ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಕ್ರಿಕೆಟ್‌ ಸರಣಿಗೆ ಭಾರತದ ತಂಡ ಪ್ರಕಟ: ಶಿಖರ್ ಧವನ್ ನಾಯಕ

ನವದೆಹಲಿ: ಭಾರತದ ಹಿರಿಯರ ಆಯ್ಕೆ ಸಮಿತಿಯು ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ತಂಡವನ್ನು ಆಯ್ಕೆ ಮಾಡಿದೆ. ವೆಸ್ಟ್ ಇಂಡೀಸ್ ವಿರುದ್ಧದ ಭಾರತ ತಂಡದ ನಾಯಕತ್ವವನ್ನು ಶಿಖರ್ ಧವನ್ ಅವರಿಗೆ ನೀಡಲಾಗಿದೆ.
ನಿಯಮಿತ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ, ಹಾರ್ದಿಕ್ ಪಾಂಡ್ಯ ಮತ್ತು ರಿಷಬ್ ಪಂತ್ ಅವರಿಗೆ ಈ ಸರಣಿಯಲ್ಲಿ ವಿಶ್ರಾಂತಿ ನೀಡಲಾಗಿದೆ.
ಬಿಸಿಸಿಐನ ಹಿರಿಯ ಆಯ್ಕೆ ಸಮಿತಿಯು ಏಕದಿನ ಪಂದ್ಯಗಳಿಗೆ 16 ಸದಸ್ಯರ ಭಾರತ ತಂಡವನ್ನು ಹೆಸರಿಸಿದೆ.
ಎಲ್ಲಾ ಮೂರು ಪಂದ್ಯಗಳು ಪೋರ್ಟ್ ಆಫ್ ಸ್ಪೇನ್‌ನಲ್ಲಿ ನಡೆಯಲಿವೆ.ಏನದಿನದ ಪಂದ್ಯಗಳ ನಂತರ, ಕೆರಿಬಿಯನ್ ಮತ್ತು ಅಮೆರಿಕದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಭಾರತ ಐದು T20 ಪಂದ್ಯಗಳನ್ನು ಆಡಲಿದ್ದು, ತಂಡವನ್ನು ಇನ್ನೂ ಪ್ರಕಟಿಸಲಾಗಿಲ್ಲ.

ವೆಸ್ಟ್‌ ಇಂಡೀಸ್‌ ವಿರುದ್ಧದ 3 ಏಕದಿನ ಪಂದ್ಯಗಳಿಗೆ ಭಾರತ ತಂಡ: ಶಿಖರ್ ಧವನ್ (ನಾಯಕ), ರುತುರಾಜ್ ಗಾಯಕ್‌ವಾಡ್, ಶುಭಮನ್ ಗಿಲ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (WK), ಸಂಜು ಸ್ಯಾಮ್ಸನ್ (WK), ರವೀಂದ್ರ ಜಡೇಜಾ (ಉಪನಾಯಕ), ಶಾರ್ದೂಲ್ ಠಾಕೂರ್ ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಅವೇಶ್ ಖಾನ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್.
ಜುಲೈ 22 ರಂದು ಮೊದಲನೇ ಪಂದ್ಯ, ಜುಲೈ 24 ರಂದು ಎರಡನೇ ಪಂದ್ಯ, ಜುಲೈ 27 ರಂದು ಮೂರನೇ ಪಂದ್ಯ ನಡೆಯಲಿದ್ದು, ಎಲ್ಲ ಪಂದ್ಯವೂ ಪೋರ್ಟ್ ಆಫ್ ಸ್ಪೇನ್‌ನಲ್ಲಿ ನಡೆಯಲಿದೆ.

ಪ್ರಮುಖ ಸುದ್ದಿ :-   ಬೆಂಬಲ ಹಿಂಪಡೆದ ಮೂವರು ಪಕ್ಷೇತರ ಶಾಸಕರು : ಸಂಕಷ್ಟದಲ್ಲಿ ಹರಿಯಾಣದ ಬಿಜೆಪಿ ಸರ್ಕಾರ

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement