ರಾಜ್ಯದಲ್ಲಿ ದೈನಂದಿನ ಕೊರೊನಾ ಪ್ರಕರಣ ಮತ್ತಷ್ಟು ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಮತ್ತಷ್ಟು ಏರಿಕೆ ಕಂಡಿದೆ. ರಾಜ್ಯದಲ್ಲಿ ಇಂದು ಬುಧವಾರ ಹೊಸದಾಗಿ 1,478 ಕೊರೊನಾ ಪ್ರಕರಣಗಳು ದಾಖಲಾಗಿವೆ. ಆದರೆ ಯಾವುದೇ ಸಾವು ಸಂಭವಿಸಿಲ್ಲ. ಇದೇವೇಳೆ ರಾಜ್ಯದಲ್ಲಿ 1,229 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ನಿನ್ನೆ ಮಂಗಳವಾರ ರಾಜ್ಯದಲ್ಲಿ 1,151 ಪ್ರಕರಣಗಳು ವರದಿಯಾಗಿತ್ತು. ಇಂದು 327 ಕೇಸ್ ಹೆಚ್ಚಳಗೊಂಡು 1,478ಕ್ಕೆ ಏರಿಕೆ ಕಂಡಿದೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 7,866ಕ್ಕೆ ತಲುಪಿದೆ. ಪಾಸಿಟಿವಿಟಿ ರೇಟ್ 4.56ಕ್ಕೆ ಜಿಗಿದಿದೆ. ಬೆಂಗಳೂರು ನಗರದಲ್ಲಿ1,251 ಪ್ರಕರಣ ಪತ್ತೆಯಾಗುವ ಮೂಲಕ ನಿನ್ನೆಗಿಂತ 238 ಪ್ರಕರಣ ಹೆಚ್ಚಳವಾಗಿದೆ. ಏರಿಕೆಯಾಗಿದೆ. ಬೆಂಗಳೂರು ನಗರದಲ್ಲಿ 1,088 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ನಗರದ ಸಕ್ರಿಯ ಪ್ರಕರಣಗಳ ಸಂಖ್ಯೆ 7,064ಕ್ಕೆ ತಲುಪಿದೆ. .

ರಾಜ್ಯದಲ್ಲಿ 32,363 ಮಾದರಿಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬಾಗಲಕೋಟೆ 15, ಬಳ್ಳಾರಿ 12, ಬೆಳಗಾವಿ 15, ಬೆಂಗಳೂರು ಗ್ರಾಮಾಂತರ 32, ಬೆಂಗಳೂರು ನಗರ 1,251, ಬೀದರ್ 4, ಚಾಮರಾಜನಗರ 7, ಚಿಕ್ಕಬಳ್ಳಾಪುರ 3, ಚಿಕ್ಕಮಗಳೂರು 8, ಚಿತ್ರದುರ್ಗ 1, ದಕ್ಷಿಣ ಕನ್ನಡ 8, ದಾವಣಗೆರೆ 2, ಧಾರವಾಡ 18, ಗದಗ 0, ಹಾಸನ 8, ಹಾವೇರಿ 0, ಕಲಬುರಗಿ 8, ಕೊಡಗು 2, ಕೋಲಾರ 13, ಕೊಪ್ಪಳ 2, ಮಂಡ್ಯ 6, ಮೈಸೂರು 24, ರಾಯಚೂರು 1, ರಾಮನಗರ 2, ಶಿವಮೊಗ್ಗ 6, ತುಮಕೂರು 9, ಉಡುಪಿ 8, ಉತ್ತರ ಕನ್ನಡ 10, ವಿಜಯಪುರ 6 ಮತ್ತು ಯಾದಗಿರಿಯಲ್ಲಿ 1 ಸೋಂಕು ದಾಖಲಾಗಿದೆ.

ಪ್ರಮುಖ ಸುದ್ದಿ :-   ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ದಾಖಲು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement