ಹುಬ್ಬಳ್ಳಿ: ಇಲ್ಲಿನ ಖಾಸಗಿ ಹೋಟೆಲ್ನಲ್ಲಿ ಮಂಗಳವಾರ ಬರ್ಬರವಾಗಿ ಹತ್ಯೆಯಾಗಿದ್ದ ಸರಳವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಅಂತ್ಯಕ್ರಿಯೆ ಇಂದು, ಬುಧವಾರ ಅಪರಾಹ್ನದ ನಂತರ ಹುಬ್ಬಳ್ಳಿ ಬಳಿಯ ಸುಳ್ಳ ರಸ್ತೆಯಲ್ಲಿರುವ ಕೃಷಿಭೂಮಿಯಲ್ಲಿ ನೆರವೇರಿತು.
ಕುಟುಂಬಸ್ಥರ ಸಮ್ಮುಖದಲ್ಲಿ 10ಕ್ಕೂ ಹೆಚ್ಚು ಸ್ವಾಮೀಜಿಗಳ ಸಮ್ಮುಖದಲ್ಲಿ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಗುರೂಜಿ ಅಣ್ಣನ ಮಗ ಸಂಜಯ ಅಂತಿಮ ವಿಧಿವಿಧಾನ ನೆರವೇರಿಸಿದರು. ಗುರೂಜಿ 2ನೇ ಪತ್ನಿ ಅಂಕಿತಾ, ಪುತ್ರಿ ಸ್ವಾತಿ, ಹಾಗೂ ಅಕ್ಕ, ಸಹೋದರ ಸೇರಿದಂತೆ ಸಂಬಂಧಿಕರು ಹಾಗೂ ಸರಳವಾಸ್ತು ಸಿಬ್ಬಂದಿ, ಅಭಿಮಾನಿಗಳು ಇದ್ದರು.
ಅಂತ್ಯಕ್ರಿಯೆ ವೇಳೆ ಗುರೂಜಿಯ ಮುದ್ದಿನ ಶ್ವಾನ ಪ್ರಿನ್ಸ್ ಕಣ್ಣೀರು ನೋಡುಗರ ಮನಕಲಕುವಂತೆ ಮಾಡಿತು. ಶಂಕರಪಾಟೀಲ ಮುನೇನಕೊಪ್ಪ, ಸಿದ್ದ ಸಂಸ್ಥಾನ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ, ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ಮೊದಲಾದವರು ಅಂತಿಮ ದರ್ಶನ ಪಡೆದರು.
ಇದಕ್ಕೂ ಮುನ್ನ ಕಿಮ್ಸ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆದ ಬಳಿಕ ಪಾರ್ಥಿವ ಶರೀರವನ್ನು ಸ್ವಗ್ರಾಮದಲ್ಲಿ ಮೆರವಣಿಗೆ ಮಾಡಲಾಯಿತು. ಕೆಲಕಾಲ ಅಂತಿಮ ದರ್ಶನ ಪಡೆಯಲು ಸಾರ್ವಜನಿಕರಿಗೆ ಅವಕಾಶ ಮಾಡಿಕೊಡಲಾಗಿತ್ತು
ನಿಮ್ಮ ಕಾಮೆಂಟ್ ಬರೆಯಿರಿ