ಯಲ್ಲಾಪುರ: ಲಾರಿಯೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಮೃತಪಟ್ಟ ಘಟನೆ ಸೋಮವಾರ ರಾಷ್ಟ್ರೀಯ ಹೆದ್ದಾರಿ ೬೩ ಮೇಲೆ ಉತ್ತರ ಕನ್ನಡ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಸಮೀಪದ ಇಂಚರ ಹೊಟೇಲ್ ಬಳಿ ನಡೆದಿದೆ.
ಮೃತರನ್ನು ಮಹಂತೇಶ ರೇವಣಪ್ಪ ಶೀಲವಂತರ( ೨೩) ಹುಬ್ಬಳ್ಳಿ, ಹಾಗೂ ಸುಮಿತ್ ಅಶೋಕ ಬಸವಾ (೨೫) ಹಳೆ ಹುಬ್ಬಳ್ಳಿ ಎಂದು ಗುರುತಿಸಲಾಗಿದೆ.
ಯಲ್ಲಾಪುರ ಕಡೆಯಿಂದ ಅಂಕೋಲಾ ಕಡೆಗೆ ಲಾರಿ ಚಾಲಕ ಶಿವರಾಜ ಚಿಂಚಲಿ ಅತಿವೇಗವಾಗಿ ಬಂದಿದ್ದರಿಂದ ನಿಯಂತ್ರಣಕ್ಕೆ ಬಾರದೆ ಗುಳ್ಳಾಪುರ ಸಮೀಪ ವಿಭೂತಿ ಫಾಲ್ಸ್ ಕಡೆಯಿಂದ ಯಲ್ಲಾಪುರ ಕಡೆಗೆ ಬರುತ್ತಿದ್ದ ಬೈಕ್ಗೆ ಡಿಕ್ಕಿ ಹೊಡೆದಿದ್ದಾನೆ ಎಂದು ಹೇಳಲಾಗಿದೆ.
ಬೈಕ್ ಹಿಂಬದಿ ಸವಾರ ಮಹಾಂತೇಶ ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಸುಮಿತ್ ಯಲ್ಲಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಈ ಕುರಿತು ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ