ಯಶ್ವಂತ್‌ ಸಿನ್ಹಾಗೆ ಬೆಂಬಲ ಘೋಷಿಸಿದ ಆಮ್‌ ಆದ್ಮಿ ಪಾರ್ಟಿ

ನವದೆಹಲಿ: ರಾಷ್ಟ್ರಪತಿ ಚುನಾವಣೆಯಲ್ಲಿ ಆಮ್‌ ಆದ್ಮಿ ಪಕ್ಷ ಯಶ್ವಂತ್‌ ಸಿನ್ಹಾ ಅವರಿಗೆ ಬೆಂಬಲ ಘೋಷಿಸಿದೆ.
ನಾವು ದ್ರೌಪದಿ ಮುರ್ಮು ಅವರನ್ನು ಗೌರವಿಸುತ್ತೇವೆ. ಆದರೆ ನಮ್ಮ ಬೆಂಬಲ ಯಶವಂತ್ ಸಿನ್ಹಾ ಅವರಿಗೆ ಎಂದು ಆಪ್ ಸಂಸದ ಸಂಜಯ್ ಸಿಂಗ್ ಹೇಳಿದ್ದಾರೆ.
ಬುಡಕಟ್ಟು ನಾಯಕಿ ದ್ರೌಪದಿ ಮುರ್ಮು ಅವರನ್ನು ಎನ್‌ಡಿಎ ಪಕ್ಷ ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ.

ವಿರೋಧಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿ ಟಿಎಂಸಿಯ ಹಿರಿಯ ನಾಯಕ ಯಶವಂತ್ ಸಿನ್ಹಾ ಅವರನ್ನು ಕಣಕ್ಕಿಳಿಸಲಾಗಿದೆ. ವಿರೋಧಪಕ್ಷದ ಅಭ್ಯರ್ಥಿಯಾಗಲು ಶರದ್ ಪವಾರ್, ಗೋಪಾಲಕೃಷ್ಣ ಗಾಂಧಿ ಹಾಗೂ ಫಾರೂಕ್ ಅಬ್ದುಲ್ಲಾ ನಿರಾಕರಿಸಿದ ಬಳಿಕ ಯಶವಂತ್ ಸಿನ್ಹಾ ಕೊನೆಯದಾಗಿ ರಾಷ್ಟ್ರಪತಿ ಹುದ್ದೆಗೆ ಅಭ್ಯರ್ಥಿಯಾದರು.
ಈ ಮಧ್ಯೆ ದ್ರೌಪದಿ ಮುರ್ಮು ಅವರಿಗೆ ಶಿವಸೇನೆಯೂ ಬೆಂಬಲ ವ್ಯಕ್ತಪಡಿಸಿದ್ದು, ಹೀಗಾಗಿ ಯಶ್ವಂತ್‌ ಸಿನ್ಹಾ ಅವರು ಶನಿವಾರ ಮಾಹಾರಾಷ್ಟ್ರದ ಭೇಟಿಯನ್ನು ರದ್ದುಗೊಳಿಸಿದ್ದಾರೆ. ಸಿನ್ಹಾ ಎಂವಿಎ ಶಾಸಕರನ್ನು ಭೇಟಿಯಾಗಲು ಇಂದು, ಶನಿವಾರ ಮಹಾರಾಷ್ಟ್ರಕ್ಕೆ ತೆರಳಬೇಕಿತ್ತು. ಆದರೆ ಈ ಭೇಟಿ ಇದೀಗ ರದ್ದಾಗಿದೆ ಎಂದು ಮೂಲಗಳು ತಿಳಿಸಿವೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement