ಹೊಸ ಮೊಬೈಲ್‌ ಕೊಡಿಸಲಿಲ್ಲವೆಂದು ತಂದೆಯ ಜನ್ಮದಿನದಂದೇ ಮಗ ಆತ್ಮಹತ್ಯೆ

ಖಾನಾಪುರ:ಹೊಸ ಮೊಬೈಲ್ ಬೇಕು ಎಂದು ಹಟ ಹಿಡಿದ ವಿದ್ಯಾರ್ಥಿಯೊಬ್ಬ ಮೊಬೈಲ್‌ ಕೊಡಿಸಲಿಲ್ಲವೆಂದು ತಂದೆಯ ಜನ್ಮದಿನದಂದೇ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕು ಹಲಕರ್ಣಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಆತ್ಮಹತ್ಯೆಗೆ ಶರಣಾದವನನ್ನು ಮರಾಠಾ ಮಂಡಳ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಪ್ರಥಮೇಶ ರಾಜು ಕೋಳಿ (17) ಎಂದು ಗುರುತಿಸಲಾಗಿದೆ.
ಎರಡು ದಿನಗಳಿಂದ ಪ್ರಥಮೇಶ ಮೊಬೈಲ್ ಬೇಕು ಎಂದು ಹಟ ಹಿಡಿದಿದ್ದಾನೆ. ಈಗ ಮನೆಯಲ್ಲಿದ್ದ ಹಳೆ ಫೋನ್ ಬಳಸು. 4 ದಿನಗಳ ನಂತರ ನಿನಗೆ ಹೊಸ ಮೊಬೈಲ್ ಫೋನ್ ಸಿಗುತ್ತದೆ ಎಂದು ಪೋಷಕರು ಹೇಳಿದ್ದರು.

ಆದರೆ, ಅದಕ್ಕೆ ಸಮಾಧಾನವಾಗದ ಪ್ರಥಮೇಶ ಇಂದು, ಮಂಗಳವಾರ ಮಧ್ಯಾಹ್ನ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಆದರೆ, ತಂದೆ ರಾಜು ಅವರು ಇಂದು ತಮ್ಮ ಜನ್ಮದಿನದ ನಿಮಿತ್ತ ಮಗನ ಹೆಸರಿಗೆ ಹತ್ತು ಸಾವಿರ ರೂಪಾಯಿಯನ್ನು ಉಳಿತಾಯ ಖಾತೆಗೆ ತೆಗೆದಿಟ್ಟಿದ್ದರು. ಆದರೆ, ಹೊಸ ಮೊಬೈಲ್ ಕೊಡಿಸಲಿಲ್ಲ ಎಂಬ ಕೊರಗಿನಲ್ಲಿ ಪ್ರಥಮೇಶ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪೋಷಕರು ಇನ್ನಿಲ್ಲದಂತೆ ರೋದಿಸುತ್ತಿದ್ದಾರೆ.

ಪ್ರಮುಖ ಸುದ್ದಿ :-   ಸುಳ್ಳು ಚುನಾವಣಾ ಅಫಿಡವಿಟ್‌ ಪ್ರಕರಣ : ಬಿಜೆಪಿ ಶಾಸಕ ಗರುಡಾಚಾರಗೆ ವಿಧಿಸಿದ್ದ ಜೈಲು ಶಿಕ್ಷೆ ರದ್ದುಮಾಡಿದ ಹೈಕೋರ್ಟ್

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement