ಮೈಸೂರು: ಟಾಲಿವುಡ್ ನಟ ನರೇಶ್ ಹಾಗೂ ನಟಿ ಪವಿತ್ರಾ ಲೋಕೇಶ್ ಇದ್ದ ಹೋಟೆಲ್ ಮುಂದೆ ರಮ್ಯಾ ರಘುಪತಿ ಅವರಿಂದ ದೊಡ್ಡ ಹೈಡ್ರಾಮಾ ನಡೆದಿದೆ.
ಮೈಸೂರಿನ ಹುಣಸೂರು ರಸ್ತೆಯ ಹೋಟೆಲ್ ರೂಮಿನಿಂದ ನರೇಶ್ ಮತ್ತು ಪವಿತ್ರಾ ಲೋಕೇಶ್, ಪೊಲೀಸ್ ಭದ್ರತೆಯಲ್ಲಿ ಹೊರಟರು. ಈ ವೇಳೆ ರಮ್ಯಾ ಚಪ್ಪಲಿ ಎತ್ತಿಕೊಂಡು ಚಪ್ಪಲಿ ಎತ್ತಿಕೊಂಡು ನುಗ್ಗಲು ಯತ್ನಿಸಿದರು. ಈ ವೇಳೆ ಪೊಲೀಸರು ಮತ್ತು ನರೇಶ್ ಅವರ ಆಪ್ತ ರಕ್ಷಕರು ತಡೆದರು.
ಹೋಟೆಲ್ನಲ್ಲಿ ಪವಿತ್ರಾ ಲೋಕೇಶ್ ಹಾಗೂ ನರೇಶ್ ತಂಗಿದ್ದ ಮಾಹಿತಿ ಪಡೆದ ರಮ್ಯಾ ರಘುಪತಿ ಹೊಟೇಲ್ಗೆ ಆಗಮಿಸಿದ್ದರು. ರೂಮ್ ಬಳಿಯೇ ಕಾದು ಕುಳಿತಿದ್ದ ರಮ್ಯಾ ರಘುಪತಿ, ಪತಿ ನರೇಶ್, ಪವಿತ್ರಾ ಹೊರ ಬರುತ್ತಿದ್ದಂತೆಯೇ ಚಪ್ಪಲಿ ಕೈಯಲ್ಲಿ ಹಿಡಿದು ಅವರತ್ತ ನುಗ್ಗಲು ಯತ್ನಿಸಿದ್ದಾರೆ. ಈ ವೇಳೆ ಕೂಡಲೇ ಪೊಲೀಸರು ತಡೆದಿದ್ದಾರೆ.
ನಂತರ ಪವಿತ್ರಾ ಲೋಕೇಶ್ ಹಾಗೂ ನರೇಶ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ರಮ್ಯಾ ರಘುಪತಿ ಕೂಗಾಡಿದ್ದಾರೆ. ಇದ್ಯಾವುದಕ್ಕೂ ವಿಚಲಿತರಾಗದೆ ನರೇಶ್ ಹಾಗೂ ಪವಿತ್ರಾ ಲೋಕೇಶ್ ಹೋಟೆಲ್ನಿಂದ ಹೊರ ಹೋದರು ಎಂದು ಹೇಳಲಾಗಿದೆ.
ಕಳೆದ ಕೆಲವು ದಿನಗಳಿಂದ ನಟಿ ಪವಿತ್ರಾ ಲೋಕೇಶ್ ಮತ್ತು ನಟ ನರೇಶ್ ನಡುವಿನ ಸಂಬಂಧದ ಬಗ್ಗೆ ಸಾಕಷ್ಟು ಸುದ್ದಿಗಳು ಹರಿದಾಡುತ್ತಿದೆ.
ನರೇಶ್ ಪತ್ನಿ ರಮ್ಯಾ ರಘುಪತಿ ಮಾಧ್ಯಮಗಳ ಮುಂದೆ ಬಂದು ಆರೋಪಗಳನ್ನು ಮಾಡಿದ್ದು, ಅದಕ್ಕೆ ಪ್ರತಿಯಾಗಿ ನರೇಶ್ ಮತ್ತು ಪವಿತ್ರಾ ಲೋಕೇಶ್ ಸ್ಪಷ್ಟನೆಗಳನ್ನು ನೀಡಿದ್ದಾರೆ. ಇದೆಲ್ಲದರ ನಡುವೆ ಈಗ ಈ ಹೈಡ್ರಾಮಾ ಗ ಮೈಸೂರಿನ ಹೋಟೆಲ್ ಬಳಿ ನಡೆದಿದೆ.
ನಿಮ್ಮ ಕಾಮೆಂಟ್ ಬರೆಯಿರಿ