ಕಾರವಾರ: ನನ್ನ ಹೆಸರನ್ನು ಹೇಳಿ ಸಾರ್ವಜನಿಕರಿಗೆ ಸುಳ್ಳು ಭರವಸೆ ಕೊಟ್ಟು ನನ್ನ ಮಗ ತೆಗೆದುಕೊಳ್ಳುತ್ತಿದ್ದಾನೆ. ಈತನಿಗೆ ಯಾರೂ ಸಾಲ ಕೊಡಬೇಡಿ ಎಂದು ಮಾಜಿ ಶಾಸಕ ಹಾಗೂ ಎನ್ಡಬ್ಲ್ಯೂಕೆಎಸ್ಆರ್ಟಿಸಿ (NWKSRTC) ಅಧ್ಯಕ್ಷ ವಿ.ಎಸ್.ಪಾಟೀಲ್ ಪ್ರಕಟಣೆ ನೀಡುವ ಮೂಲಕ ಮನವಿ ಮಾಡಿದ್ದಾರೆ.
ಈ ಕುರಿತು ತಮ್ಮ ಲೆಟರ್ ಹೆಡ್ ನಲ್ಲಿಯೇ ಪ್ರಕಟಣೆ ನೀಡಿರುವ ಅವರು, ನನ್ನ ಮಗ ಬಾಪೂಗೌಡ ಪಾಟೀಲ್ ದುಶ್ಚಟಕ್ಕೆ ಬಲಿಯಾಗಿ ತನ್ನ ಎಲ್ಲ ಆಸ್ತಿಯನ್ನೂ ಹಾಳು ಮಾಡಿಕೊಂಡಿದ್ದಾನೆ ಎಂದು ಹೇಳಿದ್ದಾರೆ.
ಅವನ ಬ್ಯಾಂಕ್ ಖಾತೆಯಲ್ಲಿ ಹಣ ಇಲ್ಲದಿದ್ದರೂ ಮುಂಗಡ ಚೆಕ್ ಕೊಟ್ಟು ಸಾಲ ತೆಗೆದುಕೊಳ್ಳುತ್ತಿದ್ದಾನೆ. ದಯವಿಟ್ಟು ಯಾರೂ ನನ್ನ ಮಗನಿಗೆ ಸಾಲ ಕೊಡಬೇಡಿ ಎಂದು ಮಾಜಿ ಶಾಸಕ ವಿ.ಎಸ್.ಪಾಟೀಲ ಅವರು ಎನ್ಡಬ್ಲ್ಯೂಕೆಎಸ್ಆರ್ಟಿಸಿ ಲೆಟರ್ಹೆಡ್ ಮೂಲಕ ಮನವಿ ಮಾಡಿದ್ದಾರೆ.
ಅವನ ಮಾನಸಿಕ ಸ್ಥಿತಿ ಸರಿ ಇಲ್ಲ. ನನ್ನ ಹೆಸರನ್ನು ದುರುಪಯೋಗ ಮಾಡಿಕೊಂಡು ಜನರಿಗೆ ಸುಳ್ಳು ಹೇಳಿ ಸಾಲ ಪಡೆಯುತ್ತಿದ್ದಾನೆ. ದಯವಿಟ್ಟು ಸಾರ್ವಜನಿಕರು ನನ್ನ ಮಗನ ಮಾತಿಗೆ ಮರುಳಾಗಿ ಸಾಲ ಕೊಟ್ಟು ಮೋಸ ಹೋಗಬಾರದು ಎಂದು ಎನ್ಡಬ್ಲ್ಯೂಕೆಎಸ್ಆರ್ಟಿಸಿ ಅಧ್ಯಕ್ಷ ವಿ.ಎಸ್.ಪಾಟೀಲ ಪ್ರತಿಕಾ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ