ಕರ್ನಾಟಕ-ಮಹಾರಾಷ್ಟ್ರ ಗಡಿ ಭಾಗದಲ್ಲಿ ಲಘು ಭೂಕಂಪ

ಬೆಳಗಾವಿ :ಮಹಾರಾಷ್ಟ್ರದ ಸಾಂಗ್ಲಿ, ಸೊಲ್ಲಾಪುರ, ಕರ್ನಾಟಕದ ವಿಜಯಪುರ ಹಾಗೂ ಬೆಳಗಾವಿ ಜಿಲ್ಲೆಯ ಕೆಲವೆಡೆ ಶನಿವಾರ ನಸುಕಿನಲ್ಲೇ ಲಘು ಭೂಕಂಪ ಸಂಭವಿಸಿದೆ. ಆದರೆ ಪ್ರಾಣಹಾನಿ, ಆಸ್ತಿಪಾಸ್ತಿ ನಷ್ಟ ಆಗಿಲ್ಲ ಎಂದು ತಿಳಿದುಬಂದಿದೆ.
ಅಥಣಿ ತಾಲೂಕಿನ ಶಿರಹಟ್ಟಿ ಗ್ರಾಮ ಹಾಗೂ ನೆರೆಯ ವಿಜಯಪುರ ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ 6.22 ರಿಂದ 6.23 ರ ಸುಮಾರಿಗೆ ಸುಮಾರು 10 ಸೆಕೆಂಡ್ ಗೂ ಅಧಿಕ ಸಮಯ ಲಘು ಭೂಕಂಪವಾಗಿದೆ. ಮನೆಯಲ್ಲಿನ ವಸ್ತುಗಳು ಅಲುಗಾಡಿದ ಅನುಭವದಿಂದ ಜನ ತುಸು ಗಾಬರಿಗೊಳಗಾದರು. ಇದೊಂದು ಲಘು ಭೂಕಂಪವಾಗಿದ್ದು ಯಾವುದೇ ಹಾನಿ ಸಂಭವಿಸಿಲ್ಲ. ಸದ್ಯ ತಹಸೀಲ್ದಾರ್ ಮತ್ತು ತಾಲೂಕಾಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ .
ಅಥಣಿಗೆ ಹೊಂದಿಕೊಂಡ ನೆರೆಯ ವಿಜಯಪುರ ಜಿಲ್ಲೆಯಲ್ಲೂ ಇದೇ ಸಮಯದಲ್ಲಿ ಲಘು ಭೂಕಂಪ ಸಂಭವಿಸಿದೆ. ಭಾರೀ ಶಬ್ದ ಭೂಮಿಯೊಳಗಿಂದ ಕೇಳಿಬಂದಿದೆ. ನಿದ್ರೆಯಿಂದ ಆಗತಾನೆ ಎದ್ದವರು ಹಾಗೂ ಏಳದವರು ಭೂಕಂಪನ ಮತ್ತು ಭಾರೀ ಶಬ್ದದಿಂದ ಬೆಚ್ಚಿ ಬಿದ್ದು ಆತಂಕದಿಂದ ಮನೆಯಿಂದ ಓಡಿ ಹೊರಬಂದಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement