ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸಗೊಳಿಸಿದ ದುಷ್ಕರ್ಮಿಗಳು

ಬಟಿಂಡಾ: ಪಂಜಾಬಿನ ಬಟಿಂಡಾದ ರಾಮನ್ ಮಂಡಿಯಲ್ಲಿರುವ ಸಾರ್ವಜನಿಕ ಉದ್ಯಾನವನದಲ್ಲಿ ಅಪರಿಚಿತ ವ್ಯಕ್ತಿಗಳು ಮಹಾತ್ಮ ಗಾಂಧಿ ಅವರ ಪ್ರತಿಮೆ ಧ್ವಸಂಗೊಳಿಸಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಗುರುವಾರ ಮತ್ತು ಶುಕ್ರವಾರದ ನಡುವಿನ ಮಧ್ಯರಾತ್ರಿ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ. ಗಾಂಧಿಯವರ ಪ್ರತಿಮೆಯನ್ನು ರಾಮನ್ ಮಂಡಿಯ ಸಾರ್ವಜನಿಕ ಉದ್ಯಾನವನದಲ್ಲಿ ಸ್ಥಾಪಿಸಲಾಗಿತ್ತು. ಪ್ರತಿಮೆಯನ್ನು ಧ್ವಂಸಗೊಳಿಸಿದ ನಂತರ, ಅಪರಿಚಿತ ದುಷ್ಕರ್ಮಿಗಳು ಅದರ ಮುಖವನ್ನು ಹೊತ್ತೊಯ್ದಿದ್ದಾರೆ.

ರಮ್ಮನ್ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಟೇಷನ್ ಹೌಸ್ ಆಫೀಸರ್ (ಸದರ್) ಹರ್ಜೋತ್ ಸಿಂಗ್ ಮಾನ್ ಅವರು ಈ ಬಗ್ಗೆ ತನಿಖೆ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.
ಆ ಪ್ರದೇಶದಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದ್ದು, ಶೀಘ್ರದಲ್ಲೇ ದುಷ್ಕರ್ಮಿಗಳನ್ನು ಬಂಧಿಸಲಾಗುವುದು ಎಂದು ಪೊಲೀಸರು ಭರವಸೆ ನೀಡಿದ್ದಾರೆ.
ಈ ವಿಧ್ವಂಸಕ ಕೃತ್ಯವನ್ನು ಸ್ಥಳೀಯರು ತೀವ್ರವಾಗಿ ಖಂಡಿಸಿದ್ದು, ಅಪರಾಧದ ಹಿಂದಿರುವವರನ್ನು ಕೂಡಲೇ ಬಂಧಿಸಬೇಕು ಎಂದು ಜಿಲ್ಲಾ ನಗರ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಸಿಂಗ್ ಒತ್ತಾಯಿಸಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement