ಬೆಂಗಳೂರು: ಆಮ್ ಆದ್ಮಿ ಪಕ್ಷದ ರಾಜ್ಯ ಜನಸಂಪರ್ಕ ಹಾಗೂ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ಖ್ಯಾತ ನಟ, ಮಾಜಿ ಶಾಸಕ ಮುಖ್ಯಮಂತ್ರಿ ಚಂದ್ರು ಅವರನ್ನು ನೇಮಕ ಮಾಡಲಾಗಿದೆ.
ಆಮ್ ಆದ್ಮಿ ಪಕ್ಷದ ರಾಜ್ಯ ಚುನಾವಣಾ ಉಸ್ತುವಾರಿ ದಿಲೀಪ್ ಪಾಂಡೆ ಅವರ ಸೂಚನೆಯಂತೆ ಮುಖ್ಯಮಂತ್ರಿ ಚಂದ್ರು ಅವರನ್ನು ರಾಜ್ಯಾಧ್ಯಕ್ಷ ಪೃಥ್ವಿರೆಡ್ಡಿ ನೇಮಕ ಮಾಡಿದ್ದಾರೆ.
ಈ ಕುರಿತು ಮಾತನಾಡಿದ ಮುಖ್ಯಮಂತ್ರಿ ಚಂದ್ರು, ದೆಹಲಿ ಹಾಗೂ ಪಂಜಾಬ್ನಲ್ಲಿ ಆಮ್ ಆದ್ಮಿ ಪಾರ್ಟಿ ಸರ್ಕಾರಗಳು ಹಲವು ಜನಪರ ಯೋಜನೆಯನ್ನು ಜಾರಿಗೆ ತಂದಿದ್ದು, ಪಕ್ಷವು ಸ್ವಚ್ಛ ರಾಜಕೀಯ ಹಾಗೂ ಪ್ರಾಮಾಣಿಕ ಆಡಳಿತ ನೀಡುತ್ತಿದೆ. ಇದನ್ನು ಕರ್ನಾಟಕದ ಜನತೆಗೆ ತಿಳಿಸಿ, ಇಲ್ಲಿಯೂ ಎಎಪಿಯನ್ನು ಅಧಿಕಾರಕ್ಕೆ ತರಬೇಕಿದೆ ಎಂದರು.
ಮುಖ್ಯಮಂತ್ರಿ ಚಂದ್ರು ಅವರು ಕಳೆದ ಜೂನ್ನಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಿದ್ದರು.
ನಿಮ್ಮ ಕಾಮೆಂಟ್ ಬರೆಯಿರಿ