ಮಾದಾರ ಚನ್ನಯ್ಯ ಗುರುಪೀಠದಲ್ಲಿ 20ಕ್ಕೂ ಹೆಚ್ಚು ಮಠಾಧೀಶರ ಜತೆ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ ಭಾಗವತ್ ಸಂವಾದ

ಚಿತ್ರದುರ್ಗ: ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್)ದ ಸರಸಂಘಸಂಚಾಲಕ ಮೋಹನ ಭಾಗವತ್ ಅವರು ಇಂದು, ಮಂಗಳವಾರ ನಗರದ ಶ್ರೀ ಶಿವಶರಣ ಮಾದಾರ ಚನ್ನಯ್ಯ ಗುರುಪೀಠದಲ್ಲಿ ವಿವಿಧ ಮಠಾಧೀಶರೊಂದಿಗೆ ಸಂವಾದ ನಡೆಸಿದರು.
ಸೋಮವಾರ ರಾತ್ರಿಯೇ ನಗರಕ್ಕೆ ಆಗಮಿಸಿದ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ ಭಾಗವತ್ ಅವರು ಚಿತ್ರದುರ್ಗದ ಮಾದರ ಚೆನ್ನಯ್ಯ ಗುರುಪೀಠದಲ್ಲಿ ವಾಸ್ತವ್ಯ ಮಾಡಿದ್ದರು.
ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮಿಜೀಗಳ ನೇತೃತ್ವದಲ್ಲಿ ಹಿಂದುಳಿದ, ದಲಿತ ಸೇರಿದಂತೆ ವಿವಿಧ ಮಠಾಧೀಶರನ್ನು ಮಂಗಳವಾರ ಭೇಟಿ ಮಾಡಿದ ಮೋಹನ್ ಭಾಗವತ್ ಅಮಠಾಧೀಶರೊಂದಿಗೆ ಸಂವಾದ ನಡೆಸಿದ ಭಾಗವತ್, ಹಲವಾರು ವಿಷಯಗಳ ಕುರಿತು ಚರ್ಚೆ ನಡೆಸಿದರು.

ಬೋವಿ ಮಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಕುಂಚಿಟಿಗ ಮಠದ ಶಾಂತವೀರ ಸ್ವಾಮೀಜಿ, ಭಗೀರಥ ಮಠದ ಶ್ರೀ ಪುರುಷೋತ್ತಮಾನಂದ ಸ್ವಾಮೀಜಿ, ಹಡಪದ ಶ್ರೀ ಅಪ್ಪಣ್ಣ ಸ್ವಾಮೀಜಿ, ಈಡಿಗ ಮಠದ ಶ್ರೀ ರೇಣುಕಾನಂದ ಸ್ವಾಮೀಜಿ, ಶ್ರೀಕೃಷ್ಣ ಯಾದವ ಮಠದ ಶ್ರೀ ಯಾದವಾನಂದ ಸ್ವಾಮೀಜಿ, ಶ್ರೀ ಕುಂಬಾರ ಗುಂಡಯ್ಯ ಸ್ವಾಮೀಜಿ, ಚಲವಾದಿ ಮಠದ ಶ್ರೀ ಬಸವ ನಾಗಿದೇವ ಸ್ವಾಮೀಜಿ, ಶ್ರೀ ಹರಳಯ್ಯ ಸ್ವಾಮೀಜಿ, ಶ್ರೀ ಸರ್ದಾರ್ ಸೇವಾಲಾಲ್ ಸ್ವಾಮೀಜಿ ಸೇರಿದಂತೆ ಸುಮಾರು 20ಕ್ಕೂ ಹೆಚ್ಚು ಮಠಾಧೀಶರು ಸಂವಾದದಲ್ಲಿ ಭಾಗಿಯಾಗಿದ್ದರು.

ಪ್ರಮುಖ ಸುದ್ದಿ :-   ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ತಲೆದಂಡ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement