ಬೈಂದೂರು: ಭೀಕರ ಅಪಘಾತದಲ್ಲಿ ಅತೀ ವೇಗದಿಂದ ಬಂದ ಅಂಬುಲೈನ್ಸ್ ನಿಯಂತ್ರಣ ತಪ್ಪಿದ ಪರಿಣಾಮ ಶಿರೂರು ಟೋಲ್ ಸಮೀಪದ ಕಂಬಕ್ಕೆ, ಡಿಕ್ಕಿ ಹೊಡೆದು ಪಲ್ಟಿಯಾಗಿ ನಾಲ್ವರು ಸಾವಿಗೀಡಾಗಿದ್ದಾರೆ. ಟೋಲ್ ಸಿಬ್ಬಂದಿಯೂ ಗಂಭೀರವಾಗಿ ಗಾಯಗೊಂಡಿದ್ದಾರೆ.
ದೂರದಿಂದ ಆಂಬುಲೆನ್ಸ್ ಬರುತ್ತಿದ್ದ ಸದ್ದು ಕೇಳಿ ಟೋಲ್ ಗೇಟ್ನಲ್ಲಿದ್ದ ಮೂವರು ಆಂಬುಲೆನ್ಸ್ ಸರಾಗವಾಗಿ ಹೋಗಲೆಂದು ಮಳೆಯಲ್ಲೇ ಹೊರಗೆ ಓಡಿ ಬಂದು ಬ್ಯಾರಿಕೇಡ್ಗಳನ್ನು ತೆಗೆಯುತ್ತಿದ್ದಾಗ ನಿಯಂತ್ರಣ ತಪ್ಪಿ ವೇಗವಾಗಿ ವಾಲುತ್ತ ಬಂದ ಆಂಬುಲೆನ್ಸ್ ಪಲ್ಟಿ ಹೊಡೆದು ಟೋಲ್ಗೆ ಬಂದು ಅಪ್ಪಳಿಸಿದೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಟೋಲ್ ಗೇಟ್ ಬಳಿ ಈ ಭಯಂಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಟೋಲ್ ಸಿಬ್ಬಂದಿಯೂ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ.ಡಿಕ್ಕಿಯ ರಭಸಕ್ಕೆ ಆಂಬುಲೆನ್ಸ್ನಲ್ಲಿ ಇದ್ದವರು ಹೊರಗೆ ಎಸೆಯಲ್ಪಟ್ಟಿದ್ದಾರೆ.
ಭೀಕರ ಅಪಘಾತದಲ್ಲಿ ರೋಗಿ, ರೋಗಿಯ ಪತ್ನಿ ಹಾಗೂ ಆಂಬುಲೆನ್ಸ್ ಸಿಬ್ಬಂದಿ ಸೇರಿನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಆಂಬುಲೆನ್ಸ್ನಲ್ಲಿ ಒಟ್ಟು ಏಳು ಜನ ಪ್ರಯಾಣಿಸುತ್ತಿದ್ದರೆಂದು ಹೇಳಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ