ಮುರಗುಂಡಿ ಎಂದು ಶಂಕಿಸಲಾಗಿದೆ. ಮನೆಯಲ್ಲಿಯೇಮೃತಪಟ್ಟ ವ್ಯಕ್ತಿಯ ಅಸ್ಥಿಪಂಜರ ಸುಮಾರಿ 8 ರಿಂದ 9 ತಿಂಗಳ ಹಿಂದಿನದಾಗಿರಬಹುದು ಎಂದು ಅಂದಾಜಿಸಲಾಗಿದೆ.

ಮೃತಪಟ್ಟ ವ್ಯಕ್ತಿಯನ್ನು ಯಾರೂ ನೋಡದ ಪರಿಣಾಮವಾಗಿ ಆತ ಮಲಗಿದ ರೀತಿಯಲ್ಲಿಯೇ ಅಸ್ತಿಪಂಜರವಾಗಿದ್ದಾನೆ. ಗ್ರಾಮಸ್ಥರ ಪ್ರಕಾರ, ಅಸ್ಥಿಪಂಜರ ಗ್ರಾಮದ ಪ್ರಕಾಶ ಎಂಬನದ್ದಾಗಿದೆ. ಬುದ್ಧಿಮಾಂದ್ಯನಾಗಿದ್ದ ಆತ ಮನೆಯಲ್ಲಿ ಒಬ್ಬನೇ ವಾಸಮಾಡುತ್ತಿದ್ದನಂತೆ. ಪದವೀಧರನಾಗಿದ್ದ ಪ್ರಕಾಶ ಮನೆಯ ಒಳಗಿನಿಂದ ಕೀಲಿ ಹಾಕಿಕೊಂಡು ಇರುತ್ತಿದ್ದ ಎಂದು ಸ್ಥಳೀಯರು ಹೇಳಿದ್ದಾರೆ. ಸ್ಥಳೀಯರು ನೀಡಿದ ಆಹಾರ ಸೇವಿಸುತ್ತಿದ್ದನಂತೆ.
ಸ್ಥಳಕ್ಕೆ ಮುರಗೋಡ ಸಿಪಿಐ ಮೌನೇಶ್ವರ ಮಾಲಿ ಪಾಟೀಲ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪೊಲೀಸರು ತನಿಖೆ ನಡೆಸಿದ್ದು ಈ ವ್ಯಕ್ತಿ ಕಾಯಿಲೆಯಿಂದ ಮೃತಪಟ್ಟಿದ್ದಾನೆಯೋ ಅಥವಾ ಹಸಿವಿನಿಂದ ಮೃತಪಟ್ಟಿದಾರೋ ಅಥವಾ ಬೇರೆ ಕಾರಣಕ್ಕೆ ಮೃತಪಟ್ಟಿದಾನೆಯೋ ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ.

ಪ್ರಮುಖ ಸುದ್ದಿ :-   ವೀಡಿಯೊ..| ಕುಮಟಾ : ಅಘನಾಶಿನಿ ನದಿಗೆ ಅಡ್ಡವಾಗಿ ನಿರ್ಮಾಣವಾಗುತ್ತಿದ್ದ ಸೇತುವೆಯ ಸ್ಲ್ಯಾಬ್‌ ಕುಸಿತ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement