ಚಂದ್ರಶೇಖರ ಗುರೂಜಿ ಅಂತ್ಯಕ್ರಿಯೆಯಿಂದ ಮರಳುವಾಗ ನಿಡಸೋಸಿ ಶಿವಲಿಂಗೇಶ್ವರ ಸ್ವಾಮೀಜಿ ಕಾರು ಅಪಘಾತ

ಧಾರವಾಡ ಚಂದ್ರಶೇಖರ ಗುರೂಜಿಯ ಅಂತ್ಯಕ್ರಿಯೆ ಮುಗಿಸಿಕೊಂಡು ಶ್ರೀಮಠದತ್ತ ಹೊರಟಿದ್ದ ನಿಡಸೋಸಿಯ ಸಿದ್ದಸಂಸ್ಥಾನ ಮಠದ ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ಅವರ ವಾಹನ ಧಾರವಾಡ ಸಮೀಪ ಅಪಘಾತಕ್ಕೀಡಾಗಿದ್ದು, ಸ್ವಾಮೀಜಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಹುಬ್ಬಳ್ಳಿಯಲ್ಲಿ ಹತ್ಯೆಯಾದ ಚಂದ್ರಶೇಖರ ಗುರೂಜಿ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದ ಬೆಳಗಾವಿ‌ ಜಿಲ್ಲೆಯ ಹುಕ್ಕೇರಿ ತಾಲೂಕಿನ ನಿಡಸೋಸಿಯ ದುರದುಂಡೇಶ್ವರ ಮಠದ ಸ್ವಾಮೀಜಿ ಅವರ ಕಾರು ಮರಳಿ ಬೆಳಗಾವಿಯತ್ತ ಹೋಗುವಾಗ ಧಾರವಾಡ ತಾಲೂಕಿನ ಹಳೇ ತೇಗೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಅಪಘಾತಕ್ಕೀಡಾಗಿದೆ. ವಾಹನವು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದ್ದು ವಾಹನದಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಈ ಘಟನೆಯಲ್ಲಿ ಶ್ರೀಗಳು ಸೇರಿದಂತೆ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾರಿಗೂ ಪ್ರಾಣಾಪಾಯ ಆಗಿಲ್ಲ. ಸದ್ಯ ಶ್ರೀಗಳನ್ನು ಚಿಕಿತ್ಸೆಗಾಗಿ ಬೆಳಗಾವಿಯ ಕೆಎಲ್‌ಇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಘಟನಾ ಸ್ಥಳಕ್ಕೆ ಗರಗ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement