ಉಡುಪಿ: ಉಡುಪಿಯ ಕರಾವಳಿ ಬೈಪಾಸಿನಲ್ಲಿ ಹೋಗುತ್ತಿದ್ದ ಕಾರೊಂದು ಡಿವೈಡರ್ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿ ಉರುಳಿ ಬೈಕ್ ನ ಮೇಲೆ ಬಿದ್ದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವಿಗೀಡಾದ ಘಟನೆ ಘಟನೆ ಭಾನುವಾರ ಸಂಜೆ ನಡೆದಿದೆ.
ಮೃತ ಯುವಕ ವಿಜಯಪುರ ಮೂಲದ ಸುನೀಲಕುಮಾರ್ (24) ಎಂದು ಹೇಳಲಾಗಿದೆ. ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ಕಾರಿನಲ್ಲಿ ತಾಯಿ ಮತ್ತು ಮಗ ಇದ್ದರು ಎನ್ನಲಾಗಿದೆ.
ರಾಷ್ಟ್ರೀಯ ಹೆದ್ದಾರಿ ಕರಾವಳಿ ಬೈಪಾಸ್ ನಲ್ಲಿ ಬೈಪಾಸ್ ಮೇಲೆ ಮಂಗಳೂರಿನತ್ತ ಹೋಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದು ಕೆಳಗೆ ಬೈಕ್ ಸವಾರನ ಮೇಲೆ ಉರುಳಿಬಿದ್ದಿದೆ. ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎನ್ನಲಾಗಿದೆ.
ಕಾರಿನಲ್ಲಿದ್ದ ಮಹಿಳೆ ಮತ್ತು ಮಗನಿಗೆ ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಬೈಕ್ನಲ್ಲಿ ಹಿಂಬದಿಗೆ ಕುಳಿತ ಮತ್ತೊಬ್ಬನಿಗೂ ಗಾಯವಾಗಿದೆ ಎಂದು ಹೇಳಲಾಗಿದೆ. ಘಟನೆ ಸ್ಥಳಕ್ಕೆ ಉಡುಪಿಯ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿದ್ದಾರೆ. ಮತ್ತು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ