ಶಿರಾಡಿ ಘಾಟ್‌ನಲ್ಲಿ ಎಲ್ಲ ವಾಹನಗಳ ಸಂಚಾರ ಸಂಪೂರ್ಣ ನಿಷೇಧ

ಹಾಸನ: ಶಿರಾಡಿ ಘಾಟ್‌ ರಸ್ತೆಯಲ್ಲಿ ಎಲ್ಲ ವಾಹನಗಳ ಸಂಚಾರ ಬಂದ್‌ ಮಾಡಲಾಗಿದೆ.
ಹಾಸನದ ದೋಣಿಗಲ್‌ನಲ್ಲಿ ಮೊದಲು ಭೂಕುಸಿತ ಸಂಭವಿಸಿತ್ತು. ಇದೀಗ ಅಲ್ಲಿ ಮತ್ತೆ ಭೂಕುಸಿತ ಸಂಭವಿಸಿದೆ. ಹೀಗಾಗಿ, ಈ ರಸ್ತೆಯು ವಾಹನ ಸಂಚಾರಕ್ಕೆ ಯೋಗ್ಯವಾಗಿಲ್ಲ. ಇನ್ನು ಹೆಚ್ಚಿನ ಭೂಕುಸಿತವಾಗುವ ಸಾಧ್ಯತೆಯಿದೆ. ಹೀಗಾಗಿ, ಈ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ ಎಂದು ಹರಿರಾಂ ಶಂಕರ್‌ ತಿಳಿಸಿದ್ದಾರೆ.
ಶಿರಾಡಿ ಘಾಟ್‌ ರಸ್ತೆ ಬಂದ್‌ ಆಗಿದ್ದು, ಬದಲಿ ರಸ್ತೆ ಮೂಲಕ ಪ್ರಯಾಣ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೋಣಿಗಾಲ್ ಎಂಬಲ್ಲಿ ಕೆಲವು ದಿನಗಳ ಹಿಂದೆಯೇ ರಸ್ತೆ ಕುಸಿತವಾದಾಗ ಭಾರೀ ವಾಹನಗಳ ಸಂಚಾರಕ್ಕೆ ಮಾತ್ರ ನಿರ್ಬಂಧಿಸಲಾಗಿತ್ತು. ಆದರೆ ಮತ್ತೆ ಭೂ ಕುಸಿತ ಸಂಭವಿಸಿದ್ದರಿಂದ ಈ ಕ್ರಮ ಕೈಗೊಳ್ಳಲಾಗಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕೆಎಸ್​ಆರ್​ಟಿಸಿ ಬಸ್​ನಲ್ಲಿ ಅಜ್ಜಿ ಮೊಮ್ಮಗಳಿಗೆ ಉಚಿತ ಟಿಕೆಟ್ : ಆದ್ರೆ ನಾಲ್ಕು ಪಕ್ಷಿಗಳಿಗೆ 444 ರೂ. ಟಿಕೆಟ್...!

ನಿಮ್ಮ ಕಾಮೆಂಟ್ ಬರೆಯಿರಿ

advertisement