ಬೆಂಗಳೂರು: ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್ಮೆಂಟ್ ತಡೆಗೋಡೆ ತಡರಾತ್ರಿ ಕುಸಿದು ನಾಲ್ವರು ಕಾರ್ಮಿಕರು ಮೃತಪಟ್ಟ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ತಿರುಮಲಶೆಟ್ಟಿಹಳ್ಳಿ ಬಳಿಯ ಸೌಖ್ಯ ಕೈಗಾರಿಕಾ ಪ್ರದೇಶದಲ್ಲಿ ಸಂಭವಿಸಿದ ಬಗ್ಗೆ ವರದಿಯಾಗಿದೆ.
ಬುಧವಾರ ರಾತ್ರಿ ಸುರಿದ ಮಳೆಯಿಂದಾಗಿ ಕಾಂಪೌಂಡ್ ಕೂಲಿ ಕಾರ್ಮಿಕರು ಮಲಗಿದ್ದ ಶೆಡ್ ಮೇಲೆಯೇ ಗೋಡೆ ಕುಸಿದು ಬಿದ್ದಿದೆ. ಉತ್ತರ ಭಾರತ ಮೂಲದ 8 ಕಾರ್ಮಿಕರು ಶೆಡ್ನಲ್ಲಿ ಮಲಗಿದ್ದರು. ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ಮನೋಜ್ ಕುಮಾರ್ ಸದಯ್( 35), ರಾಮಕುಮಾರ್ ಸದಯ್ (25), ನಿತೀಶಕುಮಾರ್ ಸದಯ್ (22) ಸೇರಿ ನಾಲ್ವರು ಮೃತಪಟ್ಟಿದ್ದಾರೆ. ಮತ್ತೊಬ್ಬರ ಹೆಸರು ತಿಳಿದುಬರಬೇಕಿದೆ. ಶೆಡ್ನಲ್ಲಿದ್ದ ಇನ್ನೂ ನಾಲ್ವರಿಗೆ ಗಾಯಗಳಾಗಿದ್ದು, ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ರವಾನಿಸಲಾಗಿದೆ.
ಶೆಡ್ ಪಕ್ಕದಲ್ಲೇ ಹುಡಾನ್ ವೇರ್ ಹೌಸ್ನ ತಡೆಗೋಡೆಗೆ ಹೊಂದಿಕೊಂಡಂತೆ ಶೆಡ್ ನಿರ್ಮಾಣ ಮಾಡಲಾಗಿತ್ತು. ತಿರುಮಲಶೆಟ್ಟಿಹಳ್ಳಿ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ