ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ

ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ಬಜರಂಗದಳ ಕಾರ್ಯಕರ್ತ ಕಾಂತರಾಜು ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ನಡೆದ ಬಗ್ಗೆ ವರದಿಯಾಗಿದೆ.
ಸೋಮವಾರ ರಾತ್ರಿ ರಾಜೀವ್ ಗಾಂಧಿ ಬಡಾವಣೆಯಲ್ಲಿ ಕಾಂತರಾಜು ಮೂತ್ರ ವಿಸರ್ಜನೆಗೆಂದು ಹೋದಾಗ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಲಾಗಿದೆ ಎಂದು ಹೇಳಲಾಗಿದೆ. ಈ ವೇಳೆ ಸ್ನೇಹಿತರು, ಕುಟುಂಬಸ್ಥರು ಬಂದ ನಂತರ ದುಷ್ಕರ್ಮಿಗಳು ಅಲ್ಲಿಂದ ಪರಾರಿಯಾಗಿದ್ದಾರೆ. ಘಟನೆಯಲ್ಲಿ ಕಾಂತರಾಜುವಿನ ಬಲಗೈಗೆ ಗಂಭೀರ ಗಾಯವಾಗಿದೆ. ಸದ್ಯ ಅವರನ್ನು ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅನ್ಯಕೋಮಿನ ಹುಡುಗರು ದಾಳಿ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ನಿನ್ನೆ ಮಥುರಾ ಪ್ಯಾರಡೈಸ್ ಬಳಿ ಯುವತಿಯರಿಗೆ ಚುಡಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಹಿಂದೂ ಯುವಕನ ಮೇಲೆ ಹಲ್ಲೆ ನಡೆದಿತ್ತು. ಈ ಘಟನೆ ಬೆನ್ನಲ್ಲೇ ಈಗ ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ ನಡೆದಿದೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಏರ್ ಇಂಡಿಯಾ ವಿಮಾನದಲ್ಲಿ 7 ಮಂದಿ ಅಸ್ವಸ್ಥ

ನಿಮ್ಮ ಕಾಮೆಂಟ್ ಬರೆಯಿರಿ

advertisement