ಮದುವೆ ಆರತಕ್ಷತೆ ವೇಳೆ‌ ಹೃದಯಾಘಾತದಿಂದ ವರ ಸಾವು

ಹೊಸಪೇಟೆ: ಮದುವೆ ಆರತಕ್ಷತೆ ಸಮಾರಂಭದಲ್ಲಿ ವರನಿಗೆ ತ್ರೀವ ಎದೆನೋವು‌ ಕಾಣಿಸಿಕೊಂಡು, ಕುಸಿದು‌ ಬಿದ್ದು ಮೃತಪಟ್ಟ ದುರ್ಘಟನೆ ತಾಲೂಕಿನ ಪಾಪಿನಾಯಕಹಳ್ಳಿ ಗ್ರಾಮದಲ್ಲಿ ಬುಧವಾರ ನಡೆದ ಬಗ್ಗೆ ವರದಿಯಾಗಿದೆ.
ಹೊನ್ನೂರು ಸ್ವಾಮಿ (26)ಹೃದಯಾಘಾತದಿಂದ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಎದೆ ನೋವಿನಿಂದ ಕುಸಿದು ಬಿದ್ದ ವರ ಅಸ್ವಸ್ಥಗೊಂಡ ಹೊನ್ನೂರಸ್ವಾಮಿಯನ್ನು ಕೂಡಲೇ ನಗರದ ಖಾಸಗಿ ಆಸ್ಪತ್ರೆಗೆ ಕರೆದ್ಯೊಯಲಾಯಿತು. ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲು ಖಾಸಗಿ ವೈದ್ಯರು, ಸಲಹೆ ನೀಡಿದ್ದರು. ಅಲ್ಲಿಂದ ಸರ್ಕಾರಿ ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆಯೇ ಮೃತಪಟ್ಟಿದ್ದಾರೆ.

ಬುಧವಾರ ಗ್ರಾಮದ ಸುಡುಗಾಡಪ್ಪನ ದೇವಸ್ಥಾನದಲ್ಲಿ ಹೊನ್ನೂರಸ್ವಾಮಿ ವಿವಾಹವಾಗಿದ್ದರು. ನಂತರ ಆರತಕ್ಷತೆ ವೇಳೆ ಹೊನ್ನೂರ ಸ್ವಾಮಿ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ವೇದಿಕೆಯಲ್ಲಿಯೇ ತೊಂದರೆ ಅನುಭವಿಸಿದ್ದಾರೆ. ಕೂಡಲೇ ಅಲ್ಲಿದ್ದವರು ಸಮೀಪದಲ್ಲಿಯೇ ಇರುವ ವೈದ್ಯರ ಬಳಿ ಕರೆದುಕೊಂಡು ಹೋಗಿದ್ದಾರೆ. ಅದಾಗಲೇ ಹೊನ್ನೂರ ಸ್ವಾಮಿ ಎಚ್ಚರ ತಪ್ಪಿದ್ದಾರೆ. ಅವರನ್ನು ಪರೀಕ್ಷೆ ಮಾಡಿದ ವೈದ್ಯರು ಹೊಸಪೇಟೆಯಲ್ಲಿನ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಎಂದು ಸಲಹೆ ನೀಡಿದ್ದಾರೆ. ಆದರೆ ಅಲ್ಲಿಗೆ ಹೋಗುವಷ್ಟರಲ್ಲಿ ಹೊನ್ನೂರ ಸ್ವಾಮಿ ಅವರ ಪ್ರಾಣಪಕ್ಷಿ ಹಾರಿಹೋಗಿದೆ.

ಪ್ರಮುಖ ಸುದ್ದಿ :-   ಕರ್ನಾಟಕದ ಈ ಜಿಲ್ಲೆಗಳಲ್ಲಿ 3-4 ದಿನ ಬಿಸಿಗಾಳಿ : ಹವಾಮಾನ ಇಲಾಖೆ ಎಚ್ಚರಿಕೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement