ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಒಡೆತನದ ಆರ್ಆರ್ ನಗರದಲ್ಲಿರುವ ನ್ಯಾಶನಲ್ ಹಿಲ್ ವ್ಯೂ ಪಬ್ಲಿಕ್ ಶಾಲೆಗೆ ಸೋಮವಾರ ಹುಚ್ಚಾ ವೆಂಕಟ್ ಹೆಸರಿನ ಇ-ಮೇಲ್ ಮೂಲಕ ಬೆದರಿಕೆ ಹಾಕಿದ್ದ ಆರೋಪಿ ಅದೇ ಶಾಲೆಯ ವಿದ್ಯಾರ್ಥಿ ಎಂದು ಹೇಳಲಾಗಿದೆ.
ರಾಜರಾಜೇಶ್ವರಿ ನಗರದಲ್ಲಿ ಡಿ.ಕೆ ಶಿವಕುಮಾರ್ ಒಡೆತನದ ಹಿಲ್ಸ್ ವ್ಯೂವ್ ಪಬ್ಲಿಕ್ ಶಾಲೆಗೆ ನಿನ್ನೆ ಹುಚ್ಚ ವೆಂಕಟ್ ಹೆಸರಿನಲ್ಲಿ ಬಾಂಬ್ ಬೆದರಿಕೆ ಮೇಲ್ ಕಳುಹಿಸಲಾಗಿತ್ತು. ಈ ವಿಷಯ ತಿಳಿದು ಪೊಲೀಸರಿಗೆ ಶಾಲಾಡಳಿತ ಮಾಹಿತಿ ಮುಟ್ಟಿಸಿತ್ತು. ಮುಂಜಾಗ್ರತಾ ಕ್ರಮವಾಗಿ ಶಾಲೆಗೆ ಆಗಮಿಸಿದ್ದಂತ ಬಾಂಬ್ ನಿಷ್ಕ್ರೀಯ ದಳದದ ಸಿಬ್ಬಂದಿ ಪರಿಶೀಲಿಸಿದಾಗ ಅದೊಂದು ಹುಸಿ ಬಾಂಬ್ ಬೆದರಿಕೆಯಾಗಿತ್ತು. ಪ್ರಕರಣದ ತನಿಖೆ ವೇಳೆ ಬಾಂಬ್ ಬೆದರಿಕೆ ಹಾಕಿದ್ದು ನ್ಯಾಶನಲ್ ಹಿಲ್ ವ್ಯೂ ಪಬ್ಲಿಕ್ ಸ್ಕೂಲ್ನಲ್ಲಿ ಎಸ್ಎಸ್ಎಲ್ಸಿ ಓದುತ್ತಿದ್ದ ವಿದ್ಯಾರ್ಥಿಯಿಂದಲೇ ಈ ಕೃತ್ಯ ಎಂಬುದು ಗೊತ್ತಾಗಿದೆ, ಜುಲೈ 21 ರಂದು 10ನೇ ತರಗತಿಯ ಮೊದಲನೇ ಪರೀಕ್ಷೆ ಪರೀಕ್ಷೆಯನ್ನು ಮುಂದೂಡುವ ಸಲುವಾಗಿ ವಿದ್ಯಾರ್ಥಿ ಈ ರೀತಿ ಪ್ಲ್ಯಾನ್ ಮಾಡಿದ್ದ ಎಂದು ವಿಚಾರ ತನಿಖೆಯ ವೇಳೆ ಬೆಳಕಿಗೆ ಬಂದಿದೆ ಎನ್ನಲಾಗಿದ್ದು, ಪೊಲೀಸರು ಹುಡುಗನನ್ನು ವಿಚಾರಣೆ ನಡೆಸಿ, ಬಾಲ ಅಪರಾಧಿಗಳ ಪುನಶ್ಚೇತನ ಕೇಂದ್ರಕ್ಕೆ ಕಳುಹಿಸಿದ್ದಾರೆ.
ಘಟನೆ ಸಂಬಂಧ ಆರ್ಆರ್ ನಗರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ನಿಮ್ಮ ಕಾಮೆಂಟ್ ಬರೆಯಿರಿ