ನವದೆಹಲಿ: ಸಮಾಜವಾದಿ ಪಕ್ಷದ ನಾಯಕ ಮುಲಾಯಂ ಸಿಂಗ್ ಯಾದವ್ ಅವರ ಪತ್ನಿ ಸಾಧನಾ ಗುಪ್ತಾ ಶನಿವಾರ ನಿಧನರಾದರು.
ಶ್ವಾಸಕೋಶದ ಸೋಂಕಿನಿಂದ ನಾಲ್ಕು ದಿನಗಳ ಹಿಂದೆ ಸಾಧನಾ ಅವರನ್ನು ಗುರುಗ್ರಾಮ್ನ ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಆರೋಗ್ಯ ಸ್ಥಿತಿ ಹದಗೆಟ್ಟ ನಂತರ ಅವರನ್ನು ತೀವ್ರ ನಿಗಾ ಘಟಕಕ್ಕೆ ಸ್ಥಳಾಂತರಿಸಲಾಯಿತು. ಸಾಧನಾ ಗುಪ್ತಾ ಅವರ ಪಾರ್ಥಿವ ಶರೀರವನ್ನು ಲಕ್ನೋಗೆ ಕೊಂಡೊಯ್ಯಲಾಗುತ್ತಿದ್ದು, ಸಂಜೆಯ ವೇಳೆಗೆ ರಾಜ್ಯ ರಾಜಧಾನಿ ತಲುಪುವ ನಿರೀಕ್ಷೆಯಿದೆ.
ಸಾಧನ ಗುಪ್ತಾ ಮುಲಾಯಂ ಸಿಂಗ್ ಯಾದವ್ ಅವರ ಎರಡನೇ ಪತ್ನಿ. ಅವರ ಮಗನ ಹೆಸರು ಪ್ರತೀಕ್ ಯಾದವ್ ಮತ್ತು ಭಾರತೀಯ ಜನತಾ ಪಕ್ಷದ ನಾಯಕಿ ಅಪರ್ಣಾ ಯಾದವ್ ಅವರ ಸೊಸೆ.
ಟ್ವಿಟರ್ನಲ್ಲಿ ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರು ಮುಲಾಯಂ ಸಿಂಗ್ ಯಾದವ್ ಮತ್ತು ಅವರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ಸಮಾಜವಾದಿ ಪಕ್ಷದ ಅಧಿಕೃತ ಹ್ಯಾಂಡಲ್ ಕೂಡ ಪಕ್ಷದ ಸಂಸ್ಥಾಪಕರ ಪತ್ನಿಯ ನಿಧನಕ್ಕೆ ಸಂತಾಪ ಸೂಚಿಸಿ ಟ್ವೀಟ್ ಮಾಡಿದೆ.
ಮುಲಾಯಂ ಸಿಂಗ್ ಅವರ ಪತ್ನಿಯ ಸಾವು ಅತ್ಯಂತ ದುಃಖತಂದಿದೆ. ಭಗವಾನ್ ರಾಮ ಅವರ ಆತ್ಮಕ್ಕೆ ಶಾಂತಿ ಮತ್ತು ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಟ್ವೀಟ್ ಮಾಡಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ