ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ, ಇಳಯರಾಜ ಸೇರಿ ರಾಜ್ಯಸಭೆಗೆ ನಾಲ್ವರ ನಾಮ ನಿರ್ದೇಶನ

ನವದೆಹಲಿ: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ. ಖ್ಯಾತ ಓಟಗಾರ್ತಿ ಪಿ. ಟಿ. ಉಷಾ, ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಹಾಗೂ ವಿ ವಿಜಯೇಂದ್ರ ಪ್ರಸಾದ್ ಅವರನ್ನು ಬುಧವಾರ ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ.
ನಾಲ್ಕು ನಾಮನಿರ್ದೇಶಿತರು ನಾಲ್ಕು ವಿಭಿನ್ನ ರಾಜ್ಯಗಳಿಂದ ಬಂದವರು. ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಸಭಾ ನಾಮನಿರ್ದೇಶಿತರಿಗೆ ಟ್ವಿಟರ್‌ನಲ್ಲಿ ಅಭಿನಂದನೆ ಸಲ್ಲಿಸಿದ್ದಾರೆ.
ಶ್ರೀ ವೀರೇಂದ್ರ ಹೆಗ್ಗಡೆ ಜೀ ಅವರು ಅತ್ಯುತ್ತಮ ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದ್ದಾರೆ. ಧರ್ಮಸ್ಥಳ ದೇವಸ್ಥಾನ ಮತ್ತು ಆರೋಗ್ಯ, ಶಿಕ್ಷಣ ಮತ್ತು ಸಂಸ್ಕೃತಿಯಲ್ಲಿ ಅವರು ಮಾಡುತ್ತಿರುವ ಮಹತ್ತರವಾದ ಕಾರ್ಯವನ್ನು ವೀಕ್ಷಿಸಲು ನನಗೆ ಅವಕಾಶ ಸಿಕ್ಕಿದೆ. ವೀರೇಂದ್ರ ಹೆಗ್ಗಡೆ ಅವರು ಸಂಸತ್ತಿನ ಕಲಾಪವನ್ನು ಉತ್ಕೃಷ್ಟಗೊಳಿಸಲಿದ್ದಾರೆ ಎಂದು ಎಂದು ಪ್ರಧಾನಿ ಮೋದಿ ಟ್ವೀಟ್‌ ಮಾಡಿದ್ದಾರೆ.

ಪಿಟಿ ಉಷಾ ಅವರನ್ನು “ಪ್ರತಿಯೊಬ್ಬ ಭಾರತೀಯರಿಗೆ ಸ್ಫೂರ್ತಿ” ಎಂದು ಕರೆದ ಪಿಎಂ ಮೋದಿ, “ಕ್ರೀಡೆಯಲ್ಲಿ ಅವರ ಸಾಧನೆಗಳು ವ್ಯಾಪಕವಾಗಿ ತಿಳಿದಿವೆ ಆದರೆ ಕಳೆದ ಹಲವಾರು ವರ್ಷಗಳಿಂದ ಉದಯೋನ್ಮುಖ ಕ್ರೀಡಾಪಟುಗಳಿಗೆ ಮಾರ್ಗದರ್ಶನ ನೀಡುವ ಅವರ ಕೆಲಸವು ಅಷ್ಟೇ ಶ್ಲಾಘನೀಯವಾಗಿದೆ. ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವ ಅವರಿಗೆ ಅಭಿನಂದನೆಗಳು ಎಂದು ಟ್ವೀಟ್‌ನಲ್ಲಿ ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಪಾಟ್ನಾ ರೈಲ್ವೆ ನಿಲ್ದಾಣದ ಸಮೀಪದ ಹೊಟೇಲ್‌ ನಲ್ಲಿ ಬೆಂಕಿ ಅವಘಡ : 6 ಮಂದಿ ಸಾವು

ದಶಕಗಳಿಂದ ಸೃಜನಶೀಲ ಜಗತ್ತಿನೊಂದಿಗೆ ಸಂಬಂಧ ಹೊಂದಿರುವ ವಿ ವಿಜಯೇಂದ್ರ ಪ್ರಸಾದ್ ಅವರನ್ನು ಪ್ರಧಾನಿ ಮೋದಿ ಅಭಿನಂದಿಸಿದರು.
ಅವರ ಕೃತಿಗಳು ಭಾರತದ ವೈಭವಯುತ ಸಂಸ್ಕೃತಿಯನ್ನು ಪ್ರದರ್ಶಿಸುತ್ತವೆ ಮತ್ತು ಜಾಗತಿಕವಾಗಿ ಛಾಪು ಮೂಡಿಸಿವೆ ಎಂದು ಪ್ರಧಾನಿ ಮೋದಿ ಹೇಳಿದರು.

ಇಳಯರಾಜರ ಸೃಜನಶೀಲ ಪ್ರತಿಭೆ ತಲೆಮಾರುಗಳಿಂದಲೂ ಜನರನ್ನು ಆಕರ್ಷಿಸಿದೆ. ಅವರ ಕೃತಿಗಳು ಅನೇಕ ಭಾವನೆಗಳನ್ನು ಸುಂದರವಾಗಿ ಪ್ರತಿಬಿಂಬಿಸುತ್ತವೆ. ಅವರ ಜೀವನ ಪಯಣ ಅಷ್ಟೇ ಸ್ಪೂರ್ತಿದಾಯಕವಾಗಿದೆ- ಅವರು ವಿನಮ್ರ ಹಿನ್ನೆಲೆಯಿಂದ ಬೆಳೆದು ತುಂಬಾ ಸಾಧಿಸಿದ್ದಾರೆ. ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವುದು ಸಂತಸ ತಂದಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಗೂಢಲಿಪಿ ಬಹಿರಂಗಗೊಳಿಸಲು ಒತ್ತಾಯಿಸಿದರೆ ಭಾರತದಿಂದ ನಿರ್ಗಮಿಸಬೇಕಾಗ್ತದೆ ಎಂದ ವಾಟ್ಸಾಪ್

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement